Homeಅನುವಾದಿತ ಲೇಖನರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

'ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ' ಎಂಬ ಸಾಲುಗಳು ಜಾಹೀರಾತಿನಲ್ಲಿವೆ.

- Advertisement -
- Advertisement -

ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ಜೀವನಚರಿತ್ರೆ ‘ನಿಮಿತ್ತ ಮಾತ್ರ ಹೂಂ ಮೇ’ ಪುಸ್ತಕವು ಜುಲೈ 1 ರಂದು ಅವರ 80 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಶಿಯವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮವೇನೋ ಚೆನ್ನಾಗಿ ನಡೆಯಿತು. ಅತಿಥಿಗಳು ಕಲ್ರಾಜ್ ಮಿಶ್ರಾ ಜೀವನದ ಪುಟಗಳನ್ನೊಮ್ಮೆ ತಿರುವಿಹಾಕಿದರು. ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಬರಹಕ್ಕೆ ಇಳಿದ ಮಿಶ್ರಾ ಸಾಹೇಬರ ಬದುಕನ್ನು ಕೊಂಡಾಡಿದರು. ಕಾರ್ಯಕ್ರಮ ಇಷ್ಟಕ್ಕೆ ಮುಗಿಯಲಿಲ್ಲ.

ಕಾರ್ಯಕ್ರಮದಲ್ಲಿ ನೆರೆದಿದ್ದ ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದಿಂದ ಹೊರಡುವ ಹೊತ್ತಿಗೆ ಅವರಿಗೆಲ್ಲ ಆಶ್ಚರ್ಯ ಕಾದಿತ್ತು. ಸುಮಾರು 27 ವಿಶ್ವವಿದ್ಯಾಲಯಗಳ ಕುಲಪತಿಗಳು ಒಮ್ಮೆಲೆ ಚಕಿತರಾದರು. ಕಾರಣವಿಷ್ಟೆ ರಾಜಭವನದ ಸಿಬ್ಬಂದಿಯೊಬ್ಬರು ಕುಲಪತಿಗಳ ಕಾರಿಗೆ ರಾಜ್ಯಪಾಲರ ಜೀವನಚರಿತ್ರೆ ಪುಸ್ತಕಗಳ 2 ದೊಡ್ಡ ಬಾಕ್ಸ್‌ಗಳನ್ನು ತಂದಿಟ್ಟರು. ಜೊತೆಗೆ 68,383 ರೂಪಾಯಿ ಮೊತ್ತದ ಬಿಲ್‌ಗಳನ್ನು ಕೂಡ. ಹೀಗೆ ಆ ಪುಸ್ತಕಗಳನ್ನು ಖರೀದಿಸುವಂತೆ ತಾಕೀತು ಮಾಡಲಾಗಿದೆ.

ಇದನ್ನೂ ಓದಿ: 3 ನೇ ಬಾರಿ ಸದನ ನಡೆಸುವ ಪ್ರಸ್ತಾಪ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ!

ರಾಜ್ಯಪಾಲರ ಜೀವನ ಚರಿತ್ರೆಯನ್ನು ಗೋವಿಂದ ರಾಮ್ ಜೈಸ್ವಾಲ್ ಮತ್ತು IIME ಜೈಪುರದ ಸಂಶೋದಕ ಡಾ.ಡಿ.ಕೆ. ಟಕ್ನೆಟ್ ರಚಿಸಿದ್ದಾರೆ.

ರಾಜ್ಯಪಾಲರ ಸಿಬ್ಬಂದಿ ನೀಡಿದ ಬಿಲ್‌ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಲಭ್ಯವಾಗಿದ್ದು 5 ವಿವಿಧ ಶೀರ್ಷಿಕೆಗಳ ಪುಸ್ತಕದ ಹೆಸರನ್ನು ಬಿಲ್‌ನಲ್ಲಿ ನಮೂದಿಸಲಾಗಿತ್ತು. 10% ರಿಯಾಯತಿ ಜೊತೆಗೆ ಹೆಚ್ಚುವರಿ ಉಚಿತ ಪ್ರತಿಗಳನ್ನು ನೀಡಿರುವ ಮಾಹಿತಿ ರಶೀದಿಯಲ್ಲಿದೆ. ಕುಲಪತಿಗಳೆಲ್ಲ ತಮ್ಮ ನಿವಾಸವನ್ನು ಸೇರಿದ ಮೇಲೆ ಇನ್ನೂ ಒಂದು ಆಶ್ಚರ್ಯ ಅವರಿಗೆ ಕಾದಿತ್ತು. ಅದೇನೆಂದರೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಹೊರತುಪಡಿಸಿ ಬಿಲ್‌ನಲ್ಲಿ ನಮೂದಿಸಲಾದ ಯಾವ ಪುಸ್ತಕವೂ ಬಾಕ್ಸ್‌ನಲ್ಲಿ ಇರಲಿಲ್ಲ. 3999/- ಬೆಲೆಯ ಕಲರಾಜ್‌ ಮಿಶ್ರಾ ಜೀವನ ಚರಿತ್ರೆಯ ಪ್ರತಿಗಳು ಮಾತ್ರ ಕಾರ್ಟ್‌ನಲ್ಲಿ ಇದ್ದವು.

ಇದನ್ನೂ ಓದಿ: ಸಂಪಾದಕರ ಸಂಪಾದಕ ವಿನೋದ್ ಮೆಹ್ತಾರ ಆತ್ಮ ಚರಿತ್ರೆ ಲಖನೌ ಹುಡುಗ…

ರಾಜಸ್ಥಾನ ಪಬ್ಲಿಕ್‌ ಪ್ರೊಕ್ಯುರ್‌ಮೆಂಟ್‌ (RTPP) ಆಕ್ಟ್‌, 2012 ಪುಸ್ತಕ ಖರೀದಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ವಿಧಿಸಿದೆ. ಹಾಗಿದ್ದರೆ ಏಕಪಕ್ಷೀಯವಾಗಿ ಹೇಗೆ ವಿಶ್ವವಿದ್ಯಾಲಯಗಳು ರಾಜ್ಯಪಾಲರ ಪುಸ್ತಕವನ್ನು ನೇರವಾಗಿ ಖರೀದಿಸಲು ಸಾಧ್ಯ? ತಂತ್ರಜ್ಞಾನ, ವೈದ್ಯಕೀಯ, ಸಂಗೀತ, ಕೃಷಿ ಸೇರಿದಂತೆ ಭಿನ್ನ ಭಿನ್ನ ವಿಷಯಗಳಿಗೆ ಸ್ಥಾಪಿತವಾದ ಈ ವಿಶ್ವವಿದ್ಯಾಲಯಗಳು ದೊಡ್ಡ ಪ್ರಮಾಣದಲ್ಲಿ ರಾಜ್ಯಪಾಲರ ಜೀವನಚರಿತ್ರೆಯನ್ನು ಏಕೆ ಖರೀದಿಸಬೇಕು ಎಂಬ ಚರ್ಚೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಆರಂಭವಾಗಿದೆ.

ರಾಜಭವನ ಅಧಿಕಾರಿಗಳು ಮತ್ತು ಕಲರಾಜ್ ಮಿಶ್ರಾ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಸಂಶೋಧನೆಗೆ ವಿನಿಯೋಗಿಸಲಾಗುತ್ತದೆಯೇ ಹೊರತು ವಯಕ್ತಿಕ ಬಳಕೆಗಾಗಿ ಅಲ್ಲ ಎಂದು ರಾಜ್ಯಪಾಲರು ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲರಾಜ್‌ ಮಿಶ್ರಾ ಅವರ ಜೀವನ ಚರಿತ್ರೆಯ ಪುಸ್ತಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗಿನ ಸುದೀರ್ಘ ಜೀವನ ಪ್ರಯಾಣವನ್ನು ಕಲರಾಜ್‌ ಮಿಶ್ರಾ ಅವರು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದು, ಬಿಜೆಪಿ ಮತ್ತು ಭಾರತೀಯ ಜನಸಂಘದ ಅಧ್ಯಾಯಗಳು ಅಲ್ಲಲ್ಲಿ ಬಂದು ಹೋಗುತ್ತವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಸ್ತಕದ ಕುರಿತಾಗಿ ಮೆಚ್ಚುಗೆಯ ವಿಮರ್ಶೆಯನ್ನು ಬರೆದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶಾಂದಾರ್‌ ಕೃತಿ (wonderful book) ಎನ್ನುವ ಮೂಲಕ ಪುಸ್ತಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರಾಜ್ಯಪಾಲರ ಜೀವನ  ಕೃತಿ ರಾಜಕೀಯದಿಂದ ಹೊರತಾಗಿಲ್ಲ. ಅವರ ಜೀವನದ ಅನುಭವಗಳಿಗೆ ಮಾತ್ರ ಸೀಮಿತಿವಾಗಿಲ್ಲ. ಪುಸ್ತಕದ 116 ನೇ ಪುಟದಲ್ಲಿ ಬಿಜೆಪಿಯ ಜಾಹೀರಾತನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಗಿ ನಿಂತು ನವ ಭಾರತ ಕಟ್ಟಲು ಕೈಜೋಡಿಸಿ ಎಂದು ಮನವಿ ಮಾಡುವ ಚಿತ್ರದಲ್ಲಿ ಬಿಜೆಪಿಯ ಕಮಲದ ಗುರುತು ದೊಡ್ಡದಾಗಿ ಅಚ್ಚಾಗಿದೆ.

‘ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ನಮ್ಮ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ’ ಎಂಬ ಸಾಲುಗಳು ಜಾಹೀರಾತಿನಲ್ಲಿ ಕಂಡು ಬರುತ್ತದೆ.

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯ ಪುಟ ಸಂಖ್ಯೆ 116 ರಲ್ಲಿ ನೀಡಲಾದ ಬಿಜೆಪಿ ಜಾಹೀರಾತು

ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವ ವ್ಯಕ್ತಿ ರಾಜ್ಯಪಾಲರ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಆರೋಪ ವಿಶ್ವವಿದ್ಯಾಲಯಗಳಿಂದ ಕೇಳಿಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ರಾಜ್ಯಪಾಲರಿಗೆ ಹಿಂದೆ ಬಿಜೆಪಿ, RSS ಜೊತೆ ದೀರ್ಘ ಒಡನಾಟವಿರಬಹದು. ರಾಜ್ಯಪಾಲರ ಸ್ಥಾನಕ್ಕೇರಿದ ಮೇಲೆ ತಮ್ಮ ರಾಜಕೀಯ ನಂಟನ್ನು ಮುಂದುವರೆಸುವುದು ಒಂದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಮತ್ತು ಕರ್ತವ್ಯಲೋಪ. ರಾಜ್ಯಪಾಲರಾದವರು ವಿಶ್ವವಿದ್ಯಾಲಯಗಳ ಗೌರವ ಕುಲಪತಿಗಳಾಗಿರುತ್ತಾರೆ. ತಮ್ಮ ಈ ಪುಸ್ತಕದ ಮೂಲಕ ವಿದ್ಯಾರ್ಥಿ ಸಮುದಾಯಕ್ಕೆ ಗೌರವ ಕುಲಪತಿಗಳು ಯಾವ ಸಂದೇಶವನ್ನು ನೀಡ ಬಯಸುತ್ತಾರೆ? ಎಂಬ ಪ್ರಶ್ನೆಯನ್ನು ಮತ್ತೊಬ್ಬ ಕುಲಪತಿಗಳು ಕೇಳಿದ್ದಾರೆ.

ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಎಂಟರ್‌ಪ್ರೇನರ್‌ಶಿಪ್ (IIME) ಜೈಪುರದ ಖಾತೆಗೆ ಪುಸ್ತಕದ ಹಣ ಸಂದಾಯ ಮಾಡುವಂತೆ ರಾಜಭವನದ ಅಧಿಕಾರಿಗಳು ಕುಲಪತಿಗಳಿಗೆ ಸೂಚಿಸಿದ್ದಾರೆ. IIME ಜೈಪುರ ವಿಜ್ಞಾನ ತಂತ್ರಜ್ಞಾನ ಇಲಾಖೆಯಡಿಯ ಸ್ವಾಯತ್ತ ಶಿಕ್ಷಣ ಸಂಸ್ಥೆ. ಜೀವನ ಚರಿತ್ರೆಯ ಸಹ ಬರಹಗಾರ ಡಾ. ಡಿ.ಕೆ. ಟಕ್ನೆಟ್ ಹಿಂದೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.ಕೆ. ಟಕ್ನೆಟ್‌ ಪತ್ನಿ ಸುಜಾತಾ ಟಕ್ನೆಟ್‌ IIME ಯಲ್ಲಿಯೇ ಮುಖ್ಯ ಸಂಶೋಧಕರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೇಗೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಪ್ರಕಟಿಸಲು ಸಾಧ್ಯ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ವಾರಸ್ಯವೆಂದರೆ ರಾಜಭವನದ ಸಿಬ್ಬಂದಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೀಡಿದ ಪುಸ್ತಕದ ರಶೀದಿಯಲ್ಲಿ ಇನ್ನೂ ಎರಡು ಪುಸ್ತಕಗಳು ಸೇರಿವೆ. ಅವು IIME ಜೈಪುರ ಸಂಸ್ಥೆ 2020 ರಲ್ಲಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಿದ್ದ ಪುಸ್ತಕಗಳು. ಒಂದು ಜೈಪುರ್ ಜೆಮ್‌ ಆಫ್ ಇಂಡಿಯಾ ಮತ್ತು ಮಾರ್ವಾಡಿ ಹೆರಿಟೇಜ್ ಪುಸ್ತಕಗಳು ಅವು. ಈ ಪುಸ್ತಕಗಳು 4,950 ರೂಪಾಯಿ ಮತ್ತು 3,200 ರೂಪಾಯಿ ಬೆಲೆಯನ್ನು ನಿಗದಿಪಡಿಸಲಾಗಿದ್ದು ರಾಜ್ಯಪಾಲರ ಜೀವನಚರಿತ್ರೆಯ ಜೊತೆಗೆ ಉಳಿದ ಪುಸ್ತಕಗಳ ಹಣವನ್ನೂ ಪಾವತಿಸುವಂತೆ ವಿಶ್ವವಿದ್ಯಾಲಯಗಳಿಗೆ ಹೇಳಲಾಗಿದೆ.

ಮೂಲ: ದಿ ವೈರ್‌

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...