Homeಮುಖಪುಟರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ...

ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

ರಾಜ್‌ದೀಪ್ ಸರ್ದೇಸಾಯಿ ಪೋಸ್ಟ್ ಮಾಡಿದ್ದ, ಇಲ್ಮಿ ಮತ್ತು ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ನಡುವಿನ ವಾಗ್ವಾದವನ್ನು ತೋರಿಸುವ 18 ಸೆಕೆಂಡುಗಳ ವಿಡಿಯೋ ತುಣುಕನ್ನು ತೆಗೆದು ಹಾಕುವಂತೆ ನಿರ್ದೇಶಿಸಿದ್ದ ಈ ಹಿಂದಿನ ಮಧ್ಯಂತರ ಆದೇಶವನ್ನು ನ್ಯಾಯಾಲಯ ಸಮರ್ಥಿಸಿಕೊಂಡಿದೆ.

“ಇಲ್ಮಿ ಚರ್ಚಾ ಕಾರ್ಯಕ್ರಮದಿಂದ ಹೊರನಡೆದ ನಂತರವೂ ವಿಡಿಯೋ ರೆಕಾರ್ಡಿಂಗ್ ಮಾಡಿರುವುದು, ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಲು ಸಾಧ್ಯವಿಲ್ಲ” ಎಂದಿದೆ.

ವಿಡಿಯೋ ಪತ್ರಕರ್ತ ತನ್ನ ನಡವಳಿಕೆ ಮೂಲಕ ನನಗೆ  ಕೋಪ ಬರಿಸಿದರು ಎಂಬ ಇಲ್ಮಿ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಪತ್ರಕರ್ತನನ್ನು ವಿಕೃತ, ಕಾಮುಕ ಎಂದು ಹೇಳುವುದು ಸಮರ್ಥನೀಯವಲ್ಲ ಎಂದಿದೆ. ಸರ್ದೇಸಾಯಿ ಪೋಸ್ಟ್ ಮಾಡಿದ್ದ ವಿಡಿಯೋವನ್ನು ತಿರುಚಲಾಗಿದೆ ಎಂಬ ಇಲ್ಮಿ ಆರೋಪನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ತನ್ನ ಮನೆಯಲ್ಲಿದ್ದ ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ಮೇಲೆ ಇಲ್ಮಿ ದೌರ್ಜನ್ಯವೆಸಗಿದ್ದಾರೆ ಎಂದು ರಾಜ್‌ದೀಪ್ ಸರ್ದೇಸಾಯಿ ಎಕ್ಸ್ ಪೋಸ್ಟ್ ಮೂಲಕ ಮಾಡಿದ್ದ ಆರೋಪವನ್ನು ವಜಾಗೊಳಿಸಬೇಕೇ ಎಂದು ನ್ಯಾಯಾಲಯ ಪರಿಶೀಲಿಸಿದೆ.

“ಇಲ್ಮಿ ಮೈಕ್ ಕಿತ್ತು ಹಾಕಿದ್ದಾರೆ, ಪತ್ರಕರ್ತನನ್ನು ಮನೆಯಿಂದ ಹೊರದಬ್ಬಿದ್ದಾರೆ” ಎಂದು ಹೇಳುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ರಾಜ್‌ದೀಪ್ ಅವರ ಅದೇ ಪೋಸ್ಟ್‌ನ ಉಳಿದ ಭಾಗಗಳು (ನಮ್ಮ ಪತ್ರಕರ್ತನನ್ನು ನಿಂದಿಸಲಾಗಿದೆ, ಕೆಟ್ಟ ನಡವಳಿಕೆಗೆ ಕ್ಷಮೆಯಿಲ್ಲ) ಪ್ರಾಥಮಿಕವಾಗಿ ರದ್ದುಗೊಳಿಸಬೇಕಿಲ್ಲ ಎಂದ ನ್ಯಾಯಾಲಯ, ಅವುಗಳಿಗೆ ಕೆಲವು ಆಧಾರಗಳಿವೆ ಎಂದು ತೋರುತ್ತದೆ ಎಂದಿದೆ.

ಏನಿದು ಪ್ರಕರಣ?

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...