Homeಮುಖಪುಟರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

'ಅತ್ಯಾಚಾರಿಗಳಿಗೆ ಹಾರ ಹಾಕಿದ ಬಿಜೆಪಿಯವರೇ ಪ್ರತಿದಿನ ವಂದೇ ಮಾತರಂ ಎಂದು ಕೂಗುತ್ತಾರೆ..'

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, “ರಾಜ್‌ಕೋಟ್‌ನಲ್ಲಿ ನಡೆದ ಭೀಕರ ಘಟನೆಯಿಂದ ಹೃದಯ ವಿದ್ರಾವಕವಾಗಿದ್ದು, ಕೋಪ ಹುಟ್ಟುಹಾಕಿದೆ. 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಬ್ಬಿಣದ ರಾಡ್‌ನಿಂದ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಆರೋಪಿಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಅಪರಾಧಗಳನ್ನು ತಡೆಯುವ ವಿಷಯದಲ್ಲಿ ಗುಜರಾತ್ ಸರ್ಕಾರ ಮತ್ತು ಪೊಲೀಸರು ಎಲ್ಲಿದ್ದರು? ಇದು ಮತ್ತೆ ಮತ್ತೆ ಸಂಭವಿಸಲು ಯಾವ ರೀತಿಯ ವ್ಯವಸ್ಥೆ ಅವಕಾಶ ನೀಡುತ್ತದೆ? ಇದನ್ನು ನಾವು ಮರೆಯಬಾರದು: ಬಿಲ್ಕಿಸ್ ಬಾನೋ ಅತ್ಯಾಚಾರಿಗಳಿಗೆ ಹಾರ ಹಾಕಿದ ಅದೇ ಬಿಜೆಪಿಯ ಇದೇ ಜನರು ಪ್ರತಿದಿನ ‘ವಂದೇ ಮಾತರಂ’ ಎಂದು ಕೂಗುತ್ತಾರೆ. ಆದರೆ, ಈ ನೈಜ ವಿಷಯಗಳ ಬಗ್ಗೆ ಬಾಯಿ ಮುಚ್ಚಿರುತ್ತಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ‘ಮಾ’ ಮಾತೃಭೂಮಿಯಾಗಿದ್ದರೆ, ನಿಜವಾದ ಮಾತೆ ನಮ್ಮ ಸಮಾಜದ ಮಹಿಳೆಯರು. ಹುಡುಗಿಯರು ಕೂಡ. ಅವರು ಗುಜರಾತ್‌ನಲ್ಲಿ ಸುರಕ್ಷಿತವಾಗಿಲ್ಲ, ಅದು ವಂದೇ ಮಾತರಂಗೆ ಮಾಡಿದ ದೊಡ್ಡ ಅವಮಾನ” ಎಂದು ಅವರು ಹೇಳಿದ್ದಾರೆ.

ಘಟನೆ ಹಿನ್ನಲೆ:

ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ ಕೃಷಿ ಕಾರ್ಮಿಕನನ್ನು ಬಂಧಿಸುವ ಮೂಲಕ ಪೊಲೀಸರು ಆರೋಪಿಯನ್ನು ಅಲ್ಪಸಮಯದಲ್ಲೇ ಪತ್ತೆಹಚ್ಚಿದ್ದಾರೆ.

ದಾಹೋದ್ ಜಿಲ್ಲೆಯಲ್ಲಿ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗು ಕಿರುಚಿದಾಗ, ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನು ತುರುಕಿ ತೀವ್ರ ರಕ್ತಸ್ರಾವವಾಗುವಂತೆ ಗಾಯಗೊಳಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ.

ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿತು, ಆಕೆ ಹೊಲದ ಬಳಿ ಗಾಯಗೊಂಡಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ಮೂಲಗಳ ಪ್ರಕಾರ, ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...