Homeಅಂಕಣಗಳುರಾಜೇಂದ್ರ ಚೆನ್ನಿಯವರ 'ಲೋಕವಿಮರ್ಶೆ': ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ರಾಜೇಂದ್ರ ಚೆನ್ನಿಯವರ ‘ಲೋಕವಿಮರ್ಶೆ’: ಅಧಿಕಾರಕ್ಕೆ ಪ್ರತಿರೋಧಿಸಲು ಪ್ರೇರೇಪಿಸುವ ಪ್ರಬಂಧಗಳು

ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ - ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು.

- Advertisement -
- Advertisement -

ರಾಜೇಂದ್ರ ಚೆನ್ನಿ ಕನ್ನಡದ ವಿಶಿಷ್ಟ ಸಂಸ್ಕೃತಿ ಚಿಂತಕರು. ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಾಹಿತ್ಯ ರಚಿಸಿ ವಿಮರ್ಶೆಗಳನ್ನು ಬರೆದಿರುವುದಲ್ಲದೆ, ಪ್ರಸಕ್ತ ಸಾಮಾಜಿಕ ಸನ್ನಿವೇಶದ ಸವಾಲುಗಳನ್ನು ಜಗತ್ತಿನ ವಿವಿಧ ಭಾಗಗಳಲ್ಲಿ ಮೂಡಿರುವ ಸಾಹಿತ್ಯ ಮತ್ತು ಚಿಂತನೆಗಳಿಗೆ ಒರೆಗಚ್ಚಿ ತಮ್ಮ ಬರಹಗಳ ಮೂಲಕ ಪ್ರತಿಕ್ರಿಯೆ ದಾಖಲಿಸುತ್ತಾ ಬಂದಿರುವವರು.

ರಾಜೇಂದ್ರ ಚೆನ್ನಿ ಅವರ ಬರಹದ ಹರವು ಬಹಳ ವಿಸ್ತಾರವಾದದ್ದು. 2004ರಲ್ಲಿ ಬಂದಿದ್ದ ಅವರ ವಿಮರ್ಶಾ ಪ್ರಬಂಧಗಳ ಸಂಕಲನ ‘ನಡುಹಗಲಿನಲ್ಲಿ ಕಂದೀಲುಗಳು’ವಿನಲ್ಲಿ ಬಾಬಾಬುಡನ್‍ಗಿರಿಯಲ್ಲಿ ಹಿಂದುತ್ವದ ಕೋಮುವಾದಿಗಳು ಸೌಹಾರ್ದವನ್ನು ಕೆಡವಲು ನಡೆಸಿದ್ದ ವಿದ್ಯಮಾನಕ್ಕೆ ಪ್ರತಿರೋಧವನ್ನು ದಾಖಲಿಸುವುದರಿಂದ ಹಿಡಿದು, ಕುವೆಂಪು, ಬೇಂದ್ರೆ, ಕಾರಂತ, ಕುವೆಂಪು, ದೇವನೂರು ಮಹದೇವ, ತೇಜಸ್ವಿ, ಕಂಬಾರ ಮುಂತಾದ ಬರಹಗಾರರ ಸಾಹಿತ್ಯದ ಅವಲೋಕನದೊಂದಿಗೆ, ಚಾಮ್‍ಸ್ಕಿ ರಾಜಕೀಯ ಬರಹಗಳ ವಿರಾಟ್ ಕಥನ, ಅನಂತಮೂರ್ತಿ ಮತ್ತು ಶಶಿ ದೇಶಪಾಂಡೆಯವರ ಸಂದರ್ಶನ ಹೀಗೆ ವೈವಿಧ್ಯಮಯವಾದ ಮತ್ತು ಸಂಸ್ಕೃತಿ ಚಿಂತನೆಯ ಬರಹಗಳಿಂದ ಕೂಡಿತ್ತು.

ಈಗ 2020ರ ಕೊನೆಯ ಭಾಗದಲ್ಲಿ ಮೂಡಿರುವ ‘ಲೋಕವಿಮರ್ಶೆ’ ಕೂಡ ಅಂತಹ ವೈವಿಧ್ಯಮಯ ಬರಹಗಳಿಂದ ಕೂಡಿದೆ. ಹೆಸರೇ ಸೂಚಿಸುವಂತೆ ಇಂದಿನ ವರ್ತಮಾನದ ಬಿಕ್ಕಟ್ಟಿಗೆ ಸ್ಪಂದಿಸುವ ಬರಹಗಳನ್ನು ಹೆಚ್ಚೆಚ್ಚು ಒಳಗೊಂಡ ಸಂಕಲನ ಇದು. ಅವರು ಸಾಮಾಜಿಕ ಕಾರ್ಯಕರ್ತರೂ ಆಗಿ ಕೋಮುಸೌಹಾರ್ದ ವೇದಿಕೆ ಸೇರಿದಂತೆ ಮುಂತಾದ ವೇದಿಕೆಗಳಲ್ಲಿ ಕೆಲಸ ಮಾಡಿದ್ದು ತಮ್ಮ ಹಿಂದಿನ ಕೆಲವು ಸಂಕಲನಗಳ ಬರಹಗಳಲ್ಲಿ ಪ್ರತಿಫಲಿಸಿದ್ದಂತೆ, ದಕ್ಷಿಣಾಯನದ ಸಂಚಾಲಕರಾಗಿ ತೀವ್ರ ಬಲಪಂಥೀಯ ರಾಜಕೀಯಕ್ಕೆ ಬದಲಿ ಸೃಷ್ಟಿಸುವ ವೇದಿಕೆಯಾಗಿ ಚೆನ್ನಿಯವರು ನಡೆಸುತ್ತಿರುವ ಚಿಂತನೆಗಳು ಪ್ರಸಕ್ತ ಸಂಕಲನದಲ್ಲಿ ಪ್ರತಿಫಲಿಸಿವೆ.

ಲಂಕೇಶ್, ಮೊಗಳ್ಳಿ ಗಣೇಶ್, ಮೂಡ್ನಾಕೂಡು ಚಿನ್ನಸ್ವಾಮಿ, ಎ ಕೆ ರಾಮಾನುಜನ್ ಮುಂತಾದ ಸಾಹಿತಿಗಳ ಬಗೆಗಿನ ವಿಮರ್ಶಾ ಲೇಖನಗಳ ಜೊತೆಗೆ ಇಂದು ಭಾರತದಲ್ಲಿ ತಲೆದೋರಿರುವ ಸರ್ವಾಧಿಕಾರಿ ಧೋರಣೆಯ ಪ್ರಭುತ್ವಕ್ಕೆ – ಆಡಳಿತ ವ್ಯವಸ್ಥೆಗೆ ಪ್ರತಿಕ್ರಿಯೆಯಾಗಿ ಹಲವು ಪತ್ರಿಕೆಗಳಲ್ಲಿ ಬರೆದಿರುವ ಈ ಲೇಖನಗಳು ಇಂದು ಯುವಜನತೆ ಓದಲೇಬೇಕಿರುವಂತಹವು. ಬ್ರೆಕ್ಟ್ ಕಾವ್ಯ, ಎರಿಕ್ ಫಾರ್ಮ್, ಟಾಲ್‍ಸ್ಟಾಯ್, ಪ್ರತಿಮಾ ರಾಜಕೀಯ, ರಾಷ್ಟ್ರ, ರಾಷ್ಟ್ರೀಯತೆ ಮತ್ತು ನಾಗರಿಕರು, ಗಾಂಧಿ ಕಟ್ಟಿಕೊಟ್ಟ ರಾಷ್ಟ್ರೀಯತೆ, ಹಿಂಸೆಯ ವ್ಯಾಖ್ಯಾನಗಳು, ಫ್ಯಾಸಿಸಂನ ನೈಜಮುಖ ಹೀಗೆ ಹಲವು ಪ್ರಬಂಧಗಳಲ್ಲಿ ಇಂದು ಜಗತ್ತಿನೆಲ್ಲೆಡೆ ಬೀಡುಬಿಡುತ್ತಿರುವ ತೀವ್ರ ಬಲಪಂಥೀಯ ಮತ್ತು ಸರ್ವಾಧಿಕಾರಿ ಧೋರಣೆಯ ಸರ್ಕಾರಗಳು ಮತ್ತು ಅದನ್ನು ಒಪ್ಪಿಕೊಳ್ಳುತ್ತಿರುವ ಜನಸಾಮಾನ್ಯರ ಮನಸ್ಥಿತಿಗೆ ರಾಜೇಂದ್ರ ಚೆನ್ನಿ ಮುಖಾಮುಖಿಯಾಗುತ್ತಾರೆ.

ಅಧಿಕಾರ ಕೇಂದ್ರಗಳನ್ನು ಸದಾ ಪ್ರಶ್ನಿಸಿ ಜನಸಾಮಾನ್ಯರ ಮತ್ತು ಶೋಷಿತರ ಪರವಾಗಿ ನಿಲ್ಲುವ ನಿಜ ಅರ್ಥದ ಲೋಕವಿರೋಧಿಗಳು, ಕಲಾವಿದರ, ಬರಹಗಾರರ ವಲಯದಲ್ಲಿ ಕ್ಷೀಣಿಸುತ್ತಿರುವ ಸಮಯದಲ್ಲಿ ರಾಜೇಂದ್ರ ಚೆನ್ನಿ ಅವರು ದಿಟ್ಟತನದಿಂದ ಯುವಜನತೆಗೆ ತಮ್ಮ ಚಿಂತನೆಗಳ ಮೂಲಕ ಎಚ್ಚರಿಸುತ್ತಿರುವ ಕಾರಣಕ್ಕೆ ಅವರ ಬರಹಗಳನ್ನು ಓದುವ ಮೂಲಕ ನಾವು ಅವರನ್ನು ಅಭಿನಂದಿಸಬೇಕಿದೆ.

ಲೋಕವಿಮರ್ಶೆ
(ಪ್ರಬಂಧಗಳ ಸಂಕಲನ)
ರಾಜೇಂದ್ರ ಚೆನ್ನಿ
ಮುದ್ರಣ: 2020 ಪುಟ: 344 ಬೆಲೆ: 300/-
ಪ್ರಕಾಶನ: ಅಭಿರುಚಿ, ಮೈಸೂರು


ಇದನ್ನೂ ಓದಿ: ಗಾಂಧಿ ಅನ್ನೋ ಪತ್ರಕರ್ತ : ಗಾಂಧಿಯಿಂದ ಪತ್ರಕರ್ತರು ಕಲಿಯಬೇಕಾದುದ್ದೇನು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....