Homeಮುಖಪುಟನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ನಿನ್ನೆ ನಟ ರಜನಿಕಾಂತ್ ತಮ್ಮ ರಜಿನಿ ಮಕ್ಕಳ್ ಮಂದ್ರಮ್ ವೇದಿಕೆಯ ಹಿರಿಯ ಪದಾಧಿಕಾರಿಗಳನ್ನು ಭೇಟಿಯಾಗಿದ್ದಾರೆ.

- Advertisement -
- Advertisement -

ಸೂಪರ್‌ಸ್ಟಾರ್ ರಜನಿಕಾಂತ್ ಜನವರಿಯಲ್ಲಿ ತಮ್ಮ ಹೊಸ ಪಕ್ಷವನ್ನು ಆರಂಭಿಸುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಪಕ್ಷ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ದೃಢಪಡಿಸಿದ್ದಾರೆ.

ತಮಿಳುನಾಡು ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ನಟ ರಜನಿಕಾಂತ್ ತಮ್ಮ ಹೊಸ ಪಕ್ಷವನ್ನು ಘೋಷಣೆ ಮಾಡುತ್ತಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದೆ.

ನಿನ್ನೆ ನಟ ರಜನಿಕಾಂತ್ ತಮ್ಮ ರಜಿನಿ ಮಕ್ಕಳ್ ಮಂದ್ರಮ್ ವೇದಿಕೆಯ ಹಿರಿಯ ಪದಾಧಿಕಾರಿಗಳನ್ನು ಭೇಟಿಯಾದ್ದರು. ನಂತರ ಸುದ್ದಿಗಾರರೊಂದಿಗೆ ಚುನಾವಣಾ ರಾಜಕೀಯದ ಯೋಜನೆಗಳ ಕುರಿತು ಶೀಘ್ರದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದ್ದರು. ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

“ಜಿಲ್ಲಾ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ನಾನು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಅವರ ಒಪ್ಪಿಗೆಯಿದೆ ಎಂದು ಹೇಳಿದ್ದಾರೆ. ನನ್ನ ನಿರ್ಧಾರವನ್ನು ಆದಷ್ಟು ಬೇಗ ಪ್ರಕಟಿಸುತ್ತೇನೆ” ಎಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದರು.

ಕಳೆದ ತಿಂಗಳು, ಚುನಾವಣಾ ರಾಜಕೀಯಕ್ಕೆ ಅವರ ಪ್ರವೇಶ ವಿಳಂಬವಾಗಬಹುದು ಎಂದು ರಜನಿಕಾಂತ್ ಸುಳಿವು ನೀಡಿದ್ದರು. ನಟ ರಜನಿಕಾಂತ್‌ ಅವರಿಗೆ ಮೂತ್ರಪಿಂಡದ ಸಮಸ್ಯೆ ಇರುವುದರಿಂದ ಕೊರೊನಾ ಸೋಂಕಿಗೆ ಬೇಗ ಗುರಿಯಾಗಬಹುದು ಎಂಬ ಕಾರಣಕ್ಕೆ ಪ್ರಯಾಣ ಮಾಡದಂತೆ ವೈದ್ಯರು ಸೂಚಿಸಿದ್ದರು. ಆದರೆ, ಇವುಗಳೆಲ್ಲದರ ನಡುವೆಯೂ ನಟ ತಮ್ಮ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ನಟಿ, ರಾಜಕಾರಣಿ ಖುಷ್ಬೂ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಗಳಾದ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಕೂಡ ರಾಜಕೀಯಕ್ಕೆ ಧುಮುಕಿದ್ದಾರೆ.

ಬಿಜೆಪಿ ತಮಿಳುನಾಡಿನಲ್ಲಿ ಸ್ಪಲ್ಪವಾದರೂ ಸ್ಥಾನ ಗಿಟ್ಟಿಸಿಕೊಳ್ಳಲು ವೆಟ್ರಿವೇಲ್ ಯಾತ್ರೆ ನಡೆಸಿ ಜನರಲ್ಲಿ ಧರ್ಮದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದೆ. ಇವುಗಳ ನಡುವೆ ನಟ ರಜನಿಕಾಂತ್ ಅವರ ಪಕ್ಷ ಯಾವ ರೀತಿಯ ಛಾಪು ಮೂಡಿಸಲು ಪ್ರಯತ್ನಿಸುವುದು ಎಂಬುದನ್ನು ನೋಡಬೇಕಾಗಿದೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...