Homeಮುಖಪುಟನನ್ನ ಪತಿ ಸಾವಿಗೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾರಣ: ರಾಜೀವ್ ತ್ಯಾಗಿ ಪತ್ನಿ ಆರೋಪ

ನನ್ನ ಪತಿ ಸಾವಿಗೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾರಣ: ರಾಜೀವ್ ತ್ಯಾಗಿ ಪತ್ನಿ ಆರೋಪ

ಸಂಬಿತ್ ಪಾತ್ರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಟಿವಿ ಡಿಬೇಟ್‌ಗಳ್ನು ನಿರ್ಭಂಧಿಸಬೇಕು ಎಂಬ ಕೂಗುಗಳು ಜೋರಾಗಿದ್ದರು ಅದು ಸುಲಭಕ್ಕೆ ಸಾಧ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಆಜ್ ತಕ್ ಸುದ್ದಿ ವಾಹಿನಿಯ ಡಿಬೇಟ್‌ ನಂತರ ಹೃದಯಾಘಾತದಿಂದಾಗಿ ನಿಧನರಾದ ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಅವರ ಪತ್ನಿ, ನನ್ನ ಪತಿಯ ಸಾವಿಗೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕಾರಣ ಎಂದು ಆರೋಪಿಸಿದ್ದಾರೆ.

ರಾಜೀವ್ ತ್ಯಾಗಿಯ ಪತ್ನಿ “ಹತ್ಯಾರಾ ವಹಿ (ಸಂಬಿತ್ ಪಾತ್ರ) ಹೈ” ಎಂದು ಹೇಳಿರುವ ವೀಡಿಯೋವನ್ನು ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು ತಮ್ಮ ಫೇಸ್‌ಬುಕ್ ಟೈಮ್‌ಲೈನ್‌ನಲ್ಲಿ ಹಂಚಿಕೊಂಡಿದ್ದಾರೆ.

“ವಾಹಿನಿಯ ಚರ್ಚೆಯಲ್ಲಿ ಪದೇ ಪದೇ “ಜೈಚಂದ್” ಎಂದು ಸಂಬೋಧಿಸಿದ್ದು ಅವರಿಗೆ ಅತಿ ಹೆಚ್ಚು ಘಾಸಿ ಮತ್ತು ನೋವನ್ನುಂಟು ಮಾಡಿದೆ. ಬಹುಶಃ ಅವರ ನಿಧನಕ್ಕೆ ಇದೇ ಕಾರಣವಾಯಿತು. ಅವರು ತುಂಬಾ ಬಲಶಾಲಿಯಾಗಿದ್ದರೂ…” ಎಂದು ಅವರು

“ಈ ಜನರು ನನ್ನನ್ನು ಕೊಂದರು” ಎಂಬುದು ತ್ಯಾಗಿ ಅವರ ಕೊನೆಯ ಮಾತುಗಳು ಎಂದು ಅವರ ಪತ್ನಿ ವೀಡಿಯೋದಲ್ಲಿ ಹೇಳಿದ್ದಾರೆ. ಅಂತಹ ಅಪಾಯಕಾರಿ ಟಿವಿ ಚರ್ಚೆಗಳ ಮೇಲೆ ನಿಷೇಧ ಹೇರಿ ಎಂದೂ ಒತ್ತಾಯಿಸಿದ್ದಾರೆ.

“ಅವಹೇಳನಕಾರಿ ಟೀಕೆಗಳನ್ನು ಎದುರಿಸಿದ ತ್ಯಾಗಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅವರು ಒತ್ತಡವನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಸಂಬಿತ್ ಪಾತ್ರ ದ್ವೇಷ ಹರಡುವ ಮಾತುಗಳನ್ನಾಡಿದ್ದಾರೆ ಮತ್ತು ಸಹ ಪ್ಯಾನೆಲಿಸ್ಟ್‌ಗೆ ಅಪಚಾರ ಮಾಡಿದ್ದಾರೆ ಎಂದು ಅವರ ವಿರುದ್ಧ ಪಶ್ಚಿಮ ಬಂಗಾಳ ಯುವ ಕಾಂಗ್ರೆಸ್ ಅಧ್ಯಕ್ಷ ಶಾದಾಬ್ ಖಾನ್ ದೂರು ಸಲ್ಲಿಸಿದ್ದಾರೆ.

ಸಂಬಿತ್ ಪಾತ್ರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಟಿವಿ ಡಿಬೇಟ್‌ಗಳ್ನು ನಿರ್ಭಂಧಿಸಬೇಕು ಎಂಬ ಕೂಗುಗಳು ಜೋರಾಗಿದ್ದರು ಅದು ಸುಲಭಕ್ಕೆ ಸಾಧ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

“ಹೆಚ್ಚಿನ ಸುದ್ದಿ ಚಾನೆಲ್‌ಗಳಿಗೂ ಪತ್ರಿಕೋದ್ಯಮಕ್ಕೂ ಯಾವುದೇ ಸಂಬಂಧವಿಲ್ಲ. ಈ ಚಾನೆಲ್‌ಗಳು ಆಡಳಿತದ ಬ್ಯಾಂಡ್-ಪಾರ್ಟಿಯಾಗಿ ಕಾರ್ಯನಿರ್ವಹಿಸುತ್ತವೆ. ಟಿಆರ್‌ಪಿ ಸಲುವಾಗಿ ಈ ಚಾನೆಲ್‌ಗಳು ತಪ್ಪಾದ ಮಾಹಿತಿಯ ಆಧಾರದ ಮೇಲೆ ಇಂತಹ ಕ್ರೂರ ನಾಟಕಗಳನ್ನು ಆಯೋಜಿಸುತ್ತವೆ. ಅವರ ಪ್ರದರ್ಶನಗಳು ಟಿಆರ್‌ಪಿಗೆ ಮಾತ್ರ ಸೀಮಿತವಾಗಿಲ್ಲ” ಎಂದು ರಾಜ್ಯಸಭಾ ಟಿವಿಯ ಮುಖ್ಯಸ್ಥರಾಗಿರುವ ಹಿರಿಯ ಪತ್ರಕರ್ತ ಊರ್ಮಿಳೇಶ್ ಹೇಳಿದ್ದಾರೆ.


ಇದನ್ನೂ ಓದಿ: ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...