Homeಮುಖಪುಟ'ಸಂಘಿ' ಅಲ್ಲ 'ರಜನಿಕಾಂತ್‌' ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

- Advertisement -
- Advertisement -

ಚಿತ್ರ ಲಾಲ್ ಸಲಾಮ್‌ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ತಮ್ಮ ತಂದೆ ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಬೆಂಬಲವಾಗಿದ್ದಾರೆ ಎಂಬ ಟೀಕೆಗಳ ವಿರುದ್ಧ ಪ್ರತಿಕ್ರಿಯಿಸಿದ್ದು, ಆತ ‘ಸಂಘಿ’ ಆಗಿದ್ದರೆ ಲಾಲ್‌ ಸಲಾಂ ಸಿನಿಮಾ ಮಾಡುತ್ತಿರಲಿಲ್ಲ ಎಂದೂ ಹೇಳಿದ್ದಾರೆ.

‘ಸಂಘಿ’ ಎಂಬುದು ಕೆಲವೊಮ್ಮೆ ಸಂಘಪರಿವಾರದ ಹಿಂದುತ್ವ ಸಿದ್ಧಾಂತದ ಬೆಂಬಲಿಗರ ವಿರುದ್ಧ ಬಳಸುವ ಪದವಾಗಿದೆ. ಇದೇ ಪದವನ್ನು ಐಶ್ವರ್ಯಾ ರಜನಿಕಾಂತ್ ಅವರು ಟ್ವೀಟ್‌ನಲ್ಲಿ ಬಳಸಿದ್ದು, ತಂದೆಯ ಪರ ಬೆಂಬಲವನ್ನು ಸೂಚಿಸಿದ್ದಾರೆ.

ಫೆಬ್ರವರಿ 9ರಂದು ಲಾಲ್ ಸಲಾಮ್‌ ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರದಲ್ಲಿ ರಜನಿಕಾಂತ್ ಮುಸ್ಲಿಂ ಪಾತ್ರದ ‘ಮೊಯ್ದೀನ್ ಭಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ನಾನು ಸಾಮಾಜಿಕ ಮಾಧ್ಯಮದಿಂದ ದೂರವಿರಲು ಪ್ರಯತ್ನಿಸುತ್ತೇನೆ. ಆದರೆ ನನ್ನ ತಂಡವು ಜನರು ಏನು ಮಾತನಾಡುತ್ತಾರೆ ಎಂಬುದನ್ನು ನನಗೆ ತೋರಿಸುತ್ತಲೇ ಇರುತ್ತಾರೆ. ಇತ್ತೀಚೆಗ ರಜನಿಕಾಂತ್‌ಗೆ ಜನರು ‘ಸಂಘಿ’ ಎಂಬ ಒಂದು ಪದವನ್ನು ಹೇಳುತ್ತಿದ್ದಾರೆ ಮತ್ತು ಜನರು ಅವರನ್ನು ಏಕೆ ಆ ರೀತಿ ಕರೆಯುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ನಾನು ಇದನ್ನು ಹೇಳುತ್ತೇನೆ, ಸೂಪರ್‌ಸ್ಟಾರ್ ರಜನಿಕಾಂತ್ ‘ಸಂಘಿ’ ಅಲ್ಲ. ‘ಸಂಘಿ’ ಆಗಿದ್ದರೆ ಲಾಲ್ ಸಲಾಂ ಮಾಡುತ್ತಿರಲಿಲ್ಲ. ಈ ಸಿನಿಮಾವನ್ನು ಮಾನವೀಯತೆ ಇರುವ ವ್ಯಕ್ತಿಯಿಂದ ಮಾತ್ರ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಜನವರಿ 22ರಂದು ತಮಿಳು ನಟ ಧನುಷ್ ಮತ್ತು ರಜನಿಕಾಂತ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದು ವ್ಯಾಪಕ ಟೀಕೆ ಮತ್ತು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕೆಲವು ದಿನಗಳ ನಂತರ ಐಶ್ವರ್ಯಾ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ಸೂಪರ್‌ಸ್ಟಾರ್‌ನ ರಾಜಕೀಯ ಒಲವಿನ ಮೇಲೆ ಮತ್ತೆ ಗಮನ ಸೆಳೆಯಿತು. ತಮಿಳು ನಿರ್ದೇಶಕ ಪಾ ರಂಜಿತ್ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುವುದು ವೈಯಕ್ತಿಕ ಆಯ್ಕೆ ಎಂದು ಹೇಳಿದ್ದರು. 500 ವರ್ಷಗಳಷ್ಟು ಹಳೆಯದಾದ ಸಮಸ್ಯೆ ಕೊನೆಗೊಂಡಿದೆ. ಆದರೆ ಆ ಸಮಸ್ಯೆಯ ಹಿಂದಿನ ರಾಜಕೀಯವನ್ನು ನಾವು ಪ್ರಶ್ನಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ರಜನಿಕಾಂತ್ ತಮ್ಮ ಹಿಂದಿನ ಬ್ಲಾಕ್‌ಬಸ್ಟರ್ ‘ಜೈಲರ್’ ವಿಶೇಷ ಪ್ರದರ್ಶನದಲ್ಲಿ ಆಗಸ್ಟ್ 18ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದಲ್ಲಿ ಭಾಗವಹಿಸಿದ್ದರು. ಅವರು ಯೋಗಿಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು. ಇದು ತಮಿಳುನಾಡಿನ ಜನರಿಂದ ವ್ಯಾಪಕವಾದ ಟೀಕೆಗೆ ಕಾರಣವಾಗಿತ್ತು. ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ರಜನಿಕಾಂತ್, ಯೋಗಿಗಳು ಮತ್ತು ಸನ್ಯಾಸಿಗಳು ನನಗಿಂತ ಚಿಕ್ಕವರಾಗಿದ್ದರೂ ಅವರ ಆಶೀರ್ವಾದಕ್ಕಾಗಿ ಅವರ ಪಾದಗಳನ್ನು ಸ್ಪರ್ಶಿಸುವುದು ಅಭ್ಯಾಸವಾಗಿದೆ ಎಂದು ಸಮರ್ಥಿಸಿದ್ದರು. ನವೆಂಬರ್ 2019 ರಲ್ಲಿ, ರಜನಿಕಾಂತ್ ಅವರು ಬಿಜೆಪಿಗೆ ಸೇರಲು ಆಹ್ವಾನದ ಕುರಿತ ಸುದ್ದಿಯನ್ನು ತಳ್ಳಿಹಾಕಿದ್ದರು. ಮಾಧ್ಯಮದ ಒಂದು ವಿಭಾಗ ಮತ್ತು ಕೆಲವು ವ್ಯಕ್ತಿಗಳು ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...