Homeಮುಖಪುಟರಾಜ್‌ಕೋಟ್‌: ಬುಲ್ಡೋಜರ್ ನೇತೃತ್ವದಲ್ಲಿ ಸನಾತನಿ ರಥಯಾತ್ರೆ

ರಾಜ್‌ಕೋಟ್‌: ಬುಲ್ಡೋಜರ್ ನೇತೃತ್ವದಲ್ಲಿ ಸನಾತನಿ ರಥಯಾತ್ರೆ

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನ ನಾನಾ ಮಾವಾ ಪ್ರದೇಶದಲ್ಲಿರುವ ಜಗನ್ನಾಥ ದೇವಸ್ಥಾನದಿಂದ ಮಂಗಳವಾರ ಬುಲ್ಡೋಜರ್ ನೇತೃತ್ವದಲ್ಲಿ ರಥಯಾತ್ರೆ ನಡೆಸಲಾಯಿತು. ಬುಲ್ಡೋಜರ್‌ನ ಮುಂಬಾಗಕ್ಕೆ ‘ಸನಾತನಿ ಬುಲ್ಡೋಜರ್’ ಎಂಬ ಬ್ಯಾನರ್ ಹಾಕಲಾಗಿದೆ.

ಈ ಬಗ್ಗೆ ರಾಜ್‌ಕೋಟ್‌ನ ಜಗನ್ನಾಥ ದೇವಸ್ಥಾನದ ಪ್ರಧಾನ ಅರ್ಚಕ ಮನಮೋಹನದಾಸ್ ಅವರು ಮಾತನಾಡಿದ್ದು, ”ಈ ವಿಶೇಷ ರಥಯಾತ್ರೆಯಲ್ಲಿ ಸನಾತನಿ ಬುಲ್ಡೋಜರ್ ಇದೆ. ಸನಾತನ ಧರ್ಮವನ್ನು ರಕ್ಷಿಸುವುದು ಮತ್ತು ಪ್ರಚಾರ ಮಾಡುವುದು ಬುಲ್ಡೋಜರ್‌ನ ಉದ್ದೇಶವಾಗಿದೆ” ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಬೆಳಗ್ಗೆ 9.30ರ ಸುಮಾರಿಗೆ ದೇವಸ್ಥಾನದಲ್ಲಿ ದೇವರ ಪೂಜೆ ನೆರವೇರಿಸಿದ ಬಳಿಕ ಯಾತ್ರೆಗೆ ಚಾಲನೆ ನೀಡಲಾಯಿತು. ಧಾರ್ಮಿಕ ಮೆರವಣಿಗೆಯಲ್ಲಿ, ಭಗವಾನ್ ಜಗನ್ನಾಥ ಅಥವಾ ಭಗವಾನ್ ಕೃಷ್ಣ, ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರೆಯ ವಿಗ್ರಹಗಳನ್ನು ರಥಗಳಲ್ಲಿ ಇರಿಸಲಾಗುತ್ತದೆ ಮತ್ತು ನಗರದ ತುಂಬಾ ಮೆರವಣಿಗೆ ಮಾಡಲಾಯಿತು.

ರಾಜ್‌ಕೋಟ್‌ನ ಪ್ರಮುಖ ರಸ್ತೆಗಳ ಮೂಲಕ ಈ ಯಾತ್ರೆಯು ಹಾದು ಹೋಗುತ್ತದೆ. ಒಟ್ಟು 26 ಕಿಮೀ ಸಾಗುವ ಯಾತ್ರೆಯು ಸಂಜೆಯ ನಂತರ ಜಗನ್ನಾಥ ದೇವಸ್ಥಾನದಲ್ಲಿ ಮುಕ್ತಾಯಗೊಳ್ಳಲಿದೆ.

ಜಗನ್ನಾಥ ದೇವಾಲಯದ ಈ ಬುಲ್ಡೋಜರ್ ರಥಯಾತ್ರೆಯನ್ನು ಆಯೋಜಿಸುವ ಪ್ರಮುಖರಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ರಾಜು ಜುಂಜಾ ಮಾತನಾಡಿ, ”ಏಕತೆಯ ಸಂದೇಶವನ್ನು ಕಳುಹಿಸಲು ಬುಲ್ಡೋಜರ್ ಅನ್ನು ಅಶ್ವದಳದಲ್ಲಿ ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ರಾಜ್‌ಕೋಟ್‌ ನಗರವು ಹೆಸರುವಾಸಿಯಾಗಿದ್ದು, ಮುಂಬರುವ ಕೃಷ್ಣ ಜನ್ಮಾಷ್ಟಮಿಯಂದು ಮೆರವಣಿಗೆಗಳು ನಡೆಯಲಿವೆ ಎಂದು ಮಾಜಿ ಸಿಎಂ ವಿಜಯ್ ರೂಪಾನಿ ಹೇಳಿದರು.

ಇದನ್ನೂ ಓದಿ: ನಮ್ಮನ್ನು ಎದುರು ಹಾಕಿಕೊಂಡರೆ ದಕ್ಕಿಸಿಕೊಳ್ಳುವುದು ನಿಮ್ಮಿಂದ ಸಾಧ್ಯವಿಲ್ಲ: ಸೆಂಥಿಲ್ ಬಾಲಾಜಿ ಬಂಧನದ ಕುರಿತು ಬಿಜೆಪಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...