Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...