Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...