Homeಮುಖಪುಟರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

ರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

- Advertisement -
- Advertisement -

ರಾಜಸ್ಥಾನದ ಜೋಧ್‌ಪುರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಟ್ಲೋಲ್ ಪ್ಲಾಜಾದಲ್ಲಿ ಪ್ರಯಾಣಿಕರಿಗೆ ಕಾರು ತಡೆದು ಟೋಲ್‌ ಸಿಬ್ಬಂದಿಗಳ ಗುಂಪು ಹಲ್ಲೆ ನಡೆಸಿದ್ದು, ಈ ಕುರಿತ ಶಾಕಿಂಗ್‌ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬುಧವಾರ ರಾತ್ರಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಪಾಲಿ ಜಿಲ್ಲೆಯ ಬಗ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸತ್ಯನಾರಾಯಣ ಗುರ್ಜರ್ ಅವರು ಕಪ್ಪು ಮಹೀಂದ್ರಾ ಸ್ಕಾರ್ಪಿಯೊ ಎಸ್‌ಯುವಿಯಲ್ಲಿ ತಮ್ಮ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರಿಗೆ ಜಾದನ್ ಟೋಲ್ ಬೂತ್‌ನಲ್ಲಿ ಕೆಲ ಸಿಬ್ಬಂದಿಗಳ ಜೊತೆ ಸಣ್ಣ ವಾಗ್ವಾದ ನಡೆದಿತ್ತು. ಬಳಿಕ ಅವರು ಅಲ್ಲಿಂದ ತಮ್ಮ ಪ್ರಯಾಣವನ್ನು ಮುಂದುವರಿಸಿದ್ದರು. ಆದರೆ ಕಾರು ಖೇಜರ್ಲಿ ಟೋಲ್ ಬೂತ್ ತಲುಪಿದಾಗ ಸುಮಾರು 10-12 ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದುಕೊಂಡು ಕಾರಿನ ಮೇಲೆ ಮತ್ತು ಅದರಲ್ಲಿದ್ದ ಪ್ರಯಾಣಿಕರ ಮೇಲೆ ದಾಳಿ ನಡೆಸಿದ್ದಾರೆ.

ಇಡೀ ಘಟನೆ ಟೋಲ್ ಪ್ಲಾಜಾದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟೋಲ್ ಪ್ಲಾಜಾ ನಿರ್ವಾಹಕರ ದಾಳಿಯಲ್ಲಿ ಕಾರು ಚಲಾಯಿಸುತ್ತಿದ್ದ ನಾರಾಯಣ್ ಲಾಲ್ ಅವರಿಗೆ ಗಂಭೀರವಾಗಿ ಗಾಯಗಳಾಗಿದೆ.

ಆರೋಪಿಗಳ ವಿರುದ್ಧ ಲೂನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಟೋಲ್ ಪ್ಲಾಜಾ ನಿರ್ವಾಹಕರು ಯುವಕರ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಥಳಿಸಿದ್ದಾರೆ ಮತ್ತು ಘಟನೆಯ ಸಮಯದಲ್ಲಿ ಕಾರಿನಲ್ಲಿಟ್ಟಿದ್ದ 2.9 ಲಕ್ಷ ರೂ.ಗಳನ್ನು ದೋಚಿದ್ದಾರೆ. ಸತ್ಯನಾರಾಯಣ ಅವರು ಧರಿಸಿದ್ದ ಚಿನ್ನದ ಸರವನ್ನೂ ಆರೋಪಿಗಳು ಒಡೆದಿದ್ದಾರೆ. ಈ ಬಗ್ಗೆ ವಿಷ್ಣು, ಮಂಜು, ರವಿ ಬಬಲ್, ಸುರೇಶ್ ಅಲಿಯಾಸ್ ಸೂಪಾ, ಪ್ರದೀಪ್ ಮತ್ತು ರಾಕೇಶ್ ವಿರುದ್ಧ ದೂರು ಸಲ್ಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಬಂಧನ ನಡೆದಿಲ್ಲ. ಟೋಲ್ ಪ್ಲಾಜಾದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಮತ್ತು ಮೊದಲು ಮಾತಿನ ಚಕಮಕಿ ನಡೆದ ಟೋಲ್ ಪ್ಲಾಜಾದಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಟೋಲ್ ನಿರ್ವಾಹಕರೇ ದಾಳಿಕೋರರು, ಯುವಕರನ್ನು ಅಮಾನುಷವಾಗಿ ಥಳಿಸಿ ಅವರ ಕಾರನ್ನು ಜಖಂಗೊಳಿಸಿದ್ದಾರೆ. ಈ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿದೆ.

ರಾಜಸ್ಥಾನದಲ್ಲಿ ಇತ್ತೀಚೆಗೆ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್‌ ಸಿಂಗ್‌ ಗೊಗಾಮೆಡಿ ಅವರ ಹತ್ಯೆ ನಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ನಡೆದ ಹತ್ಯೆ ರಾಜ್ಯದಲ್ಲಿ ಭಾರೀ ಪ್ರತಿಭಟನೆ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಇದೀಗ ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ಟೋಲ್‌ ಸಿಬ್ಬಂದಿಗಳು ನಡೆಸಿದ ಗುಂಪು ಹಲ್ಲೆ ಮತ್ತೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...