Homeಮುಖಪುಟರಾಜ್ಯಸಭಾ ಉಪಚುನಾವಣೆ - ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

ರಾಜ್ಯಸಭಾ ಉಪಚುನಾವಣೆ – ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 4 ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ರಾಜ್ಯ ಬಿಜೆಪಿ ನಿರ್ಧಾರ ಮಾಡಿದೆ ಎಂದು ಸೋಮವಾರ ಘೋಷಿಸಿದೆ. ರಾಜ್ಯಸಭಾ ಚುನಾವಣೆಯ ಫಲಿತಾಂಶ ಮೊದಲೆ ನಿರ್ಧಾರ ಆಗಿರುವುದರಿಂದ ಈ ನಿರ್ಧಾರ ತೆಳೆಯಲಾಗಿದೆ ಎಂದು ಅದು ಹೇಳಿದೆ. ಪಕ್ಷದ ಗಮನ ಭವಾನಿಪುರ ವಿಧಾನಸಭಾ ಉಪ-ಚುನಾವಣೆಯ ಕಡೆಗೆ ಕೇಂದ್ರೀಕೃತವಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗದ ಮುಖ್ಯಮಂತ್ರಿಯನ್ನು ಮತ್ತೊಮ್ಮೆ ಆಯ್ಕೆಯಾಗದ ಹಾಗೆ ಮಾಡಲು ಪಕ್ಷ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದರು ಮತ್ತು ಅಲ್ಲಿ ಅವರ ಮಾಜಿ ಆಪ್ತ ಸುವೆಂಧು ಅಧಿಕಾರಿ ವಿರುದ್ದ ಸೋಲುಂಡಿದ್ದರು. ಹೀಗಾಗಿ ಅವರು ತಮ್ಮ ಹಿಂದಿನ ಕ್ಷೇತ್ರವಾದ ಭವಾನಿಪುರದಲ್ಲಿ ಮತ್ತೆ ಉಪಚುನಾವಣೆಗೆ ನಿಂತಿದ್ದಾರೆ. ಅವರು ಬಂಗಾಳದ ಮುಖ್ಯಮಂತ್ರಿಯಾಗಿ ಮುಂದುವರೆಯ ಬೇಕಾಗಿದ್ದರೆ ಈ ಚುನಾವಣೆಯಲ್ಲಿ ವಿಜಯಿಯಾಗಲೇ ಬೇಕಾಗಿದೆ.

ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ. ಫಲಿತಾಂಶವು ಪೂರ್ವನಿರ್ಧರಿತವಾಗಿದೆ. ಆಯ್ಕೆ ಆಗದ ಸಿಎಂ ಮತ್ತೊಮ್ಮೆ ಆಯ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಗಮನ ಕೇಂದ್ರೀಕೃತವಾಗಿದೆ” ಎಂದು ಬಂಗಾಳದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.

ಮಮತಾ ಅವರಿಗೆ ನವೆಂಬರ್ 5 ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇರಬಹುದಾಗಿದೆ. ಹೀಗಾಗಿ ಅವರು ತಮ್ಮ ಗಡುವು ಮುಗಿಯುವುದರ ಒಳಗೆ ಭವಾನಿಪುರ ಕ್ಷೇತ್ರವನ್ನು ಗೆದ್ದು, ಅಲ್ಲಿನ ಶಾಸಕಿಯಾಗಬೇಕಾಗಿದೆ.

ಆಗಸ್ಟ್ 9 ರಂದು ನಡೆದ ರಾಜ್ಯಸಭಾ ಉಪಚುನಾವಣೆಯಲ್ಲಿ ಕೂಡಾ ಬಿಜೆಪಿ ಸ್ಪರ್ಧಿಸಿರಲಿಲ್ಲ, ಇದು ಟಿಎಂಸಿಯ ಜವಾಹರ್ ಸಿರ್ಕಾರ್ ಅವಿರೋಧವಾಗಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತ್ತು.

ಭವಾನಿಪುರ ಕ್ಷೇತ್ರವು ಬಂಗಾಳಿ ಮಾತನಾಡದ 40% ಮತದಾರರನ್ನು ಹೊಂದಿದೆ. ಉಪಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಲು ಬಿಜೆಪಿ ಈ ನಿರ್ದಿಷ್ಟ ಮತದಾರರ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು ಟಿಎಂಸಿಗೆ ಸೇರಿದ್ದ ಸುಶ್ಮಿತಾ ದೇವ್ ಅವರನ್ನು ಪಕ್ಷವು ರಾಜ್ಯಸಭಾ ಉಪಚುನಾವಣೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯಸಭಾ ಸದಸ್ಯನಾಗಿದ್ದ ಟಿಎಂಸಿ ನಾಯಕ ಮಾನಸ್ ಭುನಿಯಾ ಅವರು ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದರು. ಹೀಗಾಗಿ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ರಾಜ್ಯ ಸಭಾ ಸ್ಥಾನ ತೆರವುಗೊಂಡಿತ್ತು. ಬಂಗಾಳದಲ್ಲಿ ಇರುವ 16 ರಾಜ್ಯಸಭಾ ಸ್ಥಾನಗಳಲ್ಲಿ 11 ಟಿಎಂಸಿ ಪಕ್ಷದಲ್ಲಿದೆ. ಕಾಂಗ್ರೆಸ್ ಎರಡು ಮತ್ತು ಸಿಪಿಐ (ಎಂ) ಒಂದು ಸ್ಥಾನಗಳನ್ನು ಹೊಂದಿದೆ.

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಸೆಪ್ಟೆಂಬರ್ 30 ರಂದು ನಡೆಯಲಿದೆ. ಟಿಎಂಸಿಯಿಂದ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿ ಸ್ಪರ್ಧಿಸುತ್ತಿರುವುದರಿಂದ ಕ್ಷೇತ್ರವು ದೇಶದ ಗಮನ ಸೆಳೆದಿದೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಮುಖ್ಯಮಂತ್ರಿ ವಿರುದ್ದ ಬಿಜೆಪಿಯಿಂದ ಸ್ಪರ್ಧಿಸಿರುವ ಟಿಬ್ರೆವಾಲ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಪ್ರಮುಖ ನಾಯಕಿಯಾಗಿರುವ ಟಿಬ್ರೆವಾಲ್ ಅವರು, ವಿಧಾನಸಭಾ ಚುನಾವಣೆಯ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಿದ ಅರ್ಜಿದಾರರಲ್ಲಿ ಒಬ್ಬರಾಗಿದ್ದಾರೆ.

ಸಿಪಿಐಎಂ ಭವಾನಿಪುರದಲ್ಲಿ ಮಮತಾ ವಿರುದ್ದ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ ಸ್ಪರ್ಧಿಸದೆ ಇರಲು ನಿರ್ಧರಿಸಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....