Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...