Homeಮುಖಪುಟರಾಜ್‌ಕೋಟ್‌: ಬುಲ್ಡೋಜರ್ ನೇತೃತ್ವದಲ್ಲಿ ಸನಾತನಿ ರಥಯಾತ್ರೆ

ರಾಜ್‌ಕೋಟ್‌: ಬುಲ್ಡೋಜರ್ ನೇತೃತ್ವದಲ್ಲಿ ಸನಾತನಿ ರಥಯಾತ್ರೆ

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನ ನಾನಾ ಮಾವಾ ಪ್ರದೇಶದಲ್ಲಿರುವ ಜಗನ್ನಾಥ ದೇವಸ್ಥಾನದಿಂದ ಮಂಗಳವಾರ ಬುಲ್ಡೋಜರ್ ನೇತೃತ್ವದಲ್ಲಿ ರಥಯಾತ್ರೆ ನಡೆಸಲಾಯಿತು. ಬುಲ್ಡೋಜರ್‌ನ ಮುಂಬಾಗಕ್ಕೆ ‘ಸನಾತನಿ ಬುಲ್ಡೋಜರ್’ ಎಂಬ ಬ್ಯಾನರ್ ಹಾಕಲಾಗಿದೆ.

ಈ ಬಗ್ಗೆ ರಾಜ್‌ಕೋಟ್‌ನ ಜಗನ್ನಾಥ ದೇವಸ್ಥಾನದ ಪ್ರಧಾನ ಅರ್ಚಕ ಮನಮೋಹನದಾಸ್ ಅವರು ಮಾತನಾಡಿದ್ದು, ”ಈ ವಿಶೇಷ ರಥಯಾತ್ರೆಯಲ್ಲಿ ಸನಾತನಿ ಬುಲ್ಡೋಜರ್ ಇದೆ. ಸನಾತನ ಧರ್ಮವನ್ನು ರಕ್ಷಿಸುವುದು ಮತ್ತು ಪ್ರಚಾರ ಮಾಡುವುದು ಬುಲ್ಡೋಜರ್‌ನ ಉದ್ದೇಶವಾಗಿದೆ” ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಬೆಳಗ್ಗೆ 9.30ರ ಸುಮಾರಿಗೆ ದೇವಸ್ಥಾನದಲ್ಲಿ ದೇವರ ಪೂಜೆ ನೆರವೇರಿಸಿದ ಬಳಿಕ ಯಾತ್ರೆಗೆ ಚಾಲನೆ ನೀಡಲಾಯಿತು. ಧಾರ್ಮಿಕ ಮೆರವಣಿಗೆಯಲ್ಲಿ, ಭಗವಾನ್ ಜಗನ್ನಾಥ ಅಥವಾ ಭಗವಾನ್ ಕೃಷ್ಣ, ಅವನ ಸಹೋದರ ಬಲರಾಮ ಮತ್ತು ಸಹೋದರಿ ಸುಭದ್ರೆಯ ವಿಗ್ರಹಗಳನ್ನು ರಥಗಳಲ್ಲಿ ಇರಿಸಲಾಗುತ್ತದೆ ಮತ್ತು ನಗರದ ತುಂಬಾ ಮೆರವಣಿಗೆ ಮಾಡಲಾಯಿತು.

ರಾಜ್‌ಕೋಟ್‌ನ ಪ್ರಮುಖ ರಸ್ತೆಗಳ ಮೂಲಕ ಈ ಯಾತ್ರೆಯು ಹಾದು ಹೋಗುತ್ತದೆ. ಒಟ್ಟು 26 ಕಿಮೀ ಸಾಗುವ ಯಾತ್ರೆಯು ಸಂಜೆಯ ನಂತರ ಜಗನ್ನಾಥ ದೇವಸ್ಥಾನದಲ್ಲಿ ಮುಕ್ತಾಯಗೊಳ್ಳಲಿದೆ.

ಜಗನ್ನಾಥ ದೇವಾಲಯದ ಈ ಬುಲ್ಡೋಜರ್ ರಥಯಾತ್ರೆಯನ್ನು ಆಯೋಜಿಸುವ ಪ್ರಮುಖರಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ರಾಜು ಜುಂಜಾ ಮಾತನಾಡಿ, ”ಏಕತೆಯ ಸಂದೇಶವನ್ನು ಕಳುಹಿಸಲು ಬುಲ್ಡೋಜರ್ ಅನ್ನು ಅಶ್ವದಳದಲ್ಲಿ ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

ಹಬ್ಬಗಳನ್ನು ಸಂಭ್ರಮದಿಂದ ಆಚರಿಸಲು ರಾಜ್‌ಕೋಟ್‌ ನಗರವು ಹೆಸರುವಾಸಿಯಾಗಿದ್ದು, ಮುಂಬರುವ ಕೃಷ್ಣ ಜನ್ಮಾಷ್ಟಮಿಯಂದು ಮೆರವಣಿಗೆಗಳು ನಡೆಯಲಿವೆ ಎಂದು ಮಾಜಿ ಸಿಎಂ ವಿಜಯ್ ರೂಪಾನಿ ಹೇಳಿದರು.

ಇದನ್ನೂ ಓದಿ: ನಮ್ಮನ್ನು ಎದುರು ಹಾಕಿಕೊಂಡರೆ ದಕ್ಕಿಸಿಕೊಳ್ಳುವುದು ನಿಮ್ಮಿಂದ ಸಾಧ್ಯವಿಲ್ಲ: ಸೆಂಥಿಲ್ ಬಾಲಾಜಿ ಬಂಧನದ ಕುರಿತು ಬಿಜೆಪಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...