Homeಮುಖಪುಟರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

'ಅತ್ಯಾಚಾರಿಗಳಿಗೆ ಹಾರ ಹಾಕಿದ ಬಿಜೆಪಿಯವರೇ ಪ್ರತಿದಿನ ವಂದೇ ಮಾತರಂ ಎಂದು ಕೂಗುತ್ತಾರೆ..'

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, “ರಾಜ್‌ಕೋಟ್‌ನಲ್ಲಿ ನಡೆದ ಭೀಕರ ಘಟನೆಯಿಂದ ಹೃದಯ ವಿದ್ರಾವಕವಾಗಿದ್ದು, ಕೋಪ ಹುಟ್ಟುಹಾಕಿದೆ. 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಬ್ಬಿಣದ ರಾಡ್‌ನಿಂದ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಆರೋಪಿಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಅಪರಾಧಗಳನ್ನು ತಡೆಯುವ ವಿಷಯದಲ್ಲಿ ಗುಜರಾತ್ ಸರ್ಕಾರ ಮತ್ತು ಪೊಲೀಸರು ಎಲ್ಲಿದ್ದರು? ಇದು ಮತ್ತೆ ಮತ್ತೆ ಸಂಭವಿಸಲು ಯಾವ ರೀತಿಯ ವ್ಯವಸ್ಥೆ ಅವಕಾಶ ನೀಡುತ್ತದೆ? ಇದನ್ನು ನಾವು ಮರೆಯಬಾರದು: ಬಿಲ್ಕಿಸ್ ಬಾನೋ ಅತ್ಯಾಚಾರಿಗಳಿಗೆ ಹಾರ ಹಾಕಿದ ಅದೇ ಬಿಜೆಪಿಯ ಇದೇ ಜನರು ಪ್ರತಿದಿನ ‘ವಂದೇ ಮಾತರಂ’ ಎಂದು ಕೂಗುತ್ತಾರೆ. ಆದರೆ, ಈ ನೈಜ ವಿಷಯಗಳ ಬಗ್ಗೆ ಬಾಯಿ ಮುಚ್ಚಿರುತ್ತಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ‘ಮಾ’ ಮಾತೃಭೂಮಿಯಾಗಿದ್ದರೆ, ನಿಜವಾದ ಮಾತೆ ನಮ್ಮ ಸಮಾಜದ ಮಹಿಳೆಯರು. ಹುಡುಗಿಯರು ಕೂಡ. ಅವರು ಗುಜರಾತ್‌ನಲ್ಲಿ ಸುರಕ್ಷಿತವಾಗಿಲ್ಲ, ಅದು ವಂದೇ ಮಾತರಂಗೆ ಮಾಡಿದ ದೊಡ್ಡ ಅವಮಾನ” ಎಂದು ಅವರು ಹೇಳಿದ್ದಾರೆ.

ಘಟನೆ ಹಿನ್ನಲೆ:

ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ ಕೃಷಿ ಕಾರ್ಮಿಕನನ್ನು ಬಂಧಿಸುವ ಮೂಲಕ ಪೊಲೀಸರು ಆರೋಪಿಯನ್ನು ಅಲ್ಪಸಮಯದಲ್ಲೇ ಪತ್ತೆಹಚ್ಚಿದ್ದಾರೆ.

ದಾಹೋದ್ ಜಿಲ್ಲೆಯಲ್ಲಿ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗು ಕಿರುಚಿದಾಗ, ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನು ತುರುಕಿ ತೀವ್ರ ರಕ್ತಸ್ರಾವವಾಗುವಂತೆ ಗಾಯಗೊಳಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ.

ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿತು, ಆಕೆ ಹೊಲದ ಬಳಿ ಗಾಯಗೊಂಡಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ಮೂಲಗಳ ಪ್ರಕಾರ, ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...