Homeಅನುವಾದಿತ ಲೇಖನರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

'ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ' ಎಂಬ ಸಾಲುಗಳು ಜಾಹೀರಾತಿನಲ್ಲಿವೆ.

- Advertisement -
- Advertisement -

ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ಜೀವನಚರಿತ್ರೆ ‘ನಿಮಿತ್ತ ಮಾತ್ರ ಹೂಂ ಮೇ’ ಪುಸ್ತಕವು ಜುಲೈ 1 ರಂದು ಅವರ 80 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಶಿಯವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮವೇನೋ ಚೆನ್ನಾಗಿ ನಡೆಯಿತು. ಅತಿಥಿಗಳು ಕಲ್ರಾಜ್ ಮಿಶ್ರಾ ಜೀವನದ ಪುಟಗಳನ್ನೊಮ್ಮೆ ತಿರುವಿಹಾಕಿದರು. ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಬರಹಕ್ಕೆ ಇಳಿದ ಮಿಶ್ರಾ ಸಾಹೇಬರ ಬದುಕನ್ನು ಕೊಂಡಾಡಿದರು. ಕಾರ್ಯಕ್ರಮ ಇಷ್ಟಕ್ಕೆ ಮುಗಿಯಲಿಲ್ಲ.

ಕಾರ್ಯಕ್ರಮದಲ್ಲಿ ನೆರೆದಿದ್ದ ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದಿಂದ ಹೊರಡುವ ಹೊತ್ತಿಗೆ ಅವರಿಗೆಲ್ಲ ಆಶ್ಚರ್ಯ ಕಾದಿತ್ತು. ಸುಮಾರು 27 ವಿಶ್ವವಿದ್ಯಾಲಯಗಳ ಕುಲಪತಿಗಳು ಒಮ್ಮೆಲೆ ಚಕಿತರಾದರು. ಕಾರಣವಿಷ್ಟೆ ರಾಜಭವನದ ಸಿಬ್ಬಂದಿಯೊಬ್ಬರು ಕುಲಪತಿಗಳ ಕಾರಿಗೆ ರಾಜ್ಯಪಾಲರ ಜೀವನಚರಿತ್ರೆ ಪುಸ್ತಕಗಳ 2 ದೊಡ್ಡ ಬಾಕ್ಸ್‌ಗಳನ್ನು ತಂದಿಟ್ಟರು. ಜೊತೆಗೆ 68,383 ರೂಪಾಯಿ ಮೊತ್ತದ ಬಿಲ್‌ಗಳನ್ನು ಕೂಡ. ಹೀಗೆ ಆ ಪುಸ್ತಕಗಳನ್ನು ಖರೀದಿಸುವಂತೆ ತಾಕೀತು ಮಾಡಲಾಗಿದೆ.

ಇದನ್ನೂ ಓದಿ: 3 ನೇ ಬಾರಿ ಸದನ ನಡೆಸುವ ಪ್ರಸ್ತಾಪ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ!

ರಾಜ್ಯಪಾಲರ ಜೀವನ ಚರಿತ್ರೆಯನ್ನು ಗೋವಿಂದ ರಾಮ್ ಜೈಸ್ವಾಲ್ ಮತ್ತು IIME ಜೈಪುರದ ಸಂಶೋದಕ ಡಾ.ಡಿ.ಕೆ. ಟಕ್ನೆಟ್ ರಚಿಸಿದ್ದಾರೆ.

ರಾಜ್ಯಪಾಲರ ಸಿಬ್ಬಂದಿ ನೀಡಿದ ಬಿಲ್‌ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಲಭ್ಯವಾಗಿದ್ದು 5 ವಿವಿಧ ಶೀರ್ಷಿಕೆಗಳ ಪುಸ್ತಕದ ಹೆಸರನ್ನು ಬಿಲ್‌ನಲ್ಲಿ ನಮೂದಿಸಲಾಗಿತ್ತು. 10% ರಿಯಾಯತಿ ಜೊತೆಗೆ ಹೆಚ್ಚುವರಿ ಉಚಿತ ಪ್ರತಿಗಳನ್ನು ನೀಡಿರುವ ಮಾಹಿತಿ ರಶೀದಿಯಲ್ಲಿದೆ. ಕುಲಪತಿಗಳೆಲ್ಲ ತಮ್ಮ ನಿವಾಸವನ್ನು ಸೇರಿದ ಮೇಲೆ ಇನ್ನೂ ಒಂದು ಆಶ್ಚರ್ಯ ಅವರಿಗೆ ಕಾದಿತ್ತು. ಅದೇನೆಂದರೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಹೊರತುಪಡಿಸಿ ಬಿಲ್‌ನಲ್ಲಿ ನಮೂದಿಸಲಾದ ಯಾವ ಪುಸ್ತಕವೂ ಬಾಕ್ಸ್‌ನಲ್ಲಿ ಇರಲಿಲ್ಲ. 3999/- ಬೆಲೆಯ ಕಲರಾಜ್‌ ಮಿಶ್ರಾ ಜೀವನ ಚರಿತ್ರೆಯ ಪ್ರತಿಗಳು ಮಾತ್ರ ಕಾರ್ಟ್‌ನಲ್ಲಿ ಇದ್ದವು.

ಇದನ್ನೂ ಓದಿ: ಸಂಪಾದಕರ ಸಂಪಾದಕ ವಿನೋದ್ ಮೆಹ್ತಾರ ಆತ್ಮ ಚರಿತ್ರೆ ಲಖನೌ ಹುಡುಗ…

ರಾಜಸ್ಥಾನ ಪಬ್ಲಿಕ್‌ ಪ್ರೊಕ್ಯುರ್‌ಮೆಂಟ್‌ (RTPP) ಆಕ್ಟ್‌, 2012 ಪುಸ್ತಕ ಖರೀದಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ವಿಧಿಸಿದೆ. ಹಾಗಿದ್ದರೆ ಏಕಪಕ್ಷೀಯವಾಗಿ ಹೇಗೆ ವಿಶ್ವವಿದ್ಯಾಲಯಗಳು ರಾಜ್ಯಪಾಲರ ಪುಸ್ತಕವನ್ನು ನೇರವಾಗಿ ಖರೀದಿಸಲು ಸಾಧ್ಯ? ತಂತ್ರಜ್ಞಾನ, ವೈದ್ಯಕೀಯ, ಸಂಗೀತ, ಕೃಷಿ ಸೇರಿದಂತೆ ಭಿನ್ನ ಭಿನ್ನ ವಿಷಯಗಳಿಗೆ ಸ್ಥಾಪಿತವಾದ ಈ ವಿಶ್ವವಿದ್ಯಾಲಯಗಳು ದೊಡ್ಡ ಪ್ರಮಾಣದಲ್ಲಿ ರಾಜ್ಯಪಾಲರ ಜೀವನಚರಿತ್ರೆಯನ್ನು ಏಕೆ ಖರೀದಿಸಬೇಕು ಎಂಬ ಚರ್ಚೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಆರಂಭವಾಗಿದೆ.

ರಾಜಭವನ ಅಧಿಕಾರಿಗಳು ಮತ್ತು ಕಲರಾಜ್ ಮಿಶ್ರಾ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಸಂಶೋಧನೆಗೆ ವಿನಿಯೋಗಿಸಲಾಗುತ್ತದೆಯೇ ಹೊರತು ವಯಕ್ತಿಕ ಬಳಕೆಗಾಗಿ ಅಲ್ಲ ಎಂದು ರಾಜ್ಯಪಾಲರು ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲರಾಜ್‌ ಮಿಶ್ರಾ ಅವರ ಜೀವನ ಚರಿತ್ರೆಯ ಪುಸ್ತಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗಿನ ಸುದೀರ್ಘ ಜೀವನ ಪ್ರಯಾಣವನ್ನು ಕಲರಾಜ್‌ ಮಿಶ್ರಾ ಅವರು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದು, ಬಿಜೆಪಿ ಮತ್ತು ಭಾರತೀಯ ಜನಸಂಘದ ಅಧ್ಯಾಯಗಳು ಅಲ್ಲಲ್ಲಿ ಬಂದು ಹೋಗುತ್ತವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಸ್ತಕದ ಕುರಿತಾಗಿ ಮೆಚ್ಚುಗೆಯ ವಿಮರ್ಶೆಯನ್ನು ಬರೆದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶಾಂದಾರ್‌ ಕೃತಿ (wonderful book) ಎನ್ನುವ ಮೂಲಕ ಪುಸ್ತಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರಾಜ್ಯಪಾಲರ ಜೀವನ  ಕೃತಿ ರಾಜಕೀಯದಿಂದ ಹೊರತಾಗಿಲ್ಲ. ಅವರ ಜೀವನದ ಅನುಭವಗಳಿಗೆ ಮಾತ್ರ ಸೀಮಿತಿವಾಗಿಲ್ಲ. ಪುಸ್ತಕದ 116 ನೇ ಪುಟದಲ್ಲಿ ಬಿಜೆಪಿಯ ಜಾಹೀರಾತನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಗಿ ನಿಂತು ನವ ಭಾರತ ಕಟ್ಟಲು ಕೈಜೋಡಿಸಿ ಎಂದು ಮನವಿ ಮಾಡುವ ಚಿತ್ರದಲ್ಲಿ ಬಿಜೆಪಿಯ ಕಮಲದ ಗುರುತು ದೊಡ್ಡದಾಗಿ ಅಚ್ಚಾಗಿದೆ.

‘ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ನಮ್ಮ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ’ ಎಂಬ ಸಾಲುಗಳು ಜಾಹೀರಾತಿನಲ್ಲಿ ಕಂಡು ಬರುತ್ತದೆ.

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯ ಪುಟ ಸಂಖ್ಯೆ 116 ರಲ್ಲಿ ನೀಡಲಾದ ಬಿಜೆಪಿ ಜಾಹೀರಾತು

ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವ ವ್ಯಕ್ತಿ ರಾಜ್ಯಪಾಲರ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಆರೋಪ ವಿಶ್ವವಿದ್ಯಾಲಯಗಳಿಂದ ಕೇಳಿಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ರಾಜ್ಯಪಾಲರಿಗೆ ಹಿಂದೆ ಬಿಜೆಪಿ, RSS ಜೊತೆ ದೀರ್ಘ ಒಡನಾಟವಿರಬಹದು. ರಾಜ್ಯಪಾಲರ ಸ್ಥಾನಕ್ಕೇರಿದ ಮೇಲೆ ತಮ್ಮ ರಾಜಕೀಯ ನಂಟನ್ನು ಮುಂದುವರೆಸುವುದು ಒಂದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಮತ್ತು ಕರ್ತವ್ಯಲೋಪ. ರಾಜ್ಯಪಾಲರಾದವರು ವಿಶ್ವವಿದ್ಯಾಲಯಗಳ ಗೌರವ ಕುಲಪತಿಗಳಾಗಿರುತ್ತಾರೆ. ತಮ್ಮ ಈ ಪುಸ್ತಕದ ಮೂಲಕ ವಿದ್ಯಾರ್ಥಿ ಸಮುದಾಯಕ್ಕೆ ಗೌರವ ಕುಲಪತಿಗಳು ಯಾವ ಸಂದೇಶವನ್ನು ನೀಡ ಬಯಸುತ್ತಾರೆ? ಎಂಬ ಪ್ರಶ್ನೆಯನ್ನು ಮತ್ತೊಬ್ಬ ಕುಲಪತಿಗಳು ಕೇಳಿದ್ದಾರೆ.

ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಎಂಟರ್‌ಪ್ರೇನರ್‌ಶಿಪ್ (IIME) ಜೈಪುರದ ಖಾತೆಗೆ ಪುಸ್ತಕದ ಹಣ ಸಂದಾಯ ಮಾಡುವಂತೆ ರಾಜಭವನದ ಅಧಿಕಾರಿಗಳು ಕುಲಪತಿಗಳಿಗೆ ಸೂಚಿಸಿದ್ದಾರೆ. IIME ಜೈಪುರ ವಿಜ್ಞಾನ ತಂತ್ರಜ್ಞಾನ ಇಲಾಖೆಯಡಿಯ ಸ್ವಾಯತ್ತ ಶಿಕ್ಷಣ ಸಂಸ್ಥೆ. ಜೀವನ ಚರಿತ್ರೆಯ ಸಹ ಬರಹಗಾರ ಡಾ. ಡಿ.ಕೆ. ಟಕ್ನೆಟ್ ಹಿಂದೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.ಕೆ. ಟಕ್ನೆಟ್‌ ಪತ್ನಿ ಸುಜಾತಾ ಟಕ್ನೆಟ್‌ IIME ಯಲ್ಲಿಯೇ ಮುಖ್ಯ ಸಂಶೋಧಕರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೇಗೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಪ್ರಕಟಿಸಲು ಸಾಧ್ಯ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ವಾರಸ್ಯವೆಂದರೆ ರಾಜಭವನದ ಸಿಬ್ಬಂದಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೀಡಿದ ಪುಸ್ತಕದ ರಶೀದಿಯಲ್ಲಿ ಇನ್ನೂ ಎರಡು ಪುಸ್ತಕಗಳು ಸೇರಿವೆ. ಅವು IIME ಜೈಪುರ ಸಂಸ್ಥೆ 2020 ರಲ್ಲಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಿದ್ದ ಪುಸ್ತಕಗಳು. ಒಂದು ಜೈಪುರ್ ಜೆಮ್‌ ಆಫ್ ಇಂಡಿಯಾ ಮತ್ತು ಮಾರ್ವಾಡಿ ಹೆರಿಟೇಜ್ ಪುಸ್ತಕಗಳು ಅವು. ಈ ಪುಸ್ತಕಗಳು 4,950 ರೂಪಾಯಿ ಮತ್ತು 3,200 ರೂಪಾಯಿ ಬೆಲೆಯನ್ನು ನಿಗದಿಪಡಿಸಲಾಗಿದ್ದು ರಾಜ್ಯಪಾಲರ ಜೀವನಚರಿತ್ರೆಯ ಜೊತೆಗೆ ಉಳಿದ ಪುಸ್ತಕಗಳ ಹಣವನ್ನೂ ಪಾವತಿಸುವಂತೆ ವಿಶ್ವವಿದ್ಯಾಲಯಗಳಿಗೆ ಹೇಳಲಾಗಿದೆ.

ಮೂಲ: ದಿ ವೈರ್‌

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....