Homeಮುಖಪುಟರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ 'ಉದ್ಯೋಗ' ಕಸಿದುಕೊಂಡ ಬಿಜೆಪಿ ಸರಕಾರ

ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲಿ ಹಿಂದಿನ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯನ್ನು ಕೊನೆಗೊಳಿಸಿದ್ದು, 4,000ಕ್ಕೂ ಹೆಚ್ಚು ಯುವಕರು ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯವು 5,000 ರಾಜೀವ್ ಗಾಂಧಿ ಯುವ ಮಿತ್ರರಿಗೆ ಉದ್ಯೋಗ ನೀಡಿತ್ತು. ಇದೀಗ ಯೋಜನೆಯನ್ನು ಕೊನೆಗೊಳಿಸಿರುವುದರಿಂದ ಯೋಜನೆಯಡಿಯಲ್ಲಿ ಯುವಕರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.  ಸರಕಾರದ ನಿರ್ಧಾರದ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ಪ್ರಚಾರ ಮಾಡಬೇಕಿತ್ತು. ಈ ಯೋಜನೆಯಡಿ ಉದ್ಯೋಗ ಪಡೆದ ಯುವಕರಿಗೆ ಪ್ರತಿ ತಿಂಗಳು ಸುಮಾರು 17,500 ರೂ. ವೇತನ ಸಿಗುತ್ತಿತ್ತು. ಯೋಜನೆಯನ್ನು ಇದೀಗ ಕೇಂದ್ರ ಸರಕಾರ ರದ್ದುಪಡಿಸಿದ ಕಾರಣ ಸುಮಾರು 4,200 ಯುವಕರು ನಿರುದ್ಯೋಗಿಗಳಾಗಿದ್ದಾರೆ.  ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ಸಿಕ್ಕ ಉದ್ಯೋಗದಿಂದ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಸುಮಾರು ಒಂದು ತಿಂಗಳಿನಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಸರ್ಕಾರ ನಮ್ಮ ಮನವಿಗಳನ್ನು ಸ್ವೀಕರಿಸಿಲ್ಲ. ಗುತ್ತಿಗೆ ನೌಕರರಾಗಿ ಸರ್ಕಾರ ನಮ್ಮನ್ನು ಸೇರಿಸಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ ಎಂದು ಪ್ರತಿಭಟನಾನಿರತ  25 ವರ್ಷದ ದಿಲೀಪ್ ಸಪೇರಾ ಹೇಳಿದ್ದಾರೆ.

2021-22ರ ಬಜೆಟ್ ಭಾಷಣದಲ್ಲಿ ಮಾಜಿ ಸಿಎಂ ಗೆಹ್ಲೋಟ್ ಅವರು ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯನ್ನು ಘೋಷಿಸಿದ್ದರು. ಇದಕ್ಕೆ ಬಿಜೆಪಿಯು ವಿರೋಧ ಪಕ್ಷದಲ್ಲಿದ್ದಾಗ ಆಕ್ಷೇಪಣೆಗಳನ್ನು ಎತ್ತಿತ್ತು.  ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಪ್ರಚಾರ ಮಾಡಲು ಯುವಮಿತ್ರರನ್ನು ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಜೈಪುರದಲ್ಲಿ ಯುವ ಮಿತ್ರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಯೋಜನೆಯ ರದ್ದತಿಯನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಐದು ಸಾವಿರ ಯುವಕರನ್ನು ಅವರ ಕೆಲಸದಿಂದ ತೆಗೆದುಹಾಕಲಾಗಿದೆ. ಸರಕಾರದ ಈ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಸರಕಾರ ಮರು ಪರಿಶೀಲಿಸಿ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಸರ್ಕಾರ ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಉದ್ಯೋಗದ ಭರವಸೆಗಳನ್ನು ಮರೆತಿದೆ. ಈಗ ಯುವಕರನ್ನು ಉದ್ಯೋಗದಿಂದಲೇ ತೆಗೆದುಹಾಕಿದೆ. ಯುವ ಸಮುದಾಯವನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುವುದಾಗಿ ಸಚಿನ್‌ ಪೈಲೆಟ್‌ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸವರ್ಣಿಮ್ ಚತುರ್ವೇದಿ ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ಸರಕಾರ, ಹಿಂದಿನ ಗೆಹ್ಲೋಟ್ ಸರ್ಕಾರ ತಂದ ಕಲ್ಯಾಣ ಯೋಜನೆಗಳನ್ನು ನಿರ್ಲಕ್ಷಿಸಿ ಮಿಸಾ ಕೈದಿಗಳಿಗೆ ಪಿಂಚಣಿಯನ್ನು ಮರಳಿ ತರುವ ಮೂಲಕ ಬಿಜೆಪಿ ತನ್ನ ಸಿದ್ಧಾಂತದ ಜನರಿಗೆ ಲಾಭ ನೀಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಆದೇಶವನ್ನು ಹಿಂಪಡೆಯಬೇಕು ಮತ್ತು ಉದ್ಯೋಗಗಳನ್ನು ಮತ್ತೆ ನೀಡಬೇಕು ಎನ್ನುವುದು ನಮ್ಮ ಪ್ರಾಥಮಿಕ ಬೇಡಿಕೆಯಾಗಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಇದನ್ನು ಓದಿ: ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...