Homeಮುಖಪುಟರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

'ಅತ್ಯಾಚಾರಿಗಳಿಗೆ ಹಾರ ಹಾಕಿದ ಬಿಜೆಪಿಯವರೇ ಪ್ರತಿದಿನ ವಂದೇ ಮಾತರಂ ಎಂದು ಕೂಗುತ್ತಾರೆ..'

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, “ರಾಜ್‌ಕೋಟ್‌ನಲ್ಲಿ ನಡೆದ ಭೀಕರ ಘಟನೆಯಿಂದ ಹೃದಯ ವಿದ್ರಾವಕವಾಗಿದ್ದು, ಕೋಪ ಹುಟ್ಟುಹಾಕಿದೆ. 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಬ್ಬಿಣದ ರಾಡ್‌ನಿಂದ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಆರೋಪಿಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಅಪರಾಧಗಳನ್ನು ತಡೆಯುವ ವಿಷಯದಲ್ಲಿ ಗುಜರಾತ್ ಸರ್ಕಾರ ಮತ್ತು ಪೊಲೀಸರು ಎಲ್ಲಿದ್ದರು? ಇದು ಮತ್ತೆ ಮತ್ತೆ ಸಂಭವಿಸಲು ಯಾವ ರೀತಿಯ ವ್ಯವಸ್ಥೆ ಅವಕಾಶ ನೀಡುತ್ತದೆ? ಇದನ್ನು ನಾವು ಮರೆಯಬಾರದು: ಬಿಲ್ಕಿಸ್ ಬಾನೋ ಅತ್ಯಾಚಾರಿಗಳಿಗೆ ಹಾರ ಹಾಕಿದ ಅದೇ ಬಿಜೆಪಿಯ ಇದೇ ಜನರು ಪ್ರತಿದಿನ ‘ವಂದೇ ಮಾತರಂ’ ಎಂದು ಕೂಗುತ್ತಾರೆ. ಆದರೆ, ಈ ನೈಜ ವಿಷಯಗಳ ಬಗ್ಗೆ ಬಾಯಿ ಮುಚ್ಚಿರುತ್ತಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ‘ಮಾ’ ಮಾತೃಭೂಮಿಯಾಗಿದ್ದರೆ, ನಿಜವಾದ ಮಾತೆ ನಮ್ಮ ಸಮಾಜದ ಮಹಿಳೆಯರು. ಹುಡುಗಿಯರು ಕೂಡ. ಅವರು ಗುಜರಾತ್‌ನಲ್ಲಿ ಸುರಕ್ಷಿತವಾಗಿಲ್ಲ, ಅದು ವಂದೇ ಮಾತರಂಗೆ ಮಾಡಿದ ದೊಡ್ಡ ಅವಮಾನ” ಎಂದು ಅವರು ಹೇಳಿದ್ದಾರೆ.

ಘಟನೆ ಹಿನ್ನಲೆ:

ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ ಕೃಷಿ ಕಾರ್ಮಿಕನನ್ನು ಬಂಧಿಸುವ ಮೂಲಕ ಪೊಲೀಸರು ಆರೋಪಿಯನ್ನು ಅಲ್ಪಸಮಯದಲ್ಲೇ ಪತ್ತೆಹಚ್ಚಿದ್ದಾರೆ.

ದಾಹೋದ್ ಜಿಲ್ಲೆಯಲ್ಲಿ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗು ಕಿರುಚಿದಾಗ, ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನು ತುರುಕಿ ತೀವ್ರ ರಕ್ತಸ್ರಾವವಾಗುವಂತೆ ಗಾಯಗೊಳಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ.

ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿತು, ಆಕೆ ಹೊಲದ ಬಳಿ ಗಾಯಗೊಂಡಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ಮೂಲಗಳ ಪ್ರಕಾರ, ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...