Homeಮುಖಪುಟರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ...

ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

ರಾಜ್‌ದೀಪ್ ಸರ್ದೇಸಾಯಿ ಪೋಸ್ಟ್ ಮಾಡಿದ್ದ, ಇಲ್ಮಿ ಮತ್ತು ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ನಡುವಿನ ವಾಗ್ವಾದವನ್ನು ತೋರಿಸುವ 18 ಸೆಕೆಂಡುಗಳ ವಿಡಿಯೋ ತುಣುಕನ್ನು ತೆಗೆದು ಹಾಕುವಂತೆ ನಿರ್ದೇಶಿಸಿದ್ದ ಈ ಹಿಂದಿನ ಮಧ್ಯಂತರ ಆದೇಶವನ್ನು ನ್ಯಾಯಾಲಯ ಸಮರ್ಥಿಸಿಕೊಂಡಿದೆ.

“ಇಲ್ಮಿ ಚರ್ಚಾ ಕಾರ್ಯಕ್ರಮದಿಂದ ಹೊರನಡೆದ ನಂತರವೂ ವಿಡಿಯೋ ರೆಕಾರ್ಡಿಂಗ್ ಮಾಡಿರುವುದು, ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಲು ಸಾಧ್ಯವಿಲ್ಲ” ಎಂದಿದೆ.

ವಿಡಿಯೋ ಪತ್ರಕರ್ತ ತನ್ನ ನಡವಳಿಕೆ ಮೂಲಕ ನನಗೆ  ಕೋಪ ಬರಿಸಿದರು ಎಂಬ ಇಲ್ಮಿ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಪತ್ರಕರ್ತನನ್ನು ವಿಕೃತ, ಕಾಮುಕ ಎಂದು ಹೇಳುವುದು ಸಮರ್ಥನೀಯವಲ್ಲ ಎಂದಿದೆ. ಸರ್ದೇಸಾಯಿ ಪೋಸ್ಟ್ ಮಾಡಿದ್ದ ವಿಡಿಯೋವನ್ನು ತಿರುಚಲಾಗಿದೆ ಎಂಬ ಇಲ್ಮಿ ಆರೋಪನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ತನ್ನ ಮನೆಯಲ್ಲಿದ್ದ ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ಮೇಲೆ ಇಲ್ಮಿ ದೌರ್ಜನ್ಯವೆಸಗಿದ್ದಾರೆ ಎಂದು ರಾಜ್‌ದೀಪ್ ಸರ್ದೇಸಾಯಿ ಎಕ್ಸ್ ಪೋಸ್ಟ್ ಮೂಲಕ ಮಾಡಿದ್ದ ಆರೋಪವನ್ನು ವಜಾಗೊಳಿಸಬೇಕೇ ಎಂದು ನ್ಯಾಯಾಲಯ ಪರಿಶೀಲಿಸಿದೆ.

“ಇಲ್ಮಿ ಮೈಕ್ ಕಿತ್ತು ಹಾಕಿದ್ದಾರೆ, ಪತ್ರಕರ್ತನನ್ನು ಮನೆಯಿಂದ ಹೊರದಬ್ಬಿದ್ದಾರೆ” ಎಂದು ಹೇಳುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ರಾಜ್‌ದೀಪ್ ಅವರ ಅದೇ ಪೋಸ್ಟ್‌ನ ಉಳಿದ ಭಾಗಗಳು (ನಮ್ಮ ಪತ್ರಕರ್ತನನ್ನು ನಿಂದಿಸಲಾಗಿದೆ, ಕೆಟ್ಟ ನಡವಳಿಕೆಗೆ ಕ್ಷಮೆಯಿಲ್ಲ) ಪ್ರಾಥಮಿಕವಾಗಿ ರದ್ದುಗೊಳಿಸಬೇಕಿಲ್ಲ ಎಂದ ನ್ಯಾಯಾಲಯ, ಅವುಗಳಿಗೆ ಕೆಲವು ಆಧಾರಗಳಿವೆ ಎಂದು ತೋರುತ್ತದೆ ಎಂದಿದೆ.

ಏನಿದು ಪ್ರಕರಣ?

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...