Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...