Homeಮುಖಪುಟನಟ ರಜನಿಕಾಂತ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಗೌರವ

ನಟ ರಜನಿಕಾಂತ್‌ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಗೌರವ

- Advertisement -
- Advertisement -

ಸೂಪರ್ ಸ್ಟಾರ್‌ ರಜನಿಕಾಂತ್‌ ಅವರಿಗೆ ಇಂದು ಮಹತ್ವದ ದಿನವಾಗಿದೆ. ಭಾರತದ ಅತ್ಯುನ್ನತ ಚಲನಚಿತ್ರ ಗೌರವವಾದ ದಾದಾಸಾಹೇಬ್ ಫಾಲ್ಕೆ ಗೌರವಕ್ಕೆ ರಜನಿಕಾಂತ್‌ ಪಾತ್ರರಾಗಿದ್ದಾರೆ. ಅ.25 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ನಟ ರಜನಿಕಾಂತ್‌ ಅವರು ತಮಗೆ ಸಂದ ಪ್ರಶಸ್ತಿಯನ್ನು ತಮ್ಮ ನಿರ್ಮಾಪಕರು, ನಿರ್ದೇಶಕರು, ಚಲನಚಿತ್ರ ಬಂಧುಗಳು ಮತ್ತು ಅಭಿಮಾನಿಗಳಿಗೆ ಅರ್ಪಿಸಿದ್ದಾರೆ.

2019 ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಘೋಷಿಸಲಾದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ. ಸಿನಿಮಾ ಕ್ಷೇತ್ರದಲ್ಲಿನ ಸಾಧನೆಗಾಗಿ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ.

ರಜನಿಕಾಂತ್‌ ಅವರ ಅಳಿಯ, ಸ್ಟಾರ್‌ ನಟ ಧನುಷ್‌ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು. ಅಸುರನ್‌ ಸಿನಿಮಾದಲ್ಲಿನ ಅತ್ಯುತ್ತಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

 

ಪ್ರಶಸ್ತಿಯನ್ನು ಪಡೆದುಕೊಂಡು ಮಾತನಾಡಿರುವ ನಟ ರಜನಿಕಾಂತ್, ಬಸ್ ಕಂಡಕ್ಟರ್‌ನಿಂದ ಸ್ಟಾರ್‌ ನಟನವರೆಗೆ ತಮ್ಮ ಜೀವನದ ಪ್ರಯಾಣವನ್ನು ನೆನಪಿಸಿಕೊಂಡಿದ್ದಾರೆ. ಚಲನಚಿತ್ರಗಳಿಗೆ ಸೇರುವಂತೆ ಸೂಚಿಸಿದ ತಮ್ಮ ಬಹುಕಾಲದ ಸ್ನೇಹಿತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹಾಡುಗಾರರಾದ ಆಶಾ ಭೋಂಸ್ಲೆ ಮತ್ತು ಶಂಕರ್ ಮಹಾದೇವನ್, ನಟರಾದ ಮೋಹನ್ ಲಾಲ್ ಮತ್ತು ಬಿಸ್ವಜೀತ್ ಚಟರ್ಜಿ ಮತ್ತು ಚಲನಚಿತ್ರ ನಿರ್ಮಾಪಕ ಸುಭಾಷ್ ಘಾಯ್ ಅವರಿದ್ದ ಆಯ್ಕಾ ಸಮಿತಿಯು ಈ ವರ್ಷದ ಆರಂಭದಲ್ಲಿ ರಜನಿಕಾಂತ್ ಅವರನ್ನು ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.

ಕಳೆದ ವರ್ಷ ಅಸಹಜ ಸಾವಿಗೀಡಾದ ನಟ ಸುಶಾಂತ್ ಸಿಂಗ್ ರಜ‌ಪೂತ್ ಅಭಿನಯದ ಚಿಚೋರೆ ಚಲನಚಿತ್ರ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಕನ್ನಡದ ಮನೋಜ್ ಕುಮಾರ್ ನಿರ್ದೇಶನದ ಅಕ್ಷಿ ಕನ್ನಡದ ಉತ್ತಮ ಚಲನಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ತಮಿಳು ಚಿತ್ರ ಪ್ರಶಸ್ತಿಯನ್ನು ಅಸುರನ್ ಪಡೆದಿದೆ.

ಅಸುರನ್ ತಮಿಳು ಚಿತ್ರದ ನಟನೆಗಾಗಿ ಧನುಷ್ ಮತ್ತು ಭೋಂಸ್ಲೆ ಚಿತ್ರಕ್ಕಾಗಿ ನಟ ಮನೋಜ್ ಬಾಜಪೇಯಿ ಉತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಣಿಕರ್ಣಿಕಾ ಮತ್ತು ಪಂಗಾ ಚಿತ್ರಗಳ ಅಭಿನಯಕ್ಕಾಗಿ ಅತ್ಯತ್ತಮ ನಟಿ ಪ್ರಶಸ್ತಿಯನ್ನು ಕಂಗನಾ ರಣಾವತ್ ಪಡೆದುಕೊಂಡಿದ್ದಾರೆ.


ಇದನ್ನೂ ಓದಿ: ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ‘ಗ್ರೇಟ್‌ ಇಂಡಿಯನ್ ಕಿಚನ್‌’ ಅತ್ಯುತ್ತಮ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...