Homeಮುಖಪುಟ'ಸಂಘಿ' ಅಲ್ಲ 'ರಜನಿಕಾಂತ್‌' ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

- Advertisement -
- Advertisement -

ಚಿತ್ರ ಲಾಲ್ ಸಲಾಮ್‌ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ತಮ್ಮ ತಂದೆ ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಬೆಂಬಲವಾಗಿದ್ದಾರೆ ಎಂಬ ಟೀಕೆಗಳ ವಿರುದ್ಧ ಪ್ರತಿಕ್ರಿಯಿಸಿದ್ದು, ಆತ ‘ಸಂಘಿ’ ಆಗಿದ್ದರೆ ಲಾಲ್‌ ಸಲಾಂ ಸಿನಿಮಾ ಮಾಡುತ್ತಿರಲಿಲ್ಲ ಎಂದೂ ಹೇಳಿದ್ದಾರೆ.

‘ಸಂಘಿ’ ಎಂಬುದು ಕೆಲವೊಮ್ಮೆ ಸಂಘಪರಿವಾರದ ಹಿಂದುತ್ವ ಸಿದ್ಧಾಂತದ ಬೆಂಬಲಿಗರ ವಿರುದ್ಧ ಬಳಸುವ ಪದವಾಗಿದೆ. ಇದೇ ಪದವನ್ನು ಐಶ್ವರ್ಯಾ ರಜನಿಕಾಂತ್ ಅವರು ಟ್ವೀಟ್‌ನಲ್ಲಿ ಬಳಸಿದ್ದು, ತಂದೆಯ ಪರ ಬೆಂಬಲವನ್ನು ಸೂಚಿಸಿದ್ದಾರೆ.

ಫೆಬ್ರವರಿ 9ರಂದು ಲಾಲ್ ಸಲಾಮ್‌ ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರದಲ್ಲಿ ರಜನಿಕಾಂತ್ ಮುಸ್ಲಿಂ ಪಾತ್ರದ ‘ಮೊಯ್ದೀನ್ ಭಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ನಾನು ಸಾಮಾಜಿಕ ಮಾಧ್ಯಮದಿಂದ ದೂರವಿರಲು ಪ್ರಯತ್ನಿಸುತ್ತೇನೆ. ಆದರೆ ನನ್ನ ತಂಡವು ಜನರು ಏನು ಮಾತನಾಡುತ್ತಾರೆ ಎಂಬುದನ್ನು ನನಗೆ ತೋರಿಸುತ್ತಲೇ ಇರುತ್ತಾರೆ. ಇತ್ತೀಚೆಗ ರಜನಿಕಾಂತ್‌ಗೆ ಜನರು ‘ಸಂಘಿ’ ಎಂಬ ಒಂದು ಪದವನ್ನು ಹೇಳುತ್ತಿದ್ದಾರೆ ಮತ್ತು ಜನರು ಅವರನ್ನು ಏಕೆ ಆ ರೀತಿ ಕರೆಯುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ನಾನು ಇದನ್ನು ಹೇಳುತ್ತೇನೆ, ಸೂಪರ್‌ಸ್ಟಾರ್ ರಜನಿಕಾಂತ್ ‘ಸಂಘಿ’ ಅಲ್ಲ. ‘ಸಂಘಿ’ ಆಗಿದ್ದರೆ ಲಾಲ್ ಸಲಾಂ ಮಾಡುತ್ತಿರಲಿಲ್ಲ. ಈ ಸಿನಿಮಾವನ್ನು ಮಾನವೀಯತೆ ಇರುವ ವ್ಯಕ್ತಿಯಿಂದ ಮಾತ್ರ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಜನವರಿ 22ರಂದು ತಮಿಳು ನಟ ಧನುಷ್ ಮತ್ತು ರಜನಿಕಾಂತ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದು ವ್ಯಾಪಕ ಟೀಕೆ ಮತ್ತು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕೆಲವು ದಿನಗಳ ನಂತರ ಐಶ್ವರ್ಯಾ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ಸೂಪರ್‌ಸ್ಟಾರ್‌ನ ರಾಜಕೀಯ ಒಲವಿನ ಮೇಲೆ ಮತ್ತೆ ಗಮನ ಸೆಳೆಯಿತು. ತಮಿಳು ನಿರ್ದೇಶಕ ಪಾ ರಂಜಿತ್ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುವುದು ವೈಯಕ್ತಿಕ ಆಯ್ಕೆ ಎಂದು ಹೇಳಿದ್ದರು. 500 ವರ್ಷಗಳಷ್ಟು ಹಳೆಯದಾದ ಸಮಸ್ಯೆ ಕೊನೆಗೊಂಡಿದೆ. ಆದರೆ ಆ ಸಮಸ್ಯೆಯ ಹಿಂದಿನ ರಾಜಕೀಯವನ್ನು ನಾವು ಪ್ರಶ್ನಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ರಜನಿಕಾಂತ್ ತಮ್ಮ ಹಿಂದಿನ ಬ್ಲಾಕ್‌ಬಸ್ಟರ್ ‘ಜೈಲರ್’ ವಿಶೇಷ ಪ್ರದರ್ಶನದಲ್ಲಿ ಆಗಸ್ಟ್ 18ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದಲ್ಲಿ ಭಾಗವಹಿಸಿದ್ದರು. ಅವರು ಯೋಗಿಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು. ಇದು ತಮಿಳುನಾಡಿನ ಜನರಿಂದ ವ್ಯಾಪಕವಾದ ಟೀಕೆಗೆ ಕಾರಣವಾಗಿತ್ತು. ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ರಜನಿಕಾಂತ್, ಯೋಗಿಗಳು ಮತ್ತು ಸನ್ಯಾಸಿಗಳು ನನಗಿಂತ ಚಿಕ್ಕವರಾಗಿದ್ದರೂ ಅವರ ಆಶೀರ್ವಾದಕ್ಕಾಗಿ ಅವರ ಪಾದಗಳನ್ನು ಸ್ಪರ್ಶಿಸುವುದು ಅಭ್ಯಾಸವಾಗಿದೆ ಎಂದು ಸಮರ್ಥಿಸಿದ್ದರು. ನವೆಂಬರ್ 2019 ರಲ್ಲಿ, ರಜನಿಕಾಂತ್ ಅವರು ಬಿಜೆಪಿಗೆ ಸೇರಲು ಆಹ್ವಾನದ ಕುರಿತ ಸುದ್ದಿಯನ್ನು ತಳ್ಳಿಹಾಕಿದ್ದರು. ಮಾಧ್ಯಮದ ಒಂದು ವಿಭಾಗ ಮತ್ತು ಕೆಲವು ವ್ಯಕ್ತಿಗಳು ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...