Homeಮುಖಪುಟರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ...

ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

ರಾಜ್‌ದೀಪ್ ಸರ್ದೇಸಾಯಿ ಪೋಸ್ಟ್ ಮಾಡಿದ್ದ, ಇಲ್ಮಿ ಮತ್ತು ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ನಡುವಿನ ವಾಗ್ವಾದವನ್ನು ತೋರಿಸುವ 18 ಸೆಕೆಂಡುಗಳ ವಿಡಿಯೋ ತುಣುಕನ್ನು ತೆಗೆದು ಹಾಕುವಂತೆ ನಿರ್ದೇಶಿಸಿದ್ದ ಈ ಹಿಂದಿನ ಮಧ್ಯಂತರ ಆದೇಶವನ್ನು ನ್ಯಾಯಾಲಯ ಸಮರ್ಥಿಸಿಕೊಂಡಿದೆ.

“ಇಲ್ಮಿ ಚರ್ಚಾ ಕಾರ್ಯಕ್ರಮದಿಂದ ಹೊರನಡೆದ ನಂತರವೂ ವಿಡಿಯೋ ರೆಕಾರ್ಡಿಂಗ್ ಮಾಡಿರುವುದು, ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಲು ಸಾಧ್ಯವಿಲ್ಲ” ಎಂದಿದೆ.

ವಿಡಿಯೋ ಪತ್ರಕರ್ತ ತನ್ನ ನಡವಳಿಕೆ ಮೂಲಕ ನನಗೆ  ಕೋಪ ಬರಿಸಿದರು ಎಂಬ ಇಲ್ಮಿ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಪತ್ರಕರ್ತನನ್ನು ವಿಕೃತ, ಕಾಮುಕ ಎಂದು ಹೇಳುವುದು ಸಮರ್ಥನೀಯವಲ್ಲ ಎಂದಿದೆ. ಸರ್ದೇಸಾಯಿ ಪೋಸ್ಟ್ ಮಾಡಿದ್ದ ವಿಡಿಯೋವನ್ನು ತಿರುಚಲಾಗಿದೆ ಎಂಬ ಇಲ್ಮಿ ಆರೋಪನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ತನ್ನ ಮನೆಯಲ್ಲಿದ್ದ ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ಮೇಲೆ ಇಲ್ಮಿ ದೌರ್ಜನ್ಯವೆಸಗಿದ್ದಾರೆ ಎಂದು ರಾಜ್‌ದೀಪ್ ಸರ್ದೇಸಾಯಿ ಎಕ್ಸ್ ಪೋಸ್ಟ್ ಮೂಲಕ ಮಾಡಿದ್ದ ಆರೋಪವನ್ನು ವಜಾಗೊಳಿಸಬೇಕೇ ಎಂದು ನ್ಯಾಯಾಲಯ ಪರಿಶೀಲಿಸಿದೆ.

“ಇಲ್ಮಿ ಮೈಕ್ ಕಿತ್ತು ಹಾಕಿದ್ದಾರೆ, ಪತ್ರಕರ್ತನನ್ನು ಮನೆಯಿಂದ ಹೊರದಬ್ಬಿದ್ದಾರೆ” ಎಂದು ಹೇಳುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ರಾಜ್‌ದೀಪ್ ಅವರ ಅದೇ ಪೋಸ್ಟ್‌ನ ಉಳಿದ ಭಾಗಗಳು (ನಮ್ಮ ಪತ್ರಕರ್ತನನ್ನು ನಿಂದಿಸಲಾಗಿದೆ, ಕೆಟ್ಟ ನಡವಳಿಕೆಗೆ ಕ್ಷಮೆಯಿಲ್ಲ) ಪ್ರಾಥಮಿಕವಾಗಿ ರದ್ದುಗೊಳಿಸಬೇಕಿಲ್ಲ ಎಂದ ನ್ಯಾಯಾಲಯ, ಅವುಗಳಿಗೆ ಕೆಲವು ಆಧಾರಗಳಿವೆ ಎಂದು ತೋರುತ್ತದೆ ಎಂದಿದೆ.

ಏನಿದು ಪ್ರಕರಣ?

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...