Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...