Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...