Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. - ಕಮಲ ಹಾಸನ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖಂಡರಾಗಿರುವ ನಟ ಕಮಲ್ ಹಾಸನ್ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜಕೀಯ ಕಾರ್ಯತಂತ್ರ ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮದು ನಿಂದನೆ ಮಾಡುವ ರಾಜಕೀಯವಲ್ಲ, ದಾರಿತೋರುವ ರಾಜಕೀಯವಾಗಿರುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಒಂದು ಲಕ್ಷ ಜನರು ’ಮಕ್ಕಳ್ ನೀದಿ ಮಯ್ಯಂ’ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಿಧ ಪಕ್ಷಗಳಲ್ಲಿ ಅನೇಕ ಒಳ್ಳೆಯ ಜನರು ಮನನೊಂದಿರುತ್ತಾರೆ. ಅವರು ನಮ್ಮೊಂದಿಗೆ ಬರಬೇಕು. ನಾವು ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ” ಎಂದರು.

ರಾಜಕೀಯದ ಬಗ್ಗೆ ರಜನಿಕಾಂತ್ ಜೊತೆ ಚರ್ಚಿಸಿದ್ದಾಗಿ ಹೇಳಿದ ಕಮಲ್, “ನಟ ರಜನಿಕಾಂತ್ ತನ್ನ ಆರೋಗ್ಯದ ಕಡೆ ಪ್ರಾಮುಖ್ಯತೆ ನೀಡುವಂತೆ ಸ್ನೇಹಿತನಾಗಿ ಸಲಹೆ ನೀಡಿದ್ದೇನೆ. ರಾಜಕೀಯಕ್ಕೆ ಬರುವ ಬಗ್ಗೆ ಅವರು ನಿರ್ಧರಿಸುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಅವರ ಬೆಂಬಲವನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ 3 ನೇ ತಂಡವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ. ಚುನಾವಣಾ ಆಯೋಗವು ನವೆಂಬರ್‌ನಲ್ಲಿ ನಮಗೆ ಅವಕಾಶ ನೀಡಿದೆ. ಆದ್ದರಿಂದ, ಮೈತ್ರಿಯ ಬಗ್ಗೆ ಮಾತನಾಡುವ ಕ್ಷಣ ಇದಲ್ಲ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕ್ಷೇತ್ರ ಸಂಶೋಧನೆ ಆಧರಿಸಿ ”ಮಕ್ಕಳ್ ನೀದಿ ಮಯ್ಯಂ” ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿದೆ. ನಾವು 100 ರಿಂದ 160 ಕ್ಷೇತ್ರದಗಳಲ್ಲಿ ಪ್ರಭಾವ ಬೀರಲಿದ್ದೇವೆ. ರಾಜಕೀಯದಲ್ಲಿ ನಮ್ಮ ನೀತಿ ”ಪ್ರಾಮಾಣಿಕತೆ” ಆಗಿದೆ. ನಾವು ಪ್ರಾಮಾಣಿಕರೆಂದು ಹೇಳಿಕೊಳ್ಳುವ ಜನರನ್ನು ಭೇಟಿಯಾಗುತ್ತೇವೆ. ಅದನ್ನು ಇತರರು ಹೇಳಬಹುದೇ ಎಂದು ಕಮಲ್‌ ಹಾಸನ್ ಪ್ರಶ್ನಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. ವಿಧಾನಸಭೆಯಲ್ಲಿ ಖಂಡಿತವಾಗಿ ”ಮಕ್ಕಳ್ ನೀದಿ ಮಯ್ಯಂ” ಪಕ್ಷದ ಧ್ವನಿ ಕೇಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಮನುಸ್ಮೃತಿ ಚಲಾವಣೆಯಲ್ಲಿಲ್ಲದ ಪುಸ್ತಕ

ಮನುಸ್ಮೃತಿ ಎಂಬುದು ಚಲಾವಣೆಯಲ್ಲಿಲ್ಲದ ಪುಸ್ತಕವಾಗಿದ್ದು, ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಆದರೆ ಯಾರಾದರೂ ಭಾರತೀಯ ಸಂವಿಧಾನದ ಬಗ್ಗೆ ಮಾತನಾಡಿದರೆ, ಪ್ರಶ್ನಿಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ಸಂಸ್ಕೃತಿಯಲ್ಲಿ ಹಲವು ವಿಷಯಗಳಿವೆ, ಸತಿಸಹಗಮನ ಪದ್ದತಿ ಕೂಡಾ ಸಂಸ್ಕೃತಿಯಾಗಿತ್ತು, ಸಂಸ್ಕೃತಿಯ ಹೆಸರಿನಲ್ಲಿ ಅದನ್ನು ಅನುಸರಿಸಬಾರದು. ಕಾಲ ಮತ್ತು ಅಗತ್ಯಗಳಿಗೆ ನಾವು ಹೊಂದಿಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು.

ಬಿಜೆಪಿಯು ನಡೆಸಲು ಉದ್ದೇಶಿಸಿದ ”ವೆಟ್ರಿವೇಲ್ ತೀರ್ಥಯಾತ್ರೆ” ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ತೀರ್ಥಯಾತ್ರೆಗೆ ಹೋಗದಿರುವುದೇ ಉತ್ತಮ, ಅದರ ಬದಲಿಗೆ ಉದ್ಯೋಗವನ್ನು ಕೊಡಿಸುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...