Homeಅನುವಾದಿತ ಲೇಖನರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

'ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ' ಎಂಬ ಸಾಲುಗಳು ಜಾಹೀರಾತಿನಲ್ಲಿವೆ.

- Advertisement -
- Advertisement -

ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ಜೀವನಚರಿತ್ರೆ ‘ನಿಮಿತ್ತ ಮಾತ್ರ ಹೂಂ ಮೇ’ ಪುಸ್ತಕವು ಜುಲೈ 1 ರಂದು ಅವರ 80 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಶಿಯವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮವೇನೋ ಚೆನ್ನಾಗಿ ನಡೆಯಿತು. ಅತಿಥಿಗಳು ಕಲ್ರಾಜ್ ಮಿಶ್ರಾ ಜೀವನದ ಪುಟಗಳನ್ನೊಮ್ಮೆ ತಿರುವಿಹಾಕಿದರು. ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಬರಹಕ್ಕೆ ಇಳಿದ ಮಿಶ್ರಾ ಸಾಹೇಬರ ಬದುಕನ್ನು ಕೊಂಡಾಡಿದರು. ಕಾರ್ಯಕ್ರಮ ಇಷ್ಟಕ್ಕೆ ಮುಗಿಯಲಿಲ್ಲ.

ಕಾರ್ಯಕ್ರಮದಲ್ಲಿ ನೆರೆದಿದ್ದ ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದಿಂದ ಹೊರಡುವ ಹೊತ್ತಿಗೆ ಅವರಿಗೆಲ್ಲ ಆಶ್ಚರ್ಯ ಕಾದಿತ್ತು. ಸುಮಾರು 27 ವಿಶ್ವವಿದ್ಯಾಲಯಗಳ ಕುಲಪತಿಗಳು ಒಮ್ಮೆಲೆ ಚಕಿತರಾದರು. ಕಾರಣವಿಷ್ಟೆ ರಾಜಭವನದ ಸಿಬ್ಬಂದಿಯೊಬ್ಬರು ಕುಲಪತಿಗಳ ಕಾರಿಗೆ ರಾಜ್ಯಪಾಲರ ಜೀವನಚರಿತ್ರೆ ಪುಸ್ತಕಗಳ 2 ದೊಡ್ಡ ಬಾಕ್ಸ್‌ಗಳನ್ನು ತಂದಿಟ್ಟರು. ಜೊತೆಗೆ 68,383 ರೂಪಾಯಿ ಮೊತ್ತದ ಬಿಲ್‌ಗಳನ್ನು ಕೂಡ. ಹೀಗೆ ಆ ಪುಸ್ತಕಗಳನ್ನು ಖರೀದಿಸುವಂತೆ ತಾಕೀತು ಮಾಡಲಾಗಿದೆ.

ಇದನ್ನೂ ಓದಿ: 3 ನೇ ಬಾರಿ ಸದನ ನಡೆಸುವ ಪ್ರಸ್ತಾಪ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ!

ರಾಜ್ಯಪಾಲರ ಜೀವನ ಚರಿತ್ರೆಯನ್ನು ಗೋವಿಂದ ರಾಮ್ ಜೈಸ್ವಾಲ್ ಮತ್ತು IIME ಜೈಪುರದ ಸಂಶೋದಕ ಡಾ.ಡಿ.ಕೆ. ಟಕ್ನೆಟ್ ರಚಿಸಿದ್ದಾರೆ.

ರಾಜ್ಯಪಾಲರ ಸಿಬ್ಬಂದಿ ನೀಡಿದ ಬಿಲ್‌ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಲಭ್ಯವಾಗಿದ್ದು 5 ವಿವಿಧ ಶೀರ್ಷಿಕೆಗಳ ಪುಸ್ತಕದ ಹೆಸರನ್ನು ಬಿಲ್‌ನಲ್ಲಿ ನಮೂದಿಸಲಾಗಿತ್ತು. 10% ರಿಯಾಯತಿ ಜೊತೆಗೆ ಹೆಚ್ಚುವರಿ ಉಚಿತ ಪ್ರತಿಗಳನ್ನು ನೀಡಿರುವ ಮಾಹಿತಿ ರಶೀದಿಯಲ್ಲಿದೆ. ಕುಲಪತಿಗಳೆಲ್ಲ ತಮ್ಮ ನಿವಾಸವನ್ನು ಸೇರಿದ ಮೇಲೆ ಇನ್ನೂ ಒಂದು ಆಶ್ಚರ್ಯ ಅವರಿಗೆ ಕಾದಿತ್ತು. ಅದೇನೆಂದರೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಹೊರತುಪಡಿಸಿ ಬಿಲ್‌ನಲ್ಲಿ ನಮೂದಿಸಲಾದ ಯಾವ ಪುಸ್ತಕವೂ ಬಾಕ್ಸ್‌ನಲ್ಲಿ ಇರಲಿಲ್ಲ. 3999/- ಬೆಲೆಯ ಕಲರಾಜ್‌ ಮಿಶ್ರಾ ಜೀವನ ಚರಿತ್ರೆಯ ಪ್ರತಿಗಳು ಮಾತ್ರ ಕಾರ್ಟ್‌ನಲ್ಲಿ ಇದ್ದವು.

ಇದನ್ನೂ ಓದಿ: ಸಂಪಾದಕರ ಸಂಪಾದಕ ವಿನೋದ್ ಮೆಹ್ತಾರ ಆತ್ಮ ಚರಿತ್ರೆ ಲಖನೌ ಹುಡುಗ…

ರಾಜಸ್ಥಾನ ಪಬ್ಲಿಕ್‌ ಪ್ರೊಕ್ಯುರ್‌ಮೆಂಟ್‌ (RTPP) ಆಕ್ಟ್‌, 2012 ಪುಸ್ತಕ ಖರೀದಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ವಿಧಿಸಿದೆ. ಹಾಗಿದ್ದರೆ ಏಕಪಕ್ಷೀಯವಾಗಿ ಹೇಗೆ ವಿಶ್ವವಿದ್ಯಾಲಯಗಳು ರಾಜ್ಯಪಾಲರ ಪುಸ್ತಕವನ್ನು ನೇರವಾಗಿ ಖರೀದಿಸಲು ಸಾಧ್ಯ? ತಂತ್ರಜ್ಞಾನ, ವೈದ್ಯಕೀಯ, ಸಂಗೀತ, ಕೃಷಿ ಸೇರಿದಂತೆ ಭಿನ್ನ ಭಿನ್ನ ವಿಷಯಗಳಿಗೆ ಸ್ಥಾಪಿತವಾದ ಈ ವಿಶ್ವವಿದ್ಯಾಲಯಗಳು ದೊಡ್ಡ ಪ್ರಮಾಣದಲ್ಲಿ ರಾಜ್ಯಪಾಲರ ಜೀವನಚರಿತ್ರೆಯನ್ನು ಏಕೆ ಖರೀದಿಸಬೇಕು ಎಂಬ ಚರ್ಚೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಆರಂಭವಾಗಿದೆ.

ರಾಜಭವನ ಅಧಿಕಾರಿಗಳು ಮತ್ತು ಕಲರಾಜ್ ಮಿಶ್ರಾ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಸಂಶೋಧನೆಗೆ ವಿನಿಯೋಗಿಸಲಾಗುತ್ತದೆಯೇ ಹೊರತು ವಯಕ್ತಿಕ ಬಳಕೆಗಾಗಿ ಅಲ್ಲ ಎಂದು ರಾಜ್ಯಪಾಲರು ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲರಾಜ್‌ ಮಿಶ್ರಾ ಅವರ ಜೀವನ ಚರಿತ್ರೆಯ ಪುಸ್ತಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗಿನ ಸುದೀರ್ಘ ಜೀವನ ಪ್ರಯಾಣವನ್ನು ಕಲರಾಜ್‌ ಮಿಶ್ರಾ ಅವರು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದು, ಬಿಜೆಪಿ ಮತ್ತು ಭಾರತೀಯ ಜನಸಂಘದ ಅಧ್ಯಾಯಗಳು ಅಲ್ಲಲ್ಲಿ ಬಂದು ಹೋಗುತ್ತವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಸ್ತಕದ ಕುರಿತಾಗಿ ಮೆಚ್ಚುಗೆಯ ವಿಮರ್ಶೆಯನ್ನು ಬರೆದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶಾಂದಾರ್‌ ಕೃತಿ (wonderful book) ಎನ್ನುವ ಮೂಲಕ ಪುಸ್ತಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರಾಜ್ಯಪಾಲರ ಜೀವನ  ಕೃತಿ ರಾಜಕೀಯದಿಂದ ಹೊರತಾಗಿಲ್ಲ. ಅವರ ಜೀವನದ ಅನುಭವಗಳಿಗೆ ಮಾತ್ರ ಸೀಮಿತಿವಾಗಿಲ್ಲ. ಪುಸ್ತಕದ 116 ನೇ ಪುಟದಲ್ಲಿ ಬಿಜೆಪಿಯ ಜಾಹೀರಾತನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಗಿ ನಿಂತು ನವ ಭಾರತ ಕಟ್ಟಲು ಕೈಜೋಡಿಸಿ ಎಂದು ಮನವಿ ಮಾಡುವ ಚಿತ್ರದಲ್ಲಿ ಬಿಜೆಪಿಯ ಕಮಲದ ಗುರುತು ದೊಡ್ಡದಾಗಿ ಅಚ್ಚಾಗಿದೆ.

‘ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ನಮ್ಮ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ’ ಎಂಬ ಸಾಲುಗಳು ಜಾಹೀರಾತಿನಲ್ಲಿ ಕಂಡು ಬರುತ್ತದೆ.

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯ ಪುಟ ಸಂಖ್ಯೆ 116 ರಲ್ಲಿ ನೀಡಲಾದ ಬಿಜೆಪಿ ಜಾಹೀರಾತು

ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವ ವ್ಯಕ್ತಿ ರಾಜ್ಯಪಾಲರ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಆರೋಪ ವಿಶ್ವವಿದ್ಯಾಲಯಗಳಿಂದ ಕೇಳಿಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ರಾಜ್ಯಪಾಲರಿಗೆ ಹಿಂದೆ ಬಿಜೆಪಿ, RSS ಜೊತೆ ದೀರ್ಘ ಒಡನಾಟವಿರಬಹದು. ರಾಜ್ಯಪಾಲರ ಸ್ಥಾನಕ್ಕೇರಿದ ಮೇಲೆ ತಮ್ಮ ರಾಜಕೀಯ ನಂಟನ್ನು ಮುಂದುವರೆಸುವುದು ಒಂದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಮತ್ತು ಕರ್ತವ್ಯಲೋಪ. ರಾಜ್ಯಪಾಲರಾದವರು ವಿಶ್ವವಿದ್ಯಾಲಯಗಳ ಗೌರವ ಕುಲಪತಿಗಳಾಗಿರುತ್ತಾರೆ. ತಮ್ಮ ಈ ಪುಸ್ತಕದ ಮೂಲಕ ವಿದ್ಯಾರ್ಥಿ ಸಮುದಾಯಕ್ಕೆ ಗೌರವ ಕುಲಪತಿಗಳು ಯಾವ ಸಂದೇಶವನ್ನು ನೀಡ ಬಯಸುತ್ತಾರೆ? ಎಂಬ ಪ್ರಶ್ನೆಯನ್ನು ಮತ್ತೊಬ್ಬ ಕುಲಪತಿಗಳು ಕೇಳಿದ್ದಾರೆ.

ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಎಂಟರ್‌ಪ್ರೇನರ್‌ಶಿಪ್ (IIME) ಜೈಪುರದ ಖಾತೆಗೆ ಪುಸ್ತಕದ ಹಣ ಸಂದಾಯ ಮಾಡುವಂತೆ ರಾಜಭವನದ ಅಧಿಕಾರಿಗಳು ಕುಲಪತಿಗಳಿಗೆ ಸೂಚಿಸಿದ್ದಾರೆ. IIME ಜೈಪುರ ವಿಜ್ಞಾನ ತಂತ್ರಜ್ಞಾನ ಇಲಾಖೆಯಡಿಯ ಸ್ವಾಯತ್ತ ಶಿಕ್ಷಣ ಸಂಸ್ಥೆ. ಜೀವನ ಚರಿತ್ರೆಯ ಸಹ ಬರಹಗಾರ ಡಾ. ಡಿ.ಕೆ. ಟಕ್ನೆಟ್ ಹಿಂದೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.ಕೆ. ಟಕ್ನೆಟ್‌ ಪತ್ನಿ ಸುಜಾತಾ ಟಕ್ನೆಟ್‌ IIME ಯಲ್ಲಿಯೇ ಮುಖ್ಯ ಸಂಶೋಧಕರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೇಗೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಪ್ರಕಟಿಸಲು ಸಾಧ್ಯ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ವಾರಸ್ಯವೆಂದರೆ ರಾಜಭವನದ ಸಿಬ್ಬಂದಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೀಡಿದ ಪುಸ್ತಕದ ರಶೀದಿಯಲ್ಲಿ ಇನ್ನೂ ಎರಡು ಪುಸ್ತಕಗಳು ಸೇರಿವೆ. ಅವು IIME ಜೈಪುರ ಸಂಸ್ಥೆ 2020 ರಲ್ಲಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಿದ್ದ ಪುಸ್ತಕಗಳು. ಒಂದು ಜೈಪುರ್ ಜೆಮ್‌ ಆಫ್ ಇಂಡಿಯಾ ಮತ್ತು ಮಾರ್ವಾಡಿ ಹೆರಿಟೇಜ್ ಪುಸ್ತಕಗಳು ಅವು. ಈ ಪುಸ್ತಕಗಳು 4,950 ರೂಪಾಯಿ ಮತ್ತು 3,200 ರೂಪಾಯಿ ಬೆಲೆಯನ್ನು ನಿಗದಿಪಡಿಸಲಾಗಿದ್ದು ರಾಜ್ಯಪಾಲರ ಜೀವನಚರಿತ್ರೆಯ ಜೊತೆಗೆ ಉಳಿದ ಪುಸ್ತಕಗಳ ಹಣವನ್ನೂ ಪಾವತಿಸುವಂತೆ ವಿಶ್ವವಿದ್ಯಾಲಯಗಳಿಗೆ ಹೇಳಲಾಗಿದೆ.

ಮೂಲ: ದಿ ವೈರ್‌

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...