Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. - ಕಮಲ ಹಾಸನ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖಂಡರಾಗಿರುವ ನಟ ಕಮಲ್ ಹಾಸನ್ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜಕೀಯ ಕಾರ್ಯತಂತ್ರ ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮದು ನಿಂದನೆ ಮಾಡುವ ರಾಜಕೀಯವಲ್ಲ, ದಾರಿತೋರುವ ರಾಜಕೀಯವಾಗಿರುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಒಂದು ಲಕ್ಷ ಜನರು ’ಮಕ್ಕಳ್ ನೀದಿ ಮಯ್ಯಂ’ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಿಧ ಪಕ್ಷಗಳಲ್ಲಿ ಅನೇಕ ಒಳ್ಳೆಯ ಜನರು ಮನನೊಂದಿರುತ್ತಾರೆ. ಅವರು ನಮ್ಮೊಂದಿಗೆ ಬರಬೇಕು. ನಾವು ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ” ಎಂದರು.

ರಾಜಕೀಯದ ಬಗ್ಗೆ ರಜನಿಕಾಂತ್ ಜೊತೆ ಚರ್ಚಿಸಿದ್ದಾಗಿ ಹೇಳಿದ ಕಮಲ್, “ನಟ ರಜನಿಕಾಂತ್ ತನ್ನ ಆರೋಗ್ಯದ ಕಡೆ ಪ್ರಾಮುಖ್ಯತೆ ನೀಡುವಂತೆ ಸ್ನೇಹಿತನಾಗಿ ಸಲಹೆ ನೀಡಿದ್ದೇನೆ. ರಾಜಕೀಯಕ್ಕೆ ಬರುವ ಬಗ್ಗೆ ಅವರು ನಿರ್ಧರಿಸುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಅವರ ಬೆಂಬಲವನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ 3 ನೇ ತಂಡವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ. ಚುನಾವಣಾ ಆಯೋಗವು ನವೆಂಬರ್‌ನಲ್ಲಿ ನಮಗೆ ಅವಕಾಶ ನೀಡಿದೆ. ಆದ್ದರಿಂದ, ಮೈತ್ರಿಯ ಬಗ್ಗೆ ಮಾತನಾಡುವ ಕ್ಷಣ ಇದಲ್ಲ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕ್ಷೇತ್ರ ಸಂಶೋಧನೆ ಆಧರಿಸಿ ”ಮಕ್ಕಳ್ ನೀದಿ ಮಯ್ಯಂ” ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿದೆ. ನಾವು 100 ರಿಂದ 160 ಕ್ಷೇತ್ರದಗಳಲ್ಲಿ ಪ್ರಭಾವ ಬೀರಲಿದ್ದೇವೆ. ರಾಜಕೀಯದಲ್ಲಿ ನಮ್ಮ ನೀತಿ ”ಪ್ರಾಮಾಣಿಕತೆ” ಆಗಿದೆ. ನಾವು ಪ್ರಾಮಾಣಿಕರೆಂದು ಹೇಳಿಕೊಳ್ಳುವ ಜನರನ್ನು ಭೇಟಿಯಾಗುತ್ತೇವೆ. ಅದನ್ನು ಇತರರು ಹೇಳಬಹುದೇ ಎಂದು ಕಮಲ್‌ ಹಾಸನ್ ಪ್ರಶ್ನಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. ವಿಧಾನಸಭೆಯಲ್ಲಿ ಖಂಡಿತವಾಗಿ ”ಮಕ್ಕಳ್ ನೀದಿ ಮಯ್ಯಂ” ಪಕ್ಷದ ಧ್ವನಿ ಕೇಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಮನುಸ್ಮೃತಿ ಚಲಾವಣೆಯಲ್ಲಿಲ್ಲದ ಪುಸ್ತಕ

ಮನುಸ್ಮೃತಿ ಎಂಬುದು ಚಲಾವಣೆಯಲ್ಲಿಲ್ಲದ ಪುಸ್ತಕವಾಗಿದ್ದು, ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಆದರೆ ಯಾರಾದರೂ ಭಾರತೀಯ ಸಂವಿಧಾನದ ಬಗ್ಗೆ ಮಾತನಾಡಿದರೆ, ಪ್ರಶ್ನಿಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ಸಂಸ್ಕೃತಿಯಲ್ಲಿ ಹಲವು ವಿಷಯಗಳಿವೆ, ಸತಿಸಹಗಮನ ಪದ್ದತಿ ಕೂಡಾ ಸಂಸ್ಕೃತಿಯಾಗಿತ್ತು, ಸಂಸ್ಕೃತಿಯ ಹೆಸರಿನಲ್ಲಿ ಅದನ್ನು ಅನುಸರಿಸಬಾರದು. ಕಾಲ ಮತ್ತು ಅಗತ್ಯಗಳಿಗೆ ನಾವು ಹೊಂದಿಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು.

ಬಿಜೆಪಿಯು ನಡೆಸಲು ಉದ್ದೇಶಿಸಿದ ”ವೆಟ್ರಿವೇಲ್ ತೀರ್ಥಯಾತ್ರೆ” ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ತೀರ್ಥಯಾತ್ರೆಗೆ ಹೋಗದಿರುವುದೇ ಉತ್ತಮ, ಅದರ ಬದಲಿಗೆ ಉದ್ಯೋಗವನ್ನು ಕೊಡಿಸುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...