Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. - ಕಮಲ ಹಾಸನ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖಂಡರಾಗಿರುವ ನಟ ಕಮಲ್ ಹಾಸನ್ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜಕೀಯ ಕಾರ್ಯತಂತ್ರ ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮದು ನಿಂದನೆ ಮಾಡುವ ರಾಜಕೀಯವಲ್ಲ, ದಾರಿತೋರುವ ರಾಜಕೀಯವಾಗಿರುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಒಂದು ಲಕ್ಷ ಜನರು ’ಮಕ್ಕಳ್ ನೀದಿ ಮಯ್ಯಂ’ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಿಧ ಪಕ್ಷಗಳಲ್ಲಿ ಅನೇಕ ಒಳ್ಳೆಯ ಜನರು ಮನನೊಂದಿರುತ್ತಾರೆ. ಅವರು ನಮ್ಮೊಂದಿಗೆ ಬರಬೇಕು. ನಾವು ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ” ಎಂದರು.

ರಾಜಕೀಯದ ಬಗ್ಗೆ ರಜನಿಕಾಂತ್ ಜೊತೆ ಚರ್ಚಿಸಿದ್ದಾಗಿ ಹೇಳಿದ ಕಮಲ್, “ನಟ ರಜನಿಕಾಂತ್ ತನ್ನ ಆರೋಗ್ಯದ ಕಡೆ ಪ್ರಾಮುಖ್ಯತೆ ನೀಡುವಂತೆ ಸ್ನೇಹಿತನಾಗಿ ಸಲಹೆ ನೀಡಿದ್ದೇನೆ. ರಾಜಕೀಯಕ್ಕೆ ಬರುವ ಬಗ್ಗೆ ಅವರು ನಿರ್ಧರಿಸುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಅವರ ಬೆಂಬಲವನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ 3 ನೇ ತಂಡವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ. ಚುನಾವಣಾ ಆಯೋಗವು ನವೆಂಬರ್‌ನಲ್ಲಿ ನಮಗೆ ಅವಕಾಶ ನೀಡಿದೆ. ಆದ್ದರಿಂದ, ಮೈತ್ರಿಯ ಬಗ್ಗೆ ಮಾತನಾಡುವ ಕ್ಷಣ ಇದಲ್ಲ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕ್ಷೇತ್ರ ಸಂಶೋಧನೆ ಆಧರಿಸಿ ”ಮಕ್ಕಳ್ ನೀದಿ ಮಯ್ಯಂ” ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿದೆ. ನಾವು 100 ರಿಂದ 160 ಕ್ಷೇತ್ರದಗಳಲ್ಲಿ ಪ್ರಭಾವ ಬೀರಲಿದ್ದೇವೆ. ರಾಜಕೀಯದಲ್ಲಿ ನಮ್ಮ ನೀತಿ ”ಪ್ರಾಮಾಣಿಕತೆ” ಆಗಿದೆ. ನಾವು ಪ್ರಾಮಾಣಿಕರೆಂದು ಹೇಳಿಕೊಳ್ಳುವ ಜನರನ್ನು ಭೇಟಿಯಾಗುತ್ತೇವೆ. ಅದನ್ನು ಇತರರು ಹೇಳಬಹುದೇ ಎಂದು ಕಮಲ್‌ ಹಾಸನ್ ಪ್ರಶ್ನಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. ವಿಧಾನಸಭೆಯಲ್ಲಿ ಖಂಡಿತವಾಗಿ ”ಮಕ್ಕಳ್ ನೀದಿ ಮಯ್ಯಂ” ಪಕ್ಷದ ಧ್ವನಿ ಕೇಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಮನುಸ್ಮೃತಿ ಚಲಾವಣೆಯಲ್ಲಿಲ್ಲದ ಪುಸ್ತಕ

ಮನುಸ್ಮೃತಿ ಎಂಬುದು ಚಲಾವಣೆಯಲ್ಲಿಲ್ಲದ ಪುಸ್ತಕವಾಗಿದ್ದು, ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಆದರೆ ಯಾರಾದರೂ ಭಾರತೀಯ ಸಂವಿಧಾನದ ಬಗ್ಗೆ ಮಾತನಾಡಿದರೆ, ಪ್ರಶ್ನಿಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ಸಂಸ್ಕೃತಿಯಲ್ಲಿ ಹಲವು ವಿಷಯಗಳಿವೆ, ಸತಿಸಹಗಮನ ಪದ್ದತಿ ಕೂಡಾ ಸಂಸ್ಕೃತಿಯಾಗಿತ್ತು, ಸಂಸ್ಕೃತಿಯ ಹೆಸರಿನಲ್ಲಿ ಅದನ್ನು ಅನುಸರಿಸಬಾರದು. ಕಾಲ ಮತ್ತು ಅಗತ್ಯಗಳಿಗೆ ನಾವು ಹೊಂದಿಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು.

ಬಿಜೆಪಿಯು ನಡೆಸಲು ಉದ್ದೇಶಿಸಿದ ”ವೆಟ್ರಿವೇಲ್ ತೀರ್ಥಯಾತ್ರೆ” ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ತೀರ್ಥಯಾತ್ರೆಗೆ ಹೋಗದಿರುವುದೇ ಉತ್ತಮ, ಅದರ ಬದಲಿಗೆ ಉದ್ಯೋಗವನ್ನು ಕೊಡಿಸುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...