Homeಮುಖಪುಟರಾಜ್ಯಸಭಾ ಉಪಚುನಾವಣೆ - ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

ರಾಜ್ಯಸಭಾ ಉಪಚುನಾವಣೆ – ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 4 ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ರಾಜ್ಯ ಬಿಜೆಪಿ ನಿರ್ಧಾರ ಮಾಡಿದೆ ಎಂದು ಸೋಮವಾರ ಘೋಷಿಸಿದೆ. ರಾಜ್ಯಸಭಾ ಚುನಾವಣೆಯ ಫಲಿತಾಂಶ ಮೊದಲೆ ನಿರ್ಧಾರ ಆಗಿರುವುದರಿಂದ ಈ ನಿರ್ಧಾರ ತೆಳೆಯಲಾಗಿದೆ ಎಂದು ಅದು ಹೇಳಿದೆ. ಪಕ್ಷದ ಗಮನ ಭವಾನಿಪುರ ವಿಧಾನಸಭಾ ಉಪ-ಚುನಾವಣೆಯ ಕಡೆಗೆ ಕೇಂದ್ರೀಕೃತವಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗದ ಮುಖ್ಯಮಂತ್ರಿಯನ್ನು ಮತ್ತೊಮ್ಮೆ ಆಯ್ಕೆಯಾಗದ ಹಾಗೆ ಮಾಡಲು ಪಕ್ಷ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದರು ಮತ್ತು ಅಲ್ಲಿ ಅವರ ಮಾಜಿ ಆಪ್ತ ಸುವೆಂಧು ಅಧಿಕಾರಿ ವಿರುದ್ದ ಸೋಲುಂಡಿದ್ದರು. ಹೀಗಾಗಿ ಅವರು ತಮ್ಮ ಹಿಂದಿನ ಕ್ಷೇತ್ರವಾದ ಭವಾನಿಪುರದಲ್ಲಿ ಮತ್ತೆ ಉಪಚುನಾವಣೆಗೆ ನಿಂತಿದ್ದಾರೆ. ಅವರು ಬಂಗಾಳದ ಮುಖ್ಯಮಂತ್ರಿಯಾಗಿ ಮುಂದುವರೆಯ ಬೇಕಾಗಿದ್ದರೆ ಈ ಚುನಾವಣೆಯಲ್ಲಿ ವಿಜಯಿಯಾಗಲೇ ಬೇಕಾಗಿದೆ.

ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ. ಫಲಿತಾಂಶವು ಪೂರ್ವನಿರ್ಧರಿತವಾಗಿದೆ. ಆಯ್ಕೆ ಆಗದ ಸಿಎಂ ಮತ್ತೊಮ್ಮೆ ಆಯ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಗಮನ ಕೇಂದ್ರೀಕೃತವಾಗಿದೆ” ಎಂದು ಬಂಗಾಳದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.

ಮಮತಾ ಅವರಿಗೆ ನವೆಂಬರ್ 5 ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇರಬಹುದಾಗಿದೆ. ಹೀಗಾಗಿ ಅವರು ತಮ್ಮ ಗಡುವು ಮುಗಿಯುವುದರ ಒಳಗೆ ಭವಾನಿಪುರ ಕ್ಷೇತ್ರವನ್ನು ಗೆದ್ದು, ಅಲ್ಲಿನ ಶಾಸಕಿಯಾಗಬೇಕಾಗಿದೆ.

ಆಗಸ್ಟ್ 9 ರಂದು ನಡೆದ ರಾಜ್ಯಸಭಾ ಉಪಚುನಾವಣೆಯಲ್ಲಿ ಕೂಡಾ ಬಿಜೆಪಿ ಸ್ಪರ್ಧಿಸಿರಲಿಲ್ಲ, ಇದು ಟಿಎಂಸಿಯ ಜವಾಹರ್ ಸಿರ್ಕಾರ್ ಅವಿರೋಧವಾಗಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತ್ತು.

ಭವಾನಿಪುರ ಕ್ಷೇತ್ರವು ಬಂಗಾಳಿ ಮಾತನಾಡದ 40% ಮತದಾರರನ್ನು ಹೊಂದಿದೆ. ಉಪಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಲು ಬಿಜೆಪಿ ಈ ನಿರ್ದಿಷ್ಟ ಮತದಾರರ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು ಟಿಎಂಸಿಗೆ ಸೇರಿದ್ದ ಸುಶ್ಮಿತಾ ದೇವ್ ಅವರನ್ನು ಪಕ್ಷವು ರಾಜ್ಯಸಭಾ ಉಪಚುನಾವಣೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯಸಭಾ ಸದಸ್ಯನಾಗಿದ್ದ ಟಿಎಂಸಿ ನಾಯಕ ಮಾನಸ್ ಭುನಿಯಾ ಅವರು ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದರು. ಹೀಗಾಗಿ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ರಾಜ್ಯ ಸಭಾ ಸ್ಥಾನ ತೆರವುಗೊಂಡಿತ್ತು. ಬಂಗಾಳದಲ್ಲಿ ಇರುವ 16 ರಾಜ್ಯಸಭಾ ಸ್ಥಾನಗಳಲ್ಲಿ 11 ಟಿಎಂಸಿ ಪಕ್ಷದಲ್ಲಿದೆ. ಕಾಂಗ್ರೆಸ್ ಎರಡು ಮತ್ತು ಸಿಪಿಐ (ಎಂ) ಒಂದು ಸ್ಥಾನಗಳನ್ನು ಹೊಂದಿದೆ.

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಸೆಪ್ಟೆಂಬರ್ 30 ರಂದು ನಡೆಯಲಿದೆ. ಟಿಎಂಸಿಯಿಂದ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿ ಸ್ಪರ್ಧಿಸುತ್ತಿರುವುದರಿಂದ ಕ್ಷೇತ್ರವು ದೇಶದ ಗಮನ ಸೆಳೆದಿದೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಮುಖ್ಯಮಂತ್ರಿ ವಿರುದ್ದ ಬಿಜೆಪಿಯಿಂದ ಸ್ಪರ್ಧಿಸಿರುವ ಟಿಬ್ರೆವಾಲ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಪ್ರಮುಖ ನಾಯಕಿಯಾಗಿರುವ ಟಿಬ್ರೆವಾಲ್ ಅವರು, ವಿಧಾನಸಭಾ ಚುನಾವಣೆಯ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಿದ ಅರ್ಜಿದಾರರಲ್ಲಿ ಒಬ್ಬರಾಗಿದ್ದಾರೆ.

ಸಿಪಿಐಎಂ ಭವಾನಿಪುರದಲ್ಲಿ ಮಮತಾ ವಿರುದ್ದ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ ಸ್ಪರ್ಧಿಸದೆ ಇರಲು ನಿರ್ಧರಿಸಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...