Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...