Homeಮುಖಪುಟವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. - ಕಮಲ ಹಾಸನ್

- Advertisement -
- Advertisement -

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವಾದ ”ಮಕ್ಕಳ್ ನೀದಿ ಮಯ್ಯಂ” ಉತ್ತಮ ಜನರೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮುಖಂಡರಾಗಿರುವ ನಟ ಕಮಲ್ ಹಾಸನ್ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ನಟ ರಜನಿಕಾಂತ್ ಬೆಂಬಲವನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಜಕೀಯ ಕಾರ್ಯತಂತ್ರ ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮದು ನಿಂದನೆ ಮಾಡುವ ರಾಜಕೀಯವಲ್ಲ, ದಾರಿತೋರುವ ರಾಜಕೀಯವಾಗಿರುತ್ತದೆ. ಕಳೆದ ಕೆಲವು ತಿಂಗಳುಗಳಲ್ಲಿ ಒಂದು ಲಕ್ಷ ಜನರು ’ಮಕ್ಕಳ್ ನೀದಿ ಮಯ್ಯಂ’ ಸೇರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ” ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಇದನ್ನೂ ಓದಿ: ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ವಿವಿಧ ಪಕ್ಷಗಳಲ್ಲಿ ಅನೇಕ ಒಳ್ಳೆಯ ಜನರು ಮನನೊಂದಿರುತ್ತಾರೆ. ಅವರು ನಮ್ಮೊಂದಿಗೆ ಬರಬೇಕು. ನಾವು ಒಳ್ಳೆಯವರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ” ಎಂದರು.

ರಾಜಕೀಯದ ಬಗ್ಗೆ ರಜನಿಕಾಂತ್ ಜೊತೆ ಚರ್ಚಿಸಿದ್ದಾಗಿ ಹೇಳಿದ ಕಮಲ್, “ನಟ ರಜನಿಕಾಂತ್ ತನ್ನ ಆರೋಗ್ಯದ ಕಡೆ ಪ್ರಾಮುಖ್ಯತೆ ನೀಡುವಂತೆ ಸ್ನೇಹಿತನಾಗಿ ಸಲಹೆ ನೀಡಿದ್ದೇನೆ. ರಾಜಕೀಯಕ್ಕೆ ಬರುವ ಬಗ್ಗೆ ಅವರು ನಿರ್ಧರಿಸುತ್ತಾರೆ. ವಿಧಾನಸಭಾ ಚುನಾವಣೆಯಲ್ಲಿ ರಜಿನಿಕಾಂತ್ ಅವರ ಬೆಂಬಲವನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ 3 ನೇ ತಂಡವನ್ನು ರಚಿಸಲಾಗಿದೆ ಎಂದು ನಾನು ಹೇಳುತ್ತೇನೆ. ಚುನಾವಣಾ ಆಯೋಗವು ನವೆಂಬರ್‌ನಲ್ಲಿ ನಮಗೆ ಅವಕಾಶ ನೀಡಿದೆ. ಆದ್ದರಿಂದ, ಮೈತ್ರಿಯ ಬಗ್ಗೆ ಮಾತನಾಡುವ ಕ್ಷಣ ಇದಲ್ಲ ಎಂದು ಕಮಲ್ ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮ ವಿಚಾರ ಪಾಲಿಸಿದ್ದೀವಿ. ನಮ್ಮ ಮಾತು ನಿಮಗೆ ಕೇಳುತ್ತಿದೆಯೇ? – ಪ್ರಧಾನಿ ಮೋದಿಗೆ ಕಮಲ್‌ ಹಾಸನ್‌ ಬಹಿರಂಗ ಪತ್ರ

ಕ್ಷೇತ್ರ ಸಂಶೋಧನೆ ಆಧರಿಸಿ ”ಮಕ್ಕಳ್ ನೀದಿ ಮಯ್ಯಂ” ತಮಿಳುನಾಡಿನ ಮೂರನೇ ಅತಿದೊಡ್ಡ ಪಕ್ಷವಾಗಿದೆ. ನಾವು 100 ರಿಂದ 160 ಕ್ಷೇತ್ರದಗಳಲ್ಲಿ ಪ್ರಭಾವ ಬೀರಲಿದ್ದೇವೆ. ರಾಜಕೀಯದಲ್ಲಿ ನಮ್ಮ ನೀತಿ ”ಪ್ರಾಮಾಣಿಕತೆ” ಆಗಿದೆ. ನಾವು ಪ್ರಾಮಾಣಿಕರೆಂದು ಹೇಳಿಕೊಳ್ಳುವ ಜನರನ್ನು ಭೇಟಿಯಾಗುತ್ತೇವೆ. ಅದನ್ನು ಇತರರು ಹೇಳಬಹುದೇ ಎಂದು ಕಮಲ್‌ ಹಾಸನ್ ಪ್ರಶ್ನಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಾನು ಖಂಡಿತವಾಗಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದು ನಾಮಪತ್ರಕ್ಕೆ ಸಹಿ ಹಾಕಿದಾಗ ನಿಮಗೆ ತಿಳಿಯುತ್ತದೆ. ವಿಧಾನಸಭೆಯಲ್ಲಿ ಖಂಡಿತವಾಗಿ ”ಮಕ್ಕಳ್ ನೀದಿ ಮಯ್ಯಂ” ಪಕ್ಷದ ಧ್ವನಿ ಕೇಳಿಸಲಾಗುವುದು ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಮನುಸ್ಮೃತಿ ಚಲಾವಣೆಯಲ್ಲಿಲ್ಲದ ಪುಸ್ತಕ

ಮನುಸ್ಮೃತಿ ಎಂಬುದು ಚಲಾವಣೆಯಲ್ಲಿಲ್ಲದ ಪುಸ್ತಕವಾಗಿದ್ದು, ಅದರ ಬಗ್ಗೆ ಯಾವುದೇ ಪ್ರಶ್ನೆಯಿಲ್ಲ. ಆದರೆ ಯಾರಾದರೂ ಭಾರತೀಯ ಸಂವಿಧಾನದ ಬಗ್ಗೆ ಮಾತನಾಡಿದರೆ, ಪ್ರಶ್ನಿಸಿದರೆ ನಾನು ಪ್ರತಿಕ್ರಿಯಿಸುತ್ತೇನೆ. ಸಂಸ್ಕೃತಿಯಲ್ಲಿ ಹಲವು ವಿಷಯಗಳಿವೆ, ಸತಿಸಹಗಮನ ಪದ್ದತಿ ಕೂಡಾ ಸಂಸ್ಕೃತಿಯಾಗಿತ್ತು, ಸಂಸ್ಕೃತಿಯ ಹೆಸರಿನಲ್ಲಿ ಅದನ್ನು ಅನುಸರಿಸಬಾರದು. ಕಾಲ ಮತ್ತು ಅಗತ್ಯಗಳಿಗೆ ನಾವು ಹೊಂದಿಕೊಳ್ಳಬೇಕು ಎಂದು ಕಮಲ್ ಹಾಸನ್ ಹೇಳಿದರು.

ಬಿಜೆಪಿಯು ನಡೆಸಲು ಉದ್ದೇಶಿಸಿದ ”ವೆಟ್ರಿವೇಲ್ ತೀರ್ಥಯಾತ್ರೆ” ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ತೀರ್ಥಯಾತ್ರೆಗೆ ಹೋಗದಿರುವುದೇ ಉತ್ತಮ, ಅದರ ಬದಲಿಗೆ ಉದ್ಯೋಗವನ್ನು ಕೊಡಿಸುವುದೇ ನನ್ನ ಆದ್ಯತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ ನಡೆಸಲು ಬಿಜೆಪಿ ಕೋರಿದ್ದ ಅನುಮತಿ ತಿರಸ್ಕರಿಸಿದ ತಮಿಳುನಾಡು ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...