Homeಮುಖಪುಟರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ...

ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

ರಾಜ್‌ದೀಪ್ ಸರ್ದೇಸಾಯಿ ಪೋಸ್ಟ್ ಮಾಡಿದ್ದ, ಇಲ್ಮಿ ಮತ್ತು ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ನಡುವಿನ ವಾಗ್ವಾದವನ್ನು ತೋರಿಸುವ 18 ಸೆಕೆಂಡುಗಳ ವಿಡಿಯೋ ತುಣುಕನ್ನು ತೆಗೆದು ಹಾಕುವಂತೆ ನಿರ್ದೇಶಿಸಿದ್ದ ಈ ಹಿಂದಿನ ಮಧ್ಯಂತರ ಆದೇಶವನ್ನು ನ್ಯಾಯಾಲಯ ಸಮರ್ಥಿಸಿಕೊಂಡಿದೆ.

“ಇಲ್ಮಿ ಚರ್ಚಾ ಕಾರ್ಯಕ್ರಮದಿಂದ ಹೊರನಡೆದ ನಂತರವೂ ವಿಡಿಯೋ ರೆಕಾರ್ಡಿಂಗ್ ಮಾಡಿರುವುದು, ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಲು ಸಾಧ್ಯವಿಲ್ಲ” ಎಂದಿದೆ.

ವಿಡಿಯೋ ಪತ್ರಕರ್ತ ತನ್ನ ನಡವಳಿಕೆ ಮೂಲಕ ನನಗೆ  ಕೋಪ ಬರಿಸಿದರು ಎಂಬ ಇಲ್ಮಿ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಪತ್ರಕರ್ತನನ್ನು ವಿಕೃತ, ಕಾಮುಕ ಎಂದು ಹೇಳುವುದು ಸಮರ್ಥನೀಯವಲ್ಲ ಎಂದಿದೆ. ಸರ್ದೇಸಾಯಿ ಪೋಸ್ಟ್ ಮಾಡಿದ್ದ ವಿಡಿಯೋವನ್ನು ತಿರುಚಲಾಗಿದೆ ಎಂಬ ಇಲ್ಮಿ ಆರೋಪನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ತನ್ನ ಮನೆಯಲ್ಲಿದ್ದ ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ಮೇಲೆ ಇಲ್ಮಿ ದೌರ್ಜನ್ಯವೆಸಗಿದ್ದಾರೆ ಎಂದು ರಾಜ್‌ದೀಪ್ ಸರ್ದೇಸಾಯಿ ಎಕ್ಸ್ ಪೋಸ್ಟ್ ಮೂಲಕ ಮಾಡಿದ್ದ ಆರೋಪವನ್ನು ವಜಾಗೊಳಿಸಬೇಕೇ ಎಂದು ನ್ಯಾಯಾಲಯ ಪರಿಶೀಲಿಸಿದೆ.

“ಇಲ್ಮಿ ಮೈಕ್ ಕಿತ್ತು ಹಾಕಿದ್ದಾರೆ, ಪತ್ರಕರ್ತನನ್ನು ಮನೆಯಿಂದ ಹೊರದಬ್ಬಿದ್ದಾರೆ” ಎಂದು ಹೇಳುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ರಾಜ್‌ದೀಪ್ ಅವರ ಅದೇ ಪೋಸ್ಟ್‌ನ ಉಳಿದ ಭಾಗಗಳು (ನಮ್ಮ ಪತ್ರಕರ್ತನನ್ನು ನಿಂದಿಸಲಾಗಿದೆ, ಕೆಟ್ಟ ನಡವಳಿಕೆಗೆ ಕ್ಷಮೆಯಿಲ್ಲ) ಪ್ರಾಥಮಿಕವಾಗಿ ರದ್ದುಗೊಳಿಸಬೇಕಿಲ್ಲ ಎಂದ ನ್ಯಾಯಾಲಯ, ಅವುಗಳಿಗೆ ಕೆಲವು ಆಧಾರಗಳಿವೆ ಎಂದು ತೋರುತ್ತದೆ ಎಂದಿದೆ.

ಏನಿದು ಪ್ರಕರಣ?

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...