Homeಅನುವಾದಿತ ಲೇಖನರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

'ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ' ಎಂಬ ಸಾಲುಗಳು ಜಾಹೀರಾತಿನಲ್ಲಿವೆ.

- Advertisement -
- Advertisement -

ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರ ಜೀವನಚರಿತ್ರೆ ‘ನಿಮಿತ್ತ ಮಾತ್ರ ಹೂಂ ಮೇ’ ಪುಸ್ತಕವು ಜುಲೈ 1 ರಂದು ಅವರ 80 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಗೊಂಡಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜಸ್ಥಾನ ಸ್ಪೀಕರ್ ಸಿ.ಪಿ.ಜೋಶಿಯವರು ಪುಸ್ತಕವನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮವೇನೋ ಚೆನ್ನಾಗಿ ನಡೆಯಿತು. ಅತಿಥಿಗಳು ಕಲ್ರಾಜ್ ಮಿಶ್ರಾ ಜೀವನದ ಪುಟಗಳನ್ನೊಮ್ಮೆ ತಿರುವಿಹಾಕಿದರು. ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಬರಹಕ್ಕೆ ಇಳಿದ ಮಿಶ್ರಾ ಸಾಹೇಬರ ಬದುಕನ್ನು ಕೊಂಡಾಡಿದರು. ಕಾರ್ಯಕ್ರಮ ಇಷ್ಟಕ್ಕೆ ಮುಗಿಯಲಿಲ್ಲ.

ಕಾರ್ಯಕ್ರಮದಲ್ಲಿ ನೆರೆದಿದ್ದ ವಿಶ್ವವಿದ್ಯಾಲಯದ ಕುಲಪತಿಗಳು ಕಾರ್ಯಕ್ರಮದಿಂದ ಹೊರಡುವ ಹೊತ್ತಿಗೆ ಅವರಿಗೆಲ್ಲ ಆಶ್ಚರ್ಯ ಕಾದಿತ್ತು. ಸುಮಾರು 27 ವಿಶ್ವವಿದ್ಯಾಲಯಗಳ ಕುಲಪತಿಗಳು ಒಮ್ಮೆಲೆ ಚಕಿತರಾದರು. ಕಾರಣವಿಷ್ಟೆ ರಾಜಭವನದ ಸಿಬ್ಬಂದಿಯೊಬ್ಬರು ಕುಲಪತಿಗಳ ಕಾರಿಗೆ ರಾಜ್ಯಪಾಲರ ಜೀವನಚರಿತ್ರೆ ಪುಸ್ತಕಗಳ 2 ದೊಡ್ಡ ಬಾಕ್ಸ್‌ಗಳನ್ನು ತಂದಿಟ್ಟರು. ಜೊತೆಗೆ 68,383 ರೂಪಾಯಿ ಮೊತ್ತದ ಬಿಲ್‌ಗಳನ್ನು ಕೂಡ. ಹೀಗೆ ಆ ಪುಸ್ತಕಗಳನ್ನು ಖರೀದಿಸುವಂತೆ ತಾಕೀತು ಮಾಡಲಾಗಿದೆ.

ಇದನ್ನೂ ಓದಿ: 3 ನೇ ಬಾರಿ ಸದನ ನಡೆಸುವ ಪ್ರಸ್ತಾಪ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ!

ರಾಜ್ಯಪಾಲರ ಜೀವನ ಚರಿತ್ರೆಯನ್ನು ಗೋವಿಂದ ರಾಮ್ ಜೈಸ್ವಾಲ್ ಮತ್ತು IIME ಜೈಪುರದ ಸಂಶೋದಕ ಡಾ.ಡಿ.ಕೆ. ಟಕ್ನೆಟ್ ರಚಿಸಿದ್ದಾರೆ.

ರಾಜ್ಯಪಾಲರ ಸಿಬ್ಬಂದಿ ನೀಡಿದ ಬಿಲ್‌ ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಲಭ್ಯವಾಗಿದ್ದು 5 ವಿವಿಧ ಶೀರ್ಷಿಕೆಗಳ ಪುಸ್ತಕದ ಹೆಸರನ್ನು ಬಿಲ್‌ನಲ್ಲಿ ನಮೂದಿಸಲಾಗಿತ್ತು. 10% ರಿಯಾಯತಿ ಜೊತೆಗೆ ಹೆಚ್ಚುವರಿ ಉಚಿತ ಪ್ರತಿಗಳನ್ನು ನೀಡಿರುವ ಮಾಹಿತಿ ರಶೀದಿಯಲ್ಲಿದೆ. ಕುಲಪತಿಗಳೆಲ್ಲ ತಮ್ಮ ನಿವಾಸವನ್ನು ಸೇರಿದ ಮೇಲೆ ಇನ್ನೂ ಒಂದು ಆಶ್ಚರ್ಯ ಅವರಿಗೆ ಕಾದಿತ್ತು. ಅದೇನೆಂದರೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಹೊರತುಪಡಿಸಿ ಬಿಲ್‌ನಲ್ಲಿ ನಮೂದಿಸಲಾದ ಯಾವ ಪುಸ್ತಕವೂ ಬಾಕ್ಸ್‌ನಲ್ಲಿ ಇರಲಿಲ್ಲ. 3999/- ಬೆಲೆಯ ಕಲರಾಜ್‌ ಮಿಶ್ರಾ ಜೀವನ ಚರಿತ್ರೆಯ ಪ್ರತಿಗಳು ಮಾತ್ರ ಕಾರ್ಟ್‌ನಲ್ಲಿ ಇದ್ದವು.

ಇದನ್ನೂ ಓದಿ: ಸಂಪಾದಕರ ಸಂಪಾದಕ ವಿನೋದ್ ಮೆಹ್ತಾರ ಆತ್ಮ ಚರಿತ್ರೆ ಲಖನೌ ಹುಡುಗ…

ರಾಜಸ್ಥಾನ ಪಬ್ಲಿಕ್‌ ಪ್ರೊಕ್ಯುರ್‌ಮೆಂಟ್‌ (RTPP) ಆಕ್ಟ್‌, 2012 ಪುಸ್ತಕ ಖರೀದಿಗೆ ಸ್ಪಷ್ಟ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ವಿಧಿಸಿದೆ. ಹಾಗಿದ್ದರೆ ಏಕಪಕ್ಷೀಯವಾಗಿ ಹೇಗೆ ವಿಶ್ವವಿದ್ಯಾಲಯಗಳು ರಾಜ್ಯಪಾಲರ ಪುಸ್ತಕವನ್ನು ನೇರವಾಗಿ ಖರೀದಿಸಲು ಸಾಧ್ಯ? ತಂತ್ರಜ್ಞಾನ, ವೈದ್ಯಕೀಯ, ಸಂಗೀತ, ಕೃಷಿ ಸೇರಿದಂತೆ ಭಿನ್ನ ಭಿನ್ನ ವಿಷಯಗಳಿಗೆ ಸ್ಥಾಪಿತವಾದ ಈ ವಿಶ್ವವಿದ್ಯಾಲಯಗಳು ದೊಡ್ಡ ಪ್ರಮಾಣದಲ್ಲಿ ರಾಜ್ಯಪಾಲರ ಜೀವನಚರಿತ್ರೆಯನ್ನು ಏಕೆ ಖರೀದಿಸಬೇಕು ಎಂಬ ಚರ್ಚೆ ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಆರಂಭವಾಗಿದೆ.

ರಾಜಭವನ ಅಧಿಕಾರಿಗಳು ಮತ್ತು ಕಲರಾಜ್ ಮಿಶ್ರಾ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ. ಪುಸ್ತಕ ಮಾರಾಟದಿಂದ ಬಂದ ಹಣವನ್ನು ಸಂಶೋಧನೆಗೆ ವಿನಿಯೋಗಿಸಲಾಗುತ್ತದೆಯೇ ಹೊರತು ವಯಕ್ತಿಕ ಬಳಕೆಗಾಗಿ ಅಲ್ಲ ಎಂದು ರಾಜ್ಯಪಾಲರು ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಕಲರಾಜ್‌ ಮಿಶ್ರಾ ಅವರ ಜೀವನ ಚರಿತ್ರೆಯ ಪುಸ್ತಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗಿನ ಸುದೀರ್ಘ ಜೀವನ ಪ್ರಯಾಣವನ್ನು ಕಲರಾಜ್‌ ಮಿಶ್ರಾ ಅವರು ಈ ಪುಸ್ತಕದಲ್ಲಿ ಹಂಚಿಕೊಂಡಿದ್ದು, ಬಿಜೆಪಿ ಮತ್ತು ಭಾರತೀಯ ಜನಸಂಘದ ಅಧ್ಯಾಯಗಳು ಅಲ್ಲಲ್ಲಿ ಬಂದು ಹೋಗುತ್ತವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಸ್ತಕದ ಕುರಿತಾಗಿ ಮೆಚ್ಚುಗೆಯ ವಿಮರ್ಶೆಯನ್ನು ಬರೆದಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶಾಂದಾರ್‌ ಕೃತಿ (wonderful book) ಎನ್ನುವ ಮೂಲಕ ಪುಸ್ತಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ರಾಜ್ಯಪಾಲರ ಜೀವನ  ಕೃತಿ ರಾಜಕೀಯದಿಂದ ಹೊರತಾಗಿಲ್ಲ. ಅವರ ಜೀವನದ ಅನುಭವಗಳಿಗೆ ಮಾತ್ರ ಸೀಮಿತಿವಾಗಿಲ್ಲ. ಪುಸ್ತಕದ 116 ನೇ ಪುಟದಲ್ಲಿ ಬಿಜೆಪಿಯ ಜಾಹೀರಾತನ್ನು ಸೇರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಯಾಗಿ ನಿಂತು ನವ ಭಾರತ ಕಟ್ಟಲು ಕೈಜೋಡಿಸಿ ಎಂದು ಮನವಿ ಮಾಡುವ ಚಿತ್ರದಲ್ಲಿ ಬಿಜೆಪಿಯ ಕಮಲದ ಗುರುತು ದೊಡ್ಡದಾಗಿ ಅಚ್ಚಾಗಿದೆ.

‘ನವ ಭಾರತ ನಿರ್ಮಾಣದ ಅಭಿಯಾನ ಬೆಂಬಲಿಸೋಣ, ಪಕ್ಷ ಸೇರಿ ಮತ್ತು ಈ ಅಭಿಯಾನದಲ್ಲಿ ನಮ್ಮ ಕೈಜೋಡಿಸಿ. ಒಂದೇ ಭಾರತ ಶ್ರೇಷ್ಠ ಭಾರತ’ ಎಂಬ ಸಾಲುಗಳು ಜಾಹೀರಾತಿನಲ್ಲಿ ಕಂಡು ಬರುತ್ತದೆ.

ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯ ಪುಟ ಸಂಖ್ಯೆ 116 ರಲ್ಲಿ ನೀಡಲಾದ ಬಿಜೆಪಿ ಜಾಹೀರಾತು

ಒಂದು ಪಕ್ಷದ ಪರವಾಗಿ ಪ್ರಚಾರ ಮಾಡುವ ವ್ಯಕ್ತಿ ರಾಜ್ಯಪಾಲರ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ಆರೋಪ ವಿಶ್ವವಿದ್ಯಾಲಯಗಳಿಂದ ಕೇಳಿಬಂದಿದೆ.

ಇದನ್ನೂ ಓದಿ: ರಾಹುಲ್ ಗಾಂಧಿಯದ್ದು ಅಸ್ಥಿರ ಮತ್ತು ಅಪಕ್ವ ಗುಣ: ಆತ್ಮಚರಿತ್ರೆಯಲ್ಲಿ ಒಬಾಮ

ರಾಜ್ಯಪಾಲರಿಗೆ ಹಿಂದೆ ಬಿಜೆಪಿ, RSS ಜೊತೆ ದೀರ್ಘ ಒಡನಾಟವಿರಬಹದು. ರಾಜ್ಯಪಾಲರ ಸ್ಥಾನಕ್ಕೇರಿದ ಮೇಲೆ ತಮ್ಮ ರಾಜಕೀಯ ನಂಟನ್ನು ಮುಂದುವರೆಸುವುದು ಒಂದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಮತ್ತು ಕರ್ತವ್ಯಲೋಪ. ರಾಜ್ಯಪಾಲರಾದವರು ವಿಶ್ವವಿದ್ಯಾಲಯಗಳ ಗೌರವ ಕುಲಪತಿಗಳಾಗಿರುತ್ತಾರೆ. ತಮ್ಮ ಈ ಪುಸ್ತಕದ ಮೂಲಕ ವಿದ್ಯಾರ್ಥಿ ಸಮುದಾಯಕ್ಕೆ ಗೌರವ ಕುಲಪತಿಗಳು ಯಾವ ಸಂದೇಶವನ್ನು ನೀಡ ಬಯಸುತ್ತಾರೆ? ಎಂಬ ಪ್ರಶ್ನೆಯನ್ನು ಮತ್ತೊಬ್ಬ ಕುಲಪತಿಗಳು ಕೇಳಿದ್ದಾರೆ.

ಇಂಟರ್‌ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಎಂಟರ್‌ಪ್ರೇನರ್‌ಶಿಪ್ (IIME) ಜೈಪುರದ ಖಾತೆಗೆ ಪುಸ್ತಕದ ಹಣ ಸಂದಾಯ ಮಾಡುವಂತೆ ರಾಜಭವನದ ಅಧಿಕಾರಿಗಳು ಕುಲಪತಿಗಳಿಗೆ ಸೂಚಿಸಿದ್ದಾರೆ. IIME ಜೈಪುರ ವಿಜ್ಞಾನ ತಂತ್ರಜ್ಞಾನ ಇಲಾಖೆಯಡಿಯ ಸ್ವಾಯತ್ತ ಶಿಕ್ಷಣ ಸಂಸ್ಥೆ. ಜೀವನ ಚರಿತ್ರೆಯ ಸಹ ಬರಹಗಾರ ಡಾ. ಡಿ.ಕೆ. ಟಕ್ನೆಟ್ ಹಿಂದೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.ಕೆ. ಟಕ್ನೆಟ್‌ ಪತ್ನಿ ಸುಜಾತಾ ಟಕ್ನೆಟ್‌ IIME ಯಲ್ಲಿಯೇ ಮುಖ್ಯ ಸಂಶೋಧಕರಾಗಿ ಇಂದಿಗೂ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೇಗೆ ರಾಜ್ಯಪಾಲರ ಜೀವನ ಚರಿತ್ರೆಯನ್ನು ಪ್ರಕಟಿಸಲು ಸಾಧ್ಯ ಎಂಬುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ವಾರಸ್ಯವೆಂದರೆ ರಾಜಭವನದ ಸಿಬ್ಬಂದಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೀಡಿದ ಪುಸ್ತಕದ ರಶೀದಿಯಲ್ಲಿ ಇನ್ನೂ ಎರಡು ಪುಸ್ತಕಗಳು ಸೇರಿವೆ. ಅವು IIME ಜೈಪುರ ಸಂಸ್ಥೆ 2020 ರಲ್ಲಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಿದ್ದ ಪುಸ್ತಕಗಳು. ಒಂದು ಜೈಪುರ್ ಜೆಮ್‌ ಆಫ್ ಇಂಡಿಯಾ ಮತ್ತು ಮಾರ್ವಾಡಿ ಹೆರಿಟೇಜ್ ಪುಸ್ತಕಗಳು ಅವು. ಈ ಪುಸ್ತಕಗಳು 4,950 ರೂಪಾಯಿ ಮತ್ತು 3,200 ರೂಪಾಯಿ ಬೆಲೆಯನ್ನು ನಿಗದಿಪಡಿಸಲಾಗಿದ್ದು ರಾಜ್ಯಪಾಲರ ಜೀವನಚರಿತ್ರೆಯ ಜೊತೆಗೆ ಉಳಿದ ಪುಸ್ತಕಗಳ ಹಣವನ್ನೂ ಪಾವತಿಸುವಂತೆ ವಿಶ್ವವಿದ್ಯಾಲಯಗಳಿಗೆ ಹೇಳಲಾಗಿದೆ.

ಮೂಲ: ದಿ ವೈರ್‌

ಅನುವಾದ : ರಾಜೇಶ್‌ ಹೆಬ್ಬಾರ್


ಇದನ್ನೂ ಓದಿ: ಅಕ್ಕಯ್ ಸಂದರ್ಶನ; ಮಂಗಳ ಮತ್ತು ಅಮಂಗಳ ಅನ್ನುವಂತದ್ದೆಲ್ಲ ಬ್ರಾಹ್ಮಣ್ಯ ಪ್ರೇರಿತ; ಇರುವುದು ಮನುಷ್ಯರು ಮತ್ತು ವೈವಿಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...