Homeಮುಖಪುಟರಾಜ್ಯಸಭಾ ಉಪಚುನಾವಣೆ - ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

ರಾಜ್ಯಸಭಾ ಉಪಚುನಾವಣೆ – ಟಿಎಂಸಿ ವಿರುದ್ಧ ಸ್ಪರ್ಧಿಸದಿರಲು ತಿರ್ಮಾನಿಸಿದ BJP!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 4 ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸದಿರಲು ರಾಜ್ಯ ಬಿಜೆಪಿ ನಿರ್ಧಾರ ಮಾಡಿದೆ ಎಂದು ಸೋಮವಾರ ಘೋಷಿಸಿದೆ. ರಾಜ್ಯಸಭಾ ಚುನಾವಣೆಯ ಫಲಿತಾಂಶ ಮೊದಲೆ ನಿರ್ಧಾರ ಆಗಿರುವುದರಿಂದ ಈ ನಿರ್ಧಾರ ತೆಳೆಯಲಾಗಿದೆ ಎಂದು ಅದು ಹೇಳಿದೆ. ಪಕ್ಷದ ಗಮನ ಭವಾನಿಪುರ ವಿಧಾನಸಭಾ ಉಪ-ಚುನಾವಣೆಯ ಕಡೆಗೆ ಕೇಂದ್ರೀಕೃತವಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗದ ಮುಖ್ಯಮಂತ್ರಿಯನ್ನು ಮತ್ತೊಮ್ಮೆ ಆಯ್ಕೆಯಾಗದ ಹಾಗೆ ಮಾಡಲು ಪಕ್ಷ ಕೆಲಸ ಮಾಡುತ್ತಿದೆ ಎಂದು ಅದು ಹೇಳಿದೆ.

ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಸ್ಪರ್ಧಿಸಿದ್ದರು ಮತ್ತು ಅಲ್ಲಿ ಅವರ ಮಾಜಿ ಆಪ್ತ ಸುವೆಂಧು ಅಧಿಕಾರಿ ವಿರುದ್ದ ಸೋಲುಂಡಿದ್ದರು. ಹೀಗಾಗಿ ಅವರು ತಮ್ಮ ಹಿಂದಿನ ಕ್ಷೇತ್ರವಾದ ಭವಾನಿಪುರದಲ್ಲಿ ಮತ್ತೆ ಉಪಚುನಾವಣೆಗೆ ನಿಂತಿದ್ದಾರೆ. ಅವರು ಬಂಗಾಳದ ಮುಖ್ಯಮಂತ್ರಿಯಾಗಿ ಮುಂದುವರೆಯ ಬೇಕಾಗಿದ್ದರೆ ಈ ಚುನಾವಣೆಯಲ್ಲಿ ವಿಜಯಿಯಾಗಲೇ ಬೇಕಾಗಿದೆ.

ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

“ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ. ಫಲಿತಾಂಶವು ಪೂರ್ವನಿರ್ಧರಿತವಾಗಿದೆ. ಆಯ್ಕೆ ಆಗದ ಸಿಎಂ ಮತ್ತೊಮ್ಮೆ ಆಯ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮ ಗಮನ ಕೇಂದ್ರೀಕೃತವಾಗಿದೆ” ಎಂದು ಬಂಗಾಳದ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಟ್ವೀಟ್ ಮಾಡಿದ್ದಾರೆ.

ಮಮತಾ ಅವರಿಗೆ ನವೆಂಬರ್ 5 ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಇರಬಹುದಾಗಿದೆ. ಹೀಗಾಗಿ ಅವರು ತಮ್ಮ ಗಡುವು ಮುಗಿಯುವುದರ ಒಳಗೆ ಭವಾನಿಪುರ ಕ್ಷೇತ್ರವನ್ನು ಗೆದ್ದು, ಅಲ್ಲಿನ ಶಾಸಕಿಯಾಗಬೇಕಾಗಿದೆ.

ಆಗಸ್ಟ್ 9 ರಂದು ನಡೆದ ರಾಜ್ಯಸಭಾ ಉಪಚುನಾವಣೆಯಲ್ಲಿ ಕೂಡಾ ಬಿಜೆಪಿ ಸ್ಪರ್ಧಿಸಿರಲಿಲ್ಲ, ಇದು ಟಿಎಂಸಿಯ ಜವಾಹರ್ ಸಿರ್ಕಾರ್ ಅವಿರೋಧವಾಗಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತ್ತು.

ಭವಾನಿಪುರ ಕ್ಷೇತ್ರವು ಬಂಗಾಳಿ ಮಾತನಾಡದ 40% ಮತದಾರರನ್ನು ಹೊಂದಿದೆ. ಉಪಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಲು ಬಿಜೆಪಿ ಈ ನಿರ್ದಿಷ್ಟ ಮತದಾರರ ಮೇಲೆ ಕಣ್ಣಿಟ್ಟಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಲಿರುವ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ

ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು ಟಿಎಂಸಿಗೆ ಸೇರಿದ್ದ ಸುಶ್ಮಿತಾ ದೇವ್ ಅವರನ್ನು ಪಕ್ಷವು ರಾಜ್ಯಸಭಾ ಉಪಚುನಾವಣೆಗೆ ನಾಮನಿರ್ದೇಶನ ಮಾಡಿದೆ. ರಾಜ್ಯಸಭಾ ಸದಸ್ಯನಾಗಿದ್ದ ಟಿಎಂಸಿ ನಾಯಕ ಮಾನಸ್ ಭುನಿಯಾ ಅವರು ವಿಧಾನಸಭಾ ಚುನಾವಣೆಗೆ ನಿಂತು ಗೆದ್ದಿದ್ದರು. ಹೀಗಾಗಿ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದಾಗಿ ರಾಜ್ಯ ಸಭಾ ಸ್ಥಾನ ತೆರವುಗೊಂಡಿತ್ತು. ಬಂಗಾಳದಲ್ಲಿ ಇರುವ 16 ರಾಜ್ಯಸಭಾ ಸ್ಥಾನಗಳಲ್ಲಿ 11 ಟಿಎಂಸಿ ಪಕ್ಷದಲ್ಲಿದೆ. ಕಾಂಗ್ರೆಸ್ ಎರಡು ಮತ್ತು ಸಿಪಿಐ (ಎಂ) ಒಂದು ಸ್ಥಾನಗಳನ್ನು ಹೊಂದಿದೆ.

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಸೆಪ್ಟೆಂಬರ್ 30 ರಂದು ನಡೆಯಲಿದೆ. ಟಿಎಂಸಿಯಿಂದ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಲ್ಲಿ ಸ್ಪರ್ಧಿಸುತ್ತಿರುವುದರಿಂದ ಕ್ಷೇತ್ರವು ದೇಶದ ಗಮನ ಸೆಳೆದಿದೆ. ಚುನಾವಣೆಯಲ್ಲಿ ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸಲು ಬಿಜೆಪಿ ಪಕ್ಷದ ನಾಯಕಿ ಪ್ರಿಯಾಂಕಾ ಟಿಬ್ರೆವಾಲ್ ಅವರನ್ನು ಕಣಕ್ಕಿಳಿಸಿದೆ.

ಮುಖ್ಯಮಂತ್ರಿ ವಿರುದ್ದ ಬಿಜೆಪಿಯಿಂದ ಸ್ಪರ್ಧಿಸಿರುವ ಟಿಬ್ರೆವಾಲ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿಯ ಪ್ರಮುಖ ನಾಯಕಿಯಾಗಿರುವ ಟಿಬ್ರೆವಾಲ್ ಅವರು, ವಿಧಾನಸಭಾ ಚುನಾವಣೆಯ ನಂತರ ನಡೆದಿದೆ ಎನ್ನಲಾಗಿರುವ ಹಿಂಸಾಚಾರದ ಬಗ್ಗೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ಪ್ರಕರಣ ದಾಖಲಿಸಿದ ಅರ್ಜಿದಾರರಲ್ಲಿ ಒಬ್ಬರಾಗಿದ್ದಾರೆ.

ಸಿಪಿಐಎಂ ಭವಾನಿಪುರದಲ್ಲಿ ಮಮತಾ ವಿರುದ್ದ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್‌ ಸ್ಪರ್ಧಿಸದೆ ಇರಲು ನಿರ್ಧರಿಸಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಎದುರು ಸ್ಪರ್ಧಿಸದಿರಲು ಕಾಂಗ್ರೆಸ್ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...