Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...