Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...