Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...