Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...