Homeಮುಖಪುಟನಟ ರಜನಿಕಾಂತ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಗೌರವ

ನಟ ರಜನಿಕಾಂತ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಗೌರವ

- Advertisement -
- Advertisement -

ಸೂಪರ್ ಸ್ಟಾರ್‌ ರಜನಿಕಾಂತ್‌ ಅವರಿಗೆ ಇಂದು ಮಹತ್ವದ ದಿನವಾಗಿದೆ. ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ದಾದಾಸಾಹೇಬ್ ಫಾಲ್ಕೆ ಗೌರವಕ್ಕೆ ರಜನಿಕಾಂತ್‌ ಪಾತ್ರರಾಗಿದ್ದಾರೆ. ಅ.25 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ನಟ ರಜನಿಕಾಂತ್‌ ಅವರು ತಮಗೆ ಸಂದ ಪ್ರಶಸ್ತಿಯನ್ನು ತಮ್ಮ ನಿರ್ಮಾಪಕರು, ನಿರ್ದೇಶಕರು, ಚಲನಚಿತ್ರ ಬಂಧುಗಳು ಮತ್ತು ಅಭಿಮಾನಿಗಳಿಗೆ ಅರ್ಪಿಸಿದ್ದಾರೆ.

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಘೋಷಿಸಲಾದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

ರಜನಿಕಾಂತ್‌ ಅವರ ಅಳಿಯ, ಸ್ಟಾರ್‌ ನಟ ಧನುಷ್‌ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಅಸುರನ್‌ ಸಿನಿಮಾದಲ್ಲಿನ ಅತ್ಯುತ್ತಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

 

ಪ್ರಶಸ್ತಿಯನ್ನು ಪಡೆದುಕೊಂಡು ಮಾತನಾಡಿರುವ ನಟ ರಜನಿಕಾಂತ್, ಬಸ್ ಕಂಡಕ್ಟರ್‌ನಿಂದ ಸ್ಟಾರ್‌ ನಟನವರೆಗೆ ತಮ್ಮ ಜೀವನದ ಪ್ರಯಾಣವನ್ನು ನೆನಪಿಸಿಕೊಂಡಿದ್ದಾರೆ. ಚಲನಚಿತ್ರಗಳಿಗೆ ಸೇರುವಂತೆ ಸೂಚಿಸಿದ ತಮ್ಮ ಬಹುಕಾಲದ ಸ್ನೇಹಿತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹಾಡುಗಾರರಾದ ಆಶಾ ಭೋಂಸ್ಲೆ ಮತ್ತು ಶಂಕರ್ ಮಹಾದೇವನ್, ನಟರಾದ ಮೋಹನ್ ಲಾಲ್ ಮತ್ತು ಬಿಸ್ವಜೀತ್ ಚಟರ್ಜಿ ಮತ್ತು ಚಲನಚಿತ್ರ ನಿರ್ಮಾಪಕ ಸುಭಾಷ್ ಘಾಯ್ ಅವರಿದ್ದ ಆಯ್ಕಾ ಸಮಿತಿಯು ಈ ವರ್ಷದ ಆರಂಭದಲ್ಲಿ ರಜನಿಕಾಂತ್ ಅವರನ್ನು ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...