Homeಮುಖಪುಟ'ನನ್ನ ಬಂಧನದ ಹಿಂದೆ ರಾಜಭವನದ ಪಾತ್ರವೂ ಇದೆ..'; ಸದನದಲ್ಲಿ ಹೇಮಂತ್ ಸೊರೇನ್ ಆರೋಪ

‘ನನ್ನ ಬಂಧನದ ಹಿಂದೆ ರಾಜಭವನದ ಪಾತ್ರವೂ ಇದೆ..’; ಸದನದಲ್ಲಿ ಹೇಮಂತ್ ಸೊರೇನ್ ಆರೋಪ

- Advertisement -
- Advertisement -

ಅಕ್ರಮ ಭೂ ಹಗರಣದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಇಂದು ಬಿಗಿ ಭದ್ರತೆಯ ನಡುವೆ ವಿಧಾನಸಭೆಗೆ ಆಗಮಿಸಿದರು. ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸ ಮತವನ್ನು ಎದುರಿಸುತ್ತಿದ್ದಾರೆ.

ವಿಧಾನಸಭೆಯನ್ನುದ್ದೇಶಿಸಿ ಮಾತನಾಡಿದ ಸೊರೇನ್, ‘ನನ್ನ ಬಂಧನದಲ್ಲಿ ರಾಜಭವನದ ಪಾತ್ರವೂ ಇದೆ’ ಎಂದು ಆರೋಪಿಸಿದರು. ‘ಜನವರಿ 31ರ ರಾತ್ರಿ ದೇಶದಲ್ಲಿ ಮೊದಲ ಬಾರಿಗೆ, ಒಬ್ಬ ಮುಖ್ಯಮಂತ್ರಿಯನ್ನು ಬಂಧಿಸಲಾಯಿತು… ಈ ಘಟನೆಯಲ್ಲಿ ರಾಜಭವನವೂ ಭಾಗಿಯಾಗಿದೆ ಎಂದು ನಾನು ನಂಬುತ್ತೇನೆ’ ಎಂದು ಅವರು ಹೇಳಿದರು.

‘ಭಾರತದ ಇತಿಹಾಸದಲ್ಲಿ ಈ ದಿನ ಕಪ್ಪು ಅಧ್ಯಾಯವಾಗಿ ನೆನಪಿನಲ್ಲಿ ಉಳಿಯುತ್ತದೆ’ ಎಂದು ಸೋರೆನ್ ಹೇಳಿದರು. ‘ಜಾರ್ಖಂಡ್‌ ವಿಧಾನಸಭೆಯಲ್ಲಿ ಆಡಳಿತಾರೂಢ ಮೈತ್ರಿಕೂಟಕ್ಕೆ ಚಂಪೈನ್ ಸೊರೇನ್ ಸಂಪೂರ್ಣ ಬೆಂಬಲವನ್ನು ಹೊಂದಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಂಚಿಯ ವಿಶೇಷ ನ್ಯಾಯಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯನಿರ್ವಾಹಕ ಅಧ್ಯಕ್ಷ ಹೇಮಂತ್ ಸೊರೇನ್ ಅವರಿಗೆ ವಿಶ್ವಾಸ ಮತದಲ್ಲಿ ಭಾಗವಹಿಸಲು ಅವಕಾಶ ನೀಡಿತು. ‘ನಾನು ವಿಧಾನಸಭೆಯ ಸದಸ್ಯನಾಗಿದ್ದೇನೆ ಮತ್ತು ತನ್ನ ಪಕ್ಷಕ್ಕೆ ನಿರ್ಣಾಯಕವಾದ ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ’ ಎಂದು ಸೊರೇನ್ ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು.

ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಮೂರು ದಿನಗಳ ನಂತರ, ಜಾರ್ಖಂಡ್ ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ ಅವರು ಕಳೆದ ಶುಕ್ರವಾರ ಜಾರ್ಖಂಡ್‌ನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

₹600 ಕೋಟಿ ಭೂ ಹಗರಣ ಮತ್ತು ಅದರ ಆದಾಯದ ಲಾಂಡರಿಂಗ್‌ನಲ್ಲಿ ಹೇಮಂತ್ ಸೊರೇನ್ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಭೂ ಹಗರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ ‘ದೊಡ್ಡ ದಂಧೆ’ಯನ್ನು ಒಳಗೊಂಡಿದೆ ಎಂದು ಇಡಿ ಆರೋಪಿಸಿದೆ.

ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ 2011 ರ ಬ್ಯಾಚ್ ಐಎಎಸ್ ಅಧಿಕಾರಿ ಛಾವಿ ರಂಜನ್ ಸೇರಿದಂತೆ ಈ ಪ್ರಕರಣದಲ್ಲಿ ಸಂಸ್ಥೆ ಇದುವರೆಗೆ 14 ಜನರನ್ನು ಬಂಧಿಸಿದೆ.

ಇದನ್ನೂ ಓದಿ; ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...