Homeಮುಖಪುಟ101 ರಕ್ಷಣಾ ವಸ್ತುಗಳ ಆಮದು ನಿಷೇಧ: ರಕ್ಷಣಾ ಸಚಿವ ರಾಜನಾಥ್ ಸಿಂಗ್

101 ರಕ್ಷಣಾ ವಸ್ತುಗಳ ಆಮದು ನಿಷೇಧ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಕಾರ್ವೆಟ್‌ಗಳು, ಸೋನಾರ್ ವ್ಯವಸ್ಥೆಗಳು, ಸಾರಿಗೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್‌ಗಳು, ರಾಡಾರ್‌ಗಳು ಮತ್ತು ಇತರ ಅನೇಕ ವಸ್ತುಗಳು ವಸ್ತುಗಳು ಆಮದು ನಿರ್ಬಂಧ ಪಟ್ಟಿಯಲ್ಲಿ ಸೇರಿವೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಆತ್ಮ ನಿರ್ಭಾರ ಭಾರತ (ಸ್ವಾವಲಂಬಿ ಭಾರತ) ಧ್ಯೇಯದ ಪ್ರಕಾರ ‘ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ರಕ್ಷಣಾ ಸಚಿವಾಲಯವು 101 ವಸ್ತುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಬಂಧಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮುಂದಿನ 6-7 ವರ್ಷಗಳಲ್ಲಿ ದೇಶೀಯ ಉದ್ಯಮವು ಸುಮಾರು 4 ಲಕ್ಷ ಕೋಟಿ ಮೌಲ್ಯದ ಒಪ್ಪಂದಗಳನ್ನು ಪಡೆಯಲಿದೆ. ಈ ನಿರ್ಬಂಧವನ್ನು 2020 ಮತ್ತು 2024 ರ ನಡುವೆ ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

 

ಸಶಸ್ತ್ರ ಪಡೆ, ಸಾರ್ವಜನಿಕ ಮತ್ತು ಖಾಸಗಿ ಉದ್ಯಮ ಸೇರಿದಂತೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿದ ನಂತರ ಈ ಪಟ್ಟಿಯನ್ನು ರಕ್ಷಣಾ ಸಚಿವಾಲಯ ಸಿದ್ಧಪಡಿಸಿದೆ ಎಂದು ಹೇಳಿದೆ.

“ಈ ನಿರ್ಧಾರವು ಭಾರತೀಯ ರಕ್ಷಣಾ ಉದ್ಯಮಕ್ಕೆ ತಮ್ಮದೇ ಆದ ವಿನ್ಯಾಸ ಮತ್ತು ಅಭಿವೃದ್ಧಿ ಸಾಮರ್ಥ್ಯಗಳನ್ನು ಬಳಸಿಕೊಂಡು, ನಿರ್ಬಂಧದ ಪಟ್ಟಿಯಲ್ಲಿರುವ ವಸ್ತುಗಳನ್ನು ತಯಾರಿಸಲು ಅಥವಾ ಅಗತ್ಯತೆಗಳನ್ನು ಪೂರೈಸಲು ಡಿಆರ್‌ಡಿಒ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ತಮ ಅವಕಾಶವನ್ನು ನೀಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಕಾರ್ವೆಟ್‌ಗಳು, ಸೋನಾರ್ ವ್ಯವಸ್ಥೆಗಳು, ಸಾರಿಗೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್‌ಗಳು, ರಾಡಾರ್‌ಗಳು ಮತ್ತು ಇತರ ಅನೇಕ ವಸ್ತುಗಳು ವಸ್ತುಗಳು ಆಮದು ನಿರ್ಬಂಧ ಪಟ್ಟಿಯಲ್ಲಿ ಸೇರಿವೆ.


ಇದನ್ನೂ ಓದಿ: 5 ರಫೇಲ್ ಯುದ್ಧವಿಮಾನಗಳ ಆಗಮನ: ಚೀನಾ ಹೆಸರಿಸದೆ ಎಚ್ಚರಿಕೆ ಕೊಟ್ಟ ರಾಜನಾಥ್‌ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...