Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. - ಕಮಲ ಹಾಸನ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖಂಡರಾಗಿರುವ ನಟ ಕಮಲ್ ಹಾಸನ್ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜಕೀಯ ಕಾರ್ಯತಂತ್ರ ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮದು ನಿಂದನೆ ಮಾಡುವ ರಾಜಕೀಯವಲ್ಲ, ದಾರಿತೋರುವ ರಾಜಕೀಯವಾಗಿರುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಒಂದು ಲಕ್ಷ ಜನರು ’ಮಕ್ಕಳ್ ನೀದಿ ಮಯ್ಯಂ’ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಿಧ ಪಕ್ಷಗಳಲ್ಲಿ ಅನೇಕ ಒಳ್ಳೆಯ ಜನರು ಮನನೊಂದಿರುತ್ತಾರೆ. ಅವರು ನಮ್ಮೊಂದಿಗೆ ಬರಬೇಕು. ನಾವು ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ” ಎಂದರು.

ರಾಜಕೀಯದ ಬಗ್ಗೆ ರಜನಿಕಾಂತ್ ಜೊತೆ ಚರ್ಚಿಸಿದ್ದಾಗಿ ಹೇಳಿದ ಕಮಲ್, “ನಟ ರಜನಿಕಾಂತ್ ತನ್ನ ಆರೋಗ್ಯದ ಕಡೆ ಪ್ರಾಮುಖ್ಯತೆ ನೀಡುವಂತೆ ಸ್ನೇಹಿತನಾಗಿ ಸಲಹೆ ನೀಡಿದ್ದೇನೆ. ರಾಜಕೀಯಕ್ಕೆ ಬರುವ ಬಗ್ಗೆ ಅವರು ನಿರ್ಧರಿಸುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಅವರ ಬೆಂಬಲವನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ 3 ನೇ ತಂಡವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ. ಚುನಾವಣಾ ಆಯೋಗವು ನವೆಂಬರ್‌ನಲ್ಲಿ ನಮಗೆ ಅವಕಾಶ ನೀಡಿದೆ. ಆದ್ದರಿಂದ, ಮೈತ್ರಿಯ ಬಗ್ಗೆ ಮಾತನಾಡುವ ಕ್ಷಣ ಇದಲ್ಲ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕ್ಷೇತ್ರ ಸಂಶೋಧನೆ ಆಧರಿಸಿ ”ಮಕ್ಕಳ್ ನೀದಿ ಮಯ್ಯಂ” ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿದೆ. ನಾವು 100 ರಿಂದ 160 ಕ್ಷೇತ್ರದಗಳಲ್ಲಿ ಪ್ರಭಾವ ಬೀರಲಿದ್ದೇವೆ. ರಾಜಕೀಯದಲ್ಲಿ ನಮ್ಮ ನೀತಿ ”ಪ್ರಾಮಾಣಿಕತೆ” ಆಗಿದೆ. ನಾವು ಪ್ರಾಮಾಣಿಕರೆಂದು ಹೇಳಿಕೊಳ್ಳುವ ಜನರನ್ನು ಭೇಟಿಯಾಗುತ್ತೇವೆ. ಅದನ್ನು ಇತರರು ಹೇಳಬಹುದೇ ಎಂದು ಕಮಲ್‌ ಹಾಸನ್ ಪ್ರಶ್ನಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. ವಿಧಾನಸಭೆಯಲ್ಲಿ ಖಂಡಿತವಾಗಿ ”ಮಕ್ಕಳ್ ನೀದಿ ಮಯ್ಯಂ” ಪಕ್ಷದ ಧ್ವನಿ ಕೇಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಮನುಸ್ಮೃತಿ ಚಲಾವಣೆಯಲ್ಲಿಲ್ಲದ ಪುಸ್ತಕ

ಮನುಸ್ಮೃತಿ ಎಂಬುದು ಚಲಾವಣೆಯಲ್ಲಿಲ್ಲದ ಪುಸ್ತಕವಾಗಿದ್ದು, ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಆದರೆ ಯಾರಾದರೂ ಭಾರತೀಯ ಸಂವಿಧಾನದ ಬಗ್ಗೆ ಮಾತನಾಡಿದರೆ, ಪ್ರಶ್ನಿಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ಸಂಸ್ಕೃತಿಯಲ್ಲಿ ಹಲವು ವಿಷಯಗಳಿವೆ, ಸತಿಸಹಗಮನ ಪದ್ದತಿ ಕೂಡಾ ಸಂಸ್ಕೃತಿಯಾಗಿತ್ತು, ಸಂಸ್ಕೃತಿಯ ಹೆಸರಿನಲ್ಲಿ ಅದನ್ನು ಅನುಸರಿಸಬಾರದು. ಕಾಲ ಮತ್ತು ಅಗತ್ಯಗಳಿಗೆ ನಾವು ಹೊಂದಿಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು.

ಬಿಜೆಪಿಯು ನಡೆಸಲು ಉದ್ದೇಶಿಸಿದ ”ವೆಟ್ರಿವೇಲ್ ತೀರ್ಥಯಾತ್ರೆ” ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ತೀರ್ಥಯಾತ್ರೆಗೆ ಹೋಗದಿರುವುದೇ ಉತ್ತಮ, ಅದರ ಬದಲಿಗೆ ಉದ್ಯೋಗವನ್ನು ಕೊಡಿಸುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...