Homeಅನುವಾದಿತ ಲೇಖನರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

'ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ' ಎಂಬ ಸಾಲುಗಳು ಜಾಹೀರಾತಿನಲ್ಲಿವೆ.

- Advertisement -
- Advertisement -

ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ಜೀವನಚರಿತ್ರೆ ‘ನಿಮಿತ್ತ ಮಾತ್ರ ಹೂಂ ಮೇ’ ಪುಸ್ತಕವು ಜುಲೈ 1 ರಂದು ಅವರ 80 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಶಿಯವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮವೇನೋ ಚೆನ್ನಾಗಿ ನಡೆಯಿತು. ಅತಿಥಿಗಳು ಕಲ್ರಾಜ್ ಮಿಶ್ರಾ ಜೀವನದ ಪುಟಗಳನ್ನೊಮ್ಮೆ ತಿರುವಿಹಾಕಿದರು. ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಬರಹಕ್ಕೆ ಇಳಿದ ಮಿಶ್ರಾ ಸಾಹೇಬರ ಬದುಕನ್ನು ಕೊಂಡಾಡಿದರು. ಕಾರ್ಯಕ್ರಮ ಇಷ್ಟಕ್ಕೆ ಮುಗಿಯಲಿಲ್ಲ.

ಕಾರ್ಯಕ್ರಮದಲ್ಲಿ ನೆರೆದಿದ್ದ ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದಿಂದ ಹೊರಡುವ ಹೊತ್ತಿಗೆ ಅವರಿಗೆಲ್ಲ ಆಶ್ಚರ್ಯ ಕಾದಿತ್ತು. ಸುಮಾರು 27 ವಿಶ್ವವಿದ್ಯಾಲಯಗಳ ಕುಲಪತಿಗಳು ಒಮ್ಮೆಲೆ ಚಕಿತರಾದರು. ಕಾರಣವಿಷ್ಟೆ ರಾಜಭವನದ ಸಿಬ್ಬಂದಿಯೊಬ್ಬರು ಕುಲಪತಿಗಳ ಕಾರಿಗೆ ರಾಜ್ಯಪಾಲರ ಜೀವನಚರಿತ್ರೆ ಪುಸ್ತಕಗಳ 2 ದೊಡ್ಡ ಬಾಕ್ಸ್‌ಗಳನ್ನು ತಂದಿಟ್ಟರು. ಜೊತೆಗೆ 68,383 ರೂಪಾಯಿ ಮೊತ್ತದ ಬಿಲ್‌ಗಳನ್ನು ಕೂಡ. ಹೀಗೆ ಆ ಪುಸ್ತಕಗಳನ್ನು ಖರೀದಿಸುವಂತೆ ತಾಕೀತು ಮಾಡಲಾಗಿದೆ.

ಇದನ್ನೂ ಓದಿ: 3 ನೇ ಬಾರಿ ಸದನ ನಡೆಸುವ ಪ್ರಸ್ತಾಪ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ!

ರಾಜ್ಯಪಾಲರ ಜೀವನ ಚರಿತ್ರೆಯನ್ನು ಗೋವಿಂದ ರಾಮ್ ಜೈಸ್ವಾಲ್ ಮತ್ತು IIME ಜೈಪುರದ ಸಂಶೋದಕ ಡಾ.ಡಿ.ಕೆ. ಟಕ್ನೆಟ್ ರಚಿಸಿದ್ದಾರೆ.

ರಾಜ್ಯಪಾಲರ ಸಿಬ್ಬಂದಿ ನೀಡಿದ ಬಿಲ್‌ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಲಭ್ಯವಾಗಿದ್ದು 5 ವಿವಿಧ ಶೀರ್ಷಿಕೆಗಳ ಪುಸ್ತಕದ ಹೆಸರನ್ನು ಬಿಲ್‌ನಲ್ಲಿ ನಮೂದಿಸಲಾಗಿತ್ತು. 10% ರಿಯಾಯತಿ ಜೊತೆಗೆ ಹೆಚ್ಚುವರಿ ಉಚಿತ ಪ್ರತಿಗಳನ್ನು ನೀಡಿರುವ ಮಾಹಿತಿ ರಶೀದಿಯಲ್ಲಿದೆ. ಕುಲಪತಿಗಳೆಲ್ಲ ತಮ್ಮ ನಿವಾಸವನ್ನು ಸೇರಿದ ಮೇಲೆ ಇನ್ನೂ ಒಂದು ಆಶ್ಚರ್ಯ ಅವರಿಗೆ ಕಾದಿತ್ತು. ಅದೇನೆಂದರೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಹೊರತುಪಡಿಸಿ ಬಿಲ್‌ನಲ್ಲಿ ನಮೂದಿಸಲಾದ ಯಾವ ಪುಸ್ತಕವೂ ಬಾಕ್ಸ್‌ನಲ್ಲಿ ಇರಲಿಲ್ಲ. 3999/- ಬೆಲೆಯ ಕಲರಾಜ್‌ ಮಿಶ್ರಾ ಜೀವನ ಚರಿತ್ರೆಯ ಪ್ರತಿಗಳು ಮಾತ್ರ ಕಾರ್ಟ್‌ನಲ್ಲಿ ಇದ್ದವು.

ಇದನ್ನೂ ಓದಿ: ಸಂಪಾದಕರ ಸಂಪಾದಕ ವಿನೋದ್ ಮೆಹ್ತಾರ ಆತ್ಮ ಚರಿತ್ರೆ ಲಖನೌ ಹುಡುಗ…

ರಾಜಸ್ಥಾನ ಪಬ್ಲಿಕ್‌ ಪ್ರೊಕ್ಯುರ್‌ಮೆಂಟ್‌ (RTPP) ಆಕ್ಟ್‌, 2012 ಪುಸ್ತಕ ಖರೀದಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ವಿಧಿಸಿದೆ. ಹಾಗಿದ್ದರೆ ಏಕಪಕ್ಷೀಯವಾಗಿ ಹೇಗೆ ವಿಶ್ವವಿದ್ಯಾಲಯಗಳು ರಾಜ್ಯಪಾಲರ ಪುಸ್ತಕವನ್ನು ನೇರವಾಗಿ ಖರೀದಿಸಲು ಸಾಧ್ಯ? ತಂತ್ರಜ್ಞಾನ, ವೈದ್ಯಕೀಯ, ಸಂಗೀತ, ಕೃಷಿ ಸೇರಿದಂತೆ ಭಿನ್ನ ಭಿನ್ನ ವಿಷಯಗಳಿಗೆ ಸ್ಥಾಪಿತವಾದ ಈ ವಿಶ್ವವಿದ್ಯಾಲಯಗಳು ದೊಡ್ಡ ಪ್ರಮಾಣದಲ್ಲಿ ರಾಜ್ಯಪಾಲರ ಜೀವನಚರಿತ್ರೆಯನ್ನು ಏಕೆ ಖರೀದಿಸಬೇಕು ಎಂಬ ಚರ್ಚೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಆರಂಭವಾಗಿದೆ.

ರಾಜಭವನ ಅಧಿಕಾರಿಗಳು ಮತ್ತು ಕಲರಾಜ್ ಮಿಶ್ರಾ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಸಂಶೋಧನೆಗೆ ವಿನಿಯೋಗಿಸಲಾಗುತ್ತದೆಯೇ ಹೊರತು ವಯಕ್ತಿಕ ಬಳಕೆಗಾಗಿ ಅಲ್ಲ ಎಂದು ರಾಜ್ಯಪಾಲರು ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲರಾಜ್‌ ಮಿಶ್ರಾ ಅವರ ಜೀವನ ಚರಿತ್ರೆಯ ಪುಸ್ತಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗಿನ ಸುದೀರ್ಘ ಜೀವನ ಪ್ರಯಾಣವನ್ನು ಕಲರಾಜ್‌ ಮಿಶ್ರಾ ಅವರು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದು, ಬಿಜೆಪಿ ಮತ್ತು ಭಾರತೀಯ ಜನಸಂಘದ ಅಧ್ಯಾಯಗಳು ಅಲ್ಲಲ್ಲಿ ಬಂದು ಹೋಗುತ್ತವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಸ್ತಕದ ಕುರಿತಾಗಿ ಮೆಚ್ಚುಗೆಯ ವಿಮರ್ಶೆಯನ್ನು ಬರೆದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶಾಂದಾರ್‌ ಕೃತಿ (wonderful book) ಎನ್ನುವ ಮೂಲಕ ಪುಸ್ತಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರಾಜ್ಯಪಾಲರ ಜೀವನ  ಕೃತಿ ರಾಜಕೀಯದಿಂದ ಹೊರತಾಗಿಲ್ಲ. ಅವರ ಜೀವನದ ಅನುಭವಗಳಿಗೆ ಮಾತ್ರ ಸೀಮಿತಿವಾಗಿಲ್ಲ. ಪುಸ್ತಕದ 116 ನೇ ಪುಟದಲ್ಲಿ ಬಿಜೆಪಿಯ ಜಾಹೀರಾತನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಗಿ ನಿಂತು ನವ ಭಾರತ ಕಟ್ಟಲು ಕೈಜೋಡಿಸಿ ಎಂದು ಮನವಿ ಮಾಡುವ ಚಿತ್ರದಲ್ಲಿ ಬಿಜೆಪಿಯ ಕಮಲದ ಗುರುತು ದೊಡ್ಡದಾಗಿ ಅಚ್ಚಾಗಿದೆ.

‘ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ನಮ್ಮ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ’ ಎಂಬ ಸಾಲುಗಳು ಜಾಹೀರಾತಿನಲ್ಲಿ ಕಂಡು ಬರುತ್ತದೆ.

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯ ಪುಟ ಸಂಖ್ಯೆ 116 ರಲ್ಲಿ ನೀಡಲಾದ ಬಿಜೆಪಿ ಜಾಹೀರಾತು

ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವ ವ್ಯಕ್ತಿ ರಾಜ್ಯಪಾಲರ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಆರೋಪ ವಿಶ್ವವಿದ್ಯಾಲಯಗಳಿಂದ ಕೇಳಿಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ರಾಜ್ಯಪಾಲರಿಗೆ ಹಿಂದೆ ಬಿಜೆಪಿ, RSS ಜೊತೆ ದೀರ್ಘ ಒಡನಾಟವಿರಬಹದು. ರಾಜ್ಯಪಾಲರ ಸ್ಥಾನಕ್ಕೇರಿದ ಮೇಲೆ ತಮ್ಮ ರಾಜಕೀಯ ನಂಟನ್ನು ಮುಂದುವರೆಸುವುದು ಒಂದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಮತ್ತು ಕರ್ತವ್ಯಲೋಪ. ರಾಜ್ಯಪಾಲರಾದವರು ವಿಶ್ವವಿದ್ಯಾಲಯಗಳ ಗೌರವ ಕುಲಪತಿಗಳಾಗಿರುತ್ತಾರೆ. ತಮ್ಮ ಈ ಪುಸ್ತಕದ ಮೂಲಕ ವಿದ್ಯಾರ್ಥಿ ಸಮುದಾಯಕ್ಕೆ ಗೌರವ ಕುಲಪತಿಗಳು ಯಾವ ಸಂದೇಶವನ್ನು ನೀಡ ಬಯಸುತ್ತಾರೆ? ಎಂಬ ಪ್ರಶ್ನೆಯನ್ನು ಮತ್ತೊಬ್ಬ ಕುಲಪತಿಗಳು ಕೇಳಿದ್ದಾರೆ.

ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಎಂಟರ್‌ಪ್ರೇನರ್‌ಶಿಪ್ (IIME) ಜೈಪುರದ ಖಾತೆಗೆ ಪುಸ್ತಕದ ಹಣ ಸಂದಾಯ ಮಾಡುವಂತೆ ರಾಜಭವನದ ಅಧಿಕಾರಿಗಳು ಕುಲಪತಿಗಳಿಗೆ ಸೂಚಿಸಿದ್ದಾರೆ. IIME ಜೈಪುರ ವಿಜ್ಞಾನ ತಂತ್ರಜ್ಞಾನ ಇಲಾಖೆಯಡಿಯ ಸ್ವಾಯತ್ತ ಶಿಕ್ಷಣ ಸಂಸ್ಥೆ. ಜೀವನ ಚರಿತ್ರೆಯ ಸಹ ಬರಹಗಾರ ಡಾ. ಡಿ.ಕೆ. ಟಕ್ನೆಟ್ ಹಿಂದೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.ಕೆ. ಟಕ್ನೆಟ್‌ ಪತ್ನಿ ಸುಜಾತಾ ಟಕ್ನೆಟ್‌ IIME ಯಲ್ಲಿಯೇ ಮುಖ್ಯ ಸಂಶೋಧಕರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೇಗೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಪ್ರಕಟಿಸಲು ಸಾಧ್ಯ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ವಾರಸ್ಯವೆಂದರೆ ರಾಜಭವನದ ಸಿಬ್ಬಂದಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೀಡಿದ ಪುಸ್ತಕದ ರಶೀದಿಯಲ್ಲಿ ಇನ್ನೂ ಎರಡು ಪುಸ್ತಕಗಳು ಸೇರಿವೆ. ಅವು IIME ಜೈಪುರ ಸಂಸ್ಥೆ 2020 ರಲ್ಲಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಿದ್ದ ಪುಸ್ತಕಗಳು. ಒಂದು ಜೈಪುರ್ ಜೆಮ್‌ ಆಫ್ ಇಂಡಿಯಾ ಮತ್ತು ಮಾರ್ವಾಡಿ ಹೆರಿಟೇಜ್ ಪುಸ್ತಕಗಳು ಅವು. ಈ ಪುಸ್ತಕಗಳು 4,950 ರೂಪಾಯಿ ಮತ್ತು 3,200 ರೂಪಾಯಿ ಬೆಲೆಯನ್ನು ನಿಗದಿಪಡಿಸಲಾಗಿದ್ದು ರಾಜ್ಯಪಾಲರ ಜೀವನಚರಿತ್ರೆಯ ಜೊತೆಗೆ ಉಳಿದ ಪುಸ್ತಕಗಳ ಹಣವನ್ನೂ ಪಾವತಿಸುವಂತೆ ವಿಶ್ವವಿದ್ಯಾಲಯಗಳಿಗೆ ಹೇಳಲಾಗಿದೆ.

ಮೂಲ: ದಿ ವೈರ್‌

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...