HomeUncategorizedಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ನಟ ರಜನಿಕಾಂತ್, ತಮಿಳುನಾಡು ಚುನಾವಣೆಗೆ ತಮ್ಮ ಪಕ್ಷದ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ಹೇಳಿದ್ದರು.

- Advertisement -
- Advertisement -

ಅನಾರೋಗ್ಯದ ಕಾರಣದಿಂದ ನಟ, ಸೂಪರ್‌ಸ್ಟಾರ್‌ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದ ತೀವ್ರ ಏರಿಳಿತದಿಂದ ಅವರನ್ನು ಶುಕ್ರವಾರ (ಡಿ.25) ಹೈದರಾಬಾದ್​​ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಅಪೊಲೋ ಆಸ್ಪತ್ರೆ ಹೆಲ್ತ್​​ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 10 ದಿನಗಳಿಂದ ಹೈದರಾಬಾದ್​​ನಲ್ಲಿ ಶೂಟಿಂಗ್​​​ನಲ್ಲಿದ್ದ ರಜನಿಕಾಂತ್ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.

ನಟ ರಜನಿಕಾಂತ್ ಅವರು ಹೈದರಾಬಾದ್‌ನಲ್ಲಿ ಕಳೆದ 10 ದಿನಗಳಿಂದ ಅಣ್ಣಾತ್ತೆ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಅಣ್ಣಾತ್ತೆ ಸಿನಿಮಾ ತಂಡದ ಎಂಟು ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ರಜನಿಕಾಂತ್‌ಗೆ ಡಿ.22 ರಂದು ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ನೆಗೆಟಿವ್ ಬಂದಿತ್ತು.

ಇದನ್ನು ಓದಿ: ಸಿದ್ದಾಂತ ಹೊಂದಿಕೆಯಾದರೆ ರಜನಿಕಾಂತ್‌ ಜೊತೆ ಮೈತ್ರಿಗೆ ಸಿದ್ದ: ಕಮಲ್ ಹಾಸನ್

ನಂತರ ತಾವೇ ಸ್ವತಃ ಹೋಂ ಕ್ವಾರಂಟೈನ್‌ನಲ್ಲಿದ್ದ ರಜನಿಕಾಂತ್‌ ಅವರನ್ನು ಅಧಿಕ ರಕ್ತದೊತ್ತಡ ಮತ್ತು ಬಳಲಿಕೆ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡದ ಸಮಸ್ಯೆ ಮತ್ತು ದೈಹಿಕ ಬಳಲಿಕೆಯ ಹೊರತಾಗಿ ಬೇರೆ ಯಾವುದೇ ಸಮಸ್ಯೆ ಇಲ್ಲ ಎಂದು ಅಪೊಲೋ ಆಸ್ಪತ್ರೆ ಹೆಲ್ತ್​​ ಬುಲೆಟಿನ್​​ನಲ್ಲಿ ಮಾಹಿತಿ ನೀಡಲಾಗಿದೆ.

ಡಿ.2 ರಂದು ‘ರಜಿನಿ ಮಕ್ಕಳ್ ಮಂದ್ರಮ್ ವೇದಿಕೆ’ಯ ಪದಾಧಿಕಾರಿಗಳನ್ನು ಭೇಟಿಯಾಗಿದ್ದ ರಜನಿಕಾಂತ್, ತಮ್ಮ ಪಕ್ಷದ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ದೃಢಪಡಿಸಿದ್ದರು. ಈ ಮೂಲಕ ತಮಿಳುನಾಡು ರಾಜಕೀಯ ಕಣದಲ್ಲಿ ಈ ಬಾರಿ ಸ್ಪರ್ಧಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ಆದರೆ, ಅದಕ್ಕೂ ಹಿಂದೆ ತಮ್ಮ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ಸೋಂಕಿನ ಭಯದಲ್ಲಿ ರಾಜಕೀಯಕ್ಕೆ ತಮ್ಮ ಪ್ರವೇಶ ವಿಳಂಬವಾಗಬಹುದು ಎಂದು ಸುಳಿವು ನೀಡಿದ್ದರು. ನಟ ರಜನಿಕಾಂತ್‌ ಅವರಿಗೆ ಮೂತ್ರಪಿಂಡದ ಸಮಸ್ಯೆ ಇರುವುದರಿಂದ ಕೊರೊನಾ ಸೋಂಕಿಗೆ ಬೇಗ ಗುರಿಯಾಗಬಹುದು ಎಂಬ ಕಾರಣಕ್ಕೆ ಪ್ರಯಾಣ ಮಾಡದಂತೆ ವೈದ್ಯರು ಸೂಚಿಸಿದ್ದರು.

ತಮಿಳುನಾಡು ಚುನಾವಣಾ ಅಖಾಡಕ್ಕೆ ಇಳಿದು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿರುವ ನಟ ಕಮಲ್ ಹಾಸನ್, ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುವುದಾಗಿ ಹಲವು ಬಾರಿ ಹೇಳಿದ್ದಾರೆ. ಸಿದ್ಧಾಂತಗಳು ಹೊಂದಿಕೆಯಾದರೇ, ಜನರಿಗೆ ನಮ್ಮ ಮೈತ್ರಿಯಿಂದ ಒಳ್ಳೆಯದಾಗುವುದಾದರೇ ನಾವು ಅಹಂ ಬಿಟ್ಟು ಒಂದಾಗುತ್ತೇವೆ ಎಂದಿದ್ದರು.

ಈಗ ರಜನಿಕಾಂತ್ ಆರೋಗ್ಯ ಸ್ಥಿತಿಯನ್ನು ನೋಡಿದರೆ ಅವರು ಮತ್ತೆ ತಮ್ಮ ಹಳೆಯ ಮಾತಾದ ರಾಜಕೀಯಕ್ಕೆ ಪ್ರವೇಶ ವಿಳಂಬವಾಗಬಹುದು ಎಂಬುದನ್ನು ಪುನರುಚ್ಚರಿಸಬಹುದು. ಈಗಾಗಲೇ ತಮಿಳುನಾಡಿನಲ್ಲಿ ಹೊಸ ಹೊಸ ಪಕ್ಷಗಳು ಹುಟ್ಟಿಕೊಂಡಿದ್ದು, ಪಕ್ಷ ಪಕ್ಷಗಳಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಬಿಜೆಪಿ ಈ ಎಲ್ಲ ವಿಚಾರಗಳ ಲಾಭ ಪಡೆಯಲು ತನ್ನದೆ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಿದೆ.


ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...