Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...