Homeಕರ್ನಾಟಕನನ್ನ ಬಳಿ ಯಾರೂ ಲಂಚ ಕೇಳಿಲ್ಲ: ದಸರಾ ಉತ್ಸವದಲ್ಲಿ ಕಮಿಷನ್ ವಿವಾದದ ಬಗ್ಗೆ ಪಂ.ರಾಜೀವ್ ಸ್ಪಷ್ಟನೆ

ನನ್ನ ಬಳಿ ಯಾರೂ ಲಂಚ ಕೇಳಿಲ್ಲ: ದಸರಾ ಉತ್ಸವದಲ್ಲಿ ಕಮಿಷನ್ ವಿವಾದದ ಬಗ್ಗೆ ಪಂ.ರಾಜೀವ್ ಸ್ಪಷ್ಟನೆ

- Advertisement -
- Advertisement -

ನಾಡಹಬ್ಬ ದಸರಾ ಸಾಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು  ಅಂತರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಸಂಭಾವನೆಯಲ್ಲಿ ಪಂಡಿತ ರಾಜೀವ್‌ ತಾರಾನಾಥ್‌ ಅವರ ಬಳಿ ಅಧಿಕಾರಿಗಳು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆನ್ನಲಾದ ಬಗ್ಗೆ ಪತ್ರಿಕೆಯೊಂದರಲ್ಲಿ ವಿಶೇಷ ವರದಿಯಾಗಿತ್ತು. ವರದಿಯನ್ನು ಸ್ವತಃ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್‌.ಸಿ ಮಹದೇವಪ್ಪ ಅವರು ಟ್ವೀಟ್ ಮಾಡಿ ಜಿಲ್ಲಾಧಿಕಾರಿಗೆ ತನಿಖೆಗೆ ಆದೇಶಿಸಿರುವುದಾಗಿ ಹೇಳಿದ್ದರು.

ಆದರೆ ಈ ಬಗ್ಗೆ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರು ಪ್ರತಿಕ್ರಿಯಿಸಿದ್ದು, ನನ್ನ ಬಳಿ ಯಾವ ಅಧಿಕಾರಿಯೂ ಬಂದಿಲ್ಲ, ಲಂಚ ಕೇಳಿಲ್ಲ ಎಂದು ತಮ್ಮನ್ನು ಭೇಟಿ ಮಾಡಿದ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದಾರೆ.

ಇಬ್ಬರು ಅಧಿಕಾರಿಗಳು ತಾರಾನಾಥ ಅವರನ್ನು ಸಂಪರ್ಕಿಸಿ ನೀವು ಕೇಳಿದ ಸಂಭಾವನೆಗಿಂತ 3 ಲಕ್ಷ ರೂ. ಹೆಚ್ಚು ಕೊಡುತ್ತೇವೆ. ಹಣ ಆರ್‌ಟಿಜಿಎಸ್ ಮೂಲಕ ನಿಮ್ಮ ಖಾತೆಗೆ ಬರುತ್ತದೆ. ಹೆಚ್ಚುವರಿಯಾಗಿ ಜಮೆಯಾಗುವ 3 ಲಕ್ಷ ರೂ. ಹಣವನ್ನು ನಮಗೆ ವಾಪಸ್ ನೀಡಬೇಕು ಎಂದು ಹೇಳಿದ್ದರು. ಇದಕ್ಕೆ ಕಮೀಷನ್ ಕೇಳಿದ ಅಧಿಕಾರಿಗಳಿಗೆ ಛೀಮಾರಿ ಹಾಕಿ ತಾರನಾಥ್‌ ಅವರು ಕಳುಹಿಸಿದ್ದರು ಎಂದು ‘ಆಂದೋಲನ’ ಪತ್ರಿಕೆಯಲ್ಲಿ ವರದಿಗಾರ ನಝೀರ್‌ ಅಹ್ಮದ್‌ ಅವರು ಬರೆದ ವಿಶೇಷ ವರದಿ ತಿಳಿಸಿತ್ತು.

ಈ ಬಗ್ಗೆ ಆಂದೋಲನ ಪತ್ರಿಕೆಯ ವರದಿಗಾರ ನಝೀರ್‌ ಅಹ್ಮದ್‌ ಅವರು ಪ್ರತಿಕ್ರಿಯಿಸಿದ್ದು, ಕಮಿಷನ್‌ ಬೇಡಿಕೆ ಬಗ್ಗೆ ತಾರಾನಾಥ್‌ ಅವರು ಅವರ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅವರ ಆಪ್ತರೊಬ್ಬರು ನಮ್ಮ ಪತ್ರಿಕೆಯ ಕಚೇರಿಗೆ ಫೋನ್ ಮಾಡಿ ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ನಾನು ಖುದ್ದು ತಾರಾನಾಥ್‌ ಅವರನ್ನು ಭೇಟಿಯಾಗಿ ವಿಚಾರಿಸಿದಾಗ, ವ್ಯಾಪಕವಾಗಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ. ಆದರೆ ತಮ್ಮ ಬಳಿ ಅಧಿಕಾರಿಗಳು ಕಮಿಷನ್‌ಗೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು ಎಂದು ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...