HomeUncategorizedಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ಅಧಿಕ ರಕ್ತದೊತ್ತಡ: ಅಪೊಲೋ ಆಸ್ಪತ್ರೆಗೆ ದಾಖಲಾದ ನಟ ರಜನಿಕಾಂತ್

ನಟ ರಜನಿಕಾಂತ್, ತಮಿಳುನಾಡು ಚುನಾವಣೆಗೆ ತಮ್ಮ ಪಕ್ಷದ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ಹೇಳಿದ್ದರು.

- Advertisement -
- Advertisement -

ಅನಾರೋಗ್ಯದ ಕಾರಣದಿಂದ ನಟ, ಸೂಪರ್‌ಸ್ಟಾರ್‌ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದ ತೀವ್ರ ಏರಿಳಿತದಿಂದ ಅವರನ್ನು ಶುಕ್ರವಾರ (ಡಿ.25) ಹೈದರಾಬಾದ್​​ನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಅಪೊಲೋ ಆಸ್ಪತ್ರೆ ಹೆಲ್ತ್​​ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 10 ದಿನಗಳಿಂದ ಹೈದರಾಬಾದ್​​ನಲ್ಲಿ ಶೂಟಿಂಗ್​​​ನಲ್ಲಿದ್ದ ರಜನಿಕಾಂತ್ ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.

ನಟ ರಜನಿಕಾಂತ್ ಅವರು ಹೈದರಾಬಾದ್‌ನಲ್ಲಿ ಕಳೆದ 10 ದಿನಗಳಿಂದ ಅಣ್ಣಾತ್ತೆ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಅಣ್ಣಾತ್ತೆ ಸಿನಿಮಾ ತಂಡದ ಎಂಟು ಸದಸ್ಯರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ರಜನಿಕಾಂತ್‌ಗೆ ಡಿ.22 ರಂದು ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅವರ ವರದಿ ನೆಗೆಟಿವ್ ಬಂದಿತ್ತು.

ಇದನ್ನು ಓದಿ: ಸಿದ್ದಾಂತ ಹೊಂದಿಕೆಯಾದರೆ ರಜನಿಕಾಂತ್‌ ಜೊತೆ ಮೈತ್ರಿಗೆ ಸಿದ್ದ: ಕಮಲ್ ಹಾಸನ್

ನಂತರ ತಾವೇ ಸ್ವತಃ ಹೋಂ ಕ್ವಾರಂಟೈನ್‌ನಲ್ಲಿದ್ದ ರಜನಿಕಾಂತ್‌ ಅವರನ್ನು ಅಧಿಕ ರಕ್ತದೊತ್ತಡ ಮತ್ತು ಬಳಲಿಕೆ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡದ ಸಮಸ್ಯೆ ಮತ್ತು ದೈಹಿಕ ಬಳಲಿಕೆಯ ಹೊರತಾಗಿ ಬೇರೆ ಯಾವುದೇ ಸಮಸ್ಯೆ ಇಲ್ಲ ಎಂದು ಅಪೊಲೋ ಆಸ್ಪತ್ರೆ ಹೆಲ್ತ್​​ ಬುಲೆಟಿನ್​​ನಲ್ಲಿ ಮಾಹಿತಿ ನೀಡಲಾಗಿದೆ.

ಡಿ.2 ರಂದು ‘ರಜಿನಿ ಮಕ್ಕಳ್ ಮಂದ್ರಮ್ ವೇದಿಕೆ’ಯ ಪದಾಧಿಕಾರಿಗಳನ್ನು ಭೇಟಿಯಾಗಿದ್ದ ರಜನಿಕಾಂತ್, ತಮ್ಮ ಪಕ್ಷದ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ದೃಢಪಡಿಸಿದ್ದರು. ಈ ಮೂಲಕ ತಮಿಳುನಾಡು ರಾಜಕೀಯ ಕಣದಲ್ಲಿ ಈ ಬಾರಿ ಸ್ಪರ್ಧಿಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ಆದರೆ, ಅದಕ್ಕೂ ಹಿಂದೆ ತಮ್ಮ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕೊರೊನಾ ಸೋಂಕಿನ ಭಯದಲ್ಲಿ ರಾಜಕೀಯಕ್ಕೆ ತಮ್ಮ ಪ್ರವೇಶ ವಿಳಂಬವಾಗಬಹುದು ಎಂದು ಸುಳಿವು ನೀಡಿದ್ದರು. ನಟ ರಜನಿಕಾಂತ್‌ ಅವರಿಗೆ ಮೂತ್ರಪಿಂಡದ ಸಮಸ್ಯೆ ಇರುವುದರಿಂದ ಕೊರೊನಾ ಸೋಂಕಿಗೆ ಬೇಗ ಗುರಿಯಾಗಬಹುದು ಎಂಬ ಕಾರಣಕ್ಕೆ ಪ್ರಯಾಣ ಮಾಡದಂತೆ ವೈದ್ಯರು ಸೂಚಿಸಿದ್ದರು.

ತಮಿಳುನಾಡು ಚುನಾವಣಾ ಅಖಾಡಕ್ಕೆ ಇಳಿದು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿರುವ ನಟ ಕಮಲ್ ಹಾಸನ್, ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುವುದಾಗಿ ಹಲವು ಬಾರಿ ಹೇಳಿದ್ದಾರೆ. ಸಿದ್ಧಾಂತಗಳು ಹೊಂದಿಕೆಯಾದರೇ, ಜನರಿಗೆ ನಮ್ಮ ಮೈತ್ರಿಯಿಂದ ಒಳ್ಳೆಯದಾಗುವುದಾದರೇ ನಾವು ಅಹಂ ಬಿಟ್ಟು ಒಂದಾಗುತ್ತೇವೆ ಎಂದಿದ್ದರು.

ಈಗ ರಜನಿಕಾಂತ್ ಆರೋಗ್ಯ ಸ್ಥಿತಿಯನ್ನು ನೋಡಿದರೆ ಅವರು ಮತ್ತೆ ತಮ್ಮ ಹಳೆಯ ಮಾತಾದ ರಾಜಕೀಯಕ್ಕೆ ಪ್ರವೇಶ ವಿಳಂಬವಾಗಬಹುದು ಎಂಬುದನ್ನು ಪುನರುಚ್ಚರಿಸಬಹುದು. ಈಗಾಗಲೇ ತಮಿಳುನಾಡಿನಲ್ಲಿ ಹೊಸ ಹೊಸ ಪಕ್ಷಗಳು ಹುಟ್ಟಿಕೊಂಡಿದ್ದು, ಪಕ್ಷ ಪಕ್ಷಗಳಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ. ಬಿಜೆಪಿ ಈ ಎಲ್ಲ ವಿಚಾರಗಳ ಲಾಭ ಪಡೆಯಲು ತನ್ನದೆ ಕಾರ್ಯಸೂಚಿಯನ್ನು ಜಾರಿಗೊಳಿಸುತ್ತಿದೆ.


ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...