Homeಕರ್ನಾಟಕರಾಜ್ಯಸಭೆ: ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಆಯ್ಕೆ

ರಾಜ್ಯಸಭೆ: ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಆಯ್ಕೆ

ಇವರು ಸ್ಪ್ಯಾನ್ ಪ್ರಿಂಟ್ ಎಂಬ‌ ಮುದ್ರಣ ಸಂಸ್ಥೆ ಹೊಂದಿದ್ದು, ಬಿಜೆಪಿ ಮತ್ತು ಸಂಘ ಪರಿವಾರದ ಕರಪತ್ರಗಳನ್ನು ಮುದ್ರಿಸಿ ಕೊಡುತ್ತಿದ್ದರು

- Advertisement -
- Advertisement -

ಕರ್ನಾಟಕದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಆಯ್ಕೆಯಾಗಿದ್ದು, ಅಶೋಕ್ ಗಸ್ತಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಇವರನ್ನು ಅಯ್ಕೆ ಮಾಡಲಾಗಿದೆ. ಈ ಸ್ಥಾನಕ್ಕೆ ಡಿಸಂಬರ್ 1 ರಂದು ಉಪಚುನಾವಣೆ ನಡೆಯಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಡಾ.ಸುಧಾಕರ್, “ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ.ಕೆ.ನಾರಾಯಣ (ಸ್ಪ್ಯಾನ್ ಪ್ರಿಂಟ್) ಅವರಿಗೆ ಹ್ರತ್ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಬೆಂಗಳೂರಿನಲ್ಲಿರುವ ಡಾ.ಕೆ.ನಾರಾಯಣ ದೇವಾಂಗ ಸಮುದಾಯದಕ್ಕೆ ಸೇರಿದವರಾಗಿದ್ದು, ಮುದ್ರಣ ಉದ್ಯಮ ನಡೆಸುತ್ತಿದ್ದಾರೆ.‌ ಸ್ಪ್ಯಾನ್ ಪ್ರಿಂಟ್ ಎಂಬ‌ ಮುದ್ರಣ ಸಂಸ್ಥೆ ಹೊಂದಿದ್ದು, ಬಿಜೆಪಿ ಮತ್ತು ಸಂಘ ಪರಿವಾರದ ಕರಪತ್ರಗಳನ್ನು ಮುದ್ರಿಸಿ ಕೊಡುತ್ತಿದ್ದರು.‌ ಬೆಂಗಳೂರಿನಲ್ಲಿ 1982ರಲ್ಲಿ ಮೊದಲ ಬಾರಿಗೆ ಮಲ್ಟಿ ಕಲರ್‌ ಪ್ರಿಂಟಿಂಗ್‌ ತಂತ್ರಜ್ಞಾನವನ್ನು ಪರಿಚಯಿಸಿ, 25 ವರ್ಷಗಳಿಂದ ಸಂಸ್ಕೃತ ಮಾಸ ಪತ್ರಿಕೆ ‘ಸಂಭಾಷಣ ಸಂದೇಶ’ವನ್ನು ಪ್ರಕಟಿಸುತ್ತಿದ್ದಾರೆ. ಹಿಂದೂ ಸೇವಾ ಪ್ರತಿಷ್ಠಾನದ ಖಜಾಂಚಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಇವರಿಗೆ ಗೌರವ ಡಾಕ್ಟರೇಟ್ ಕೂಡ‌ ಬಂದಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಖರ್ಗೆ ಗಟ್ಟಿ ದನಿಯಾಗಲಿದ್ದಾರೆ: ನಾಮಪತ್ರ ಸಲ್ಲಿಕೆ ವೇಳೆ ಸಿದ್ದು ಹೇಳಿಕೆ

ರಾಜ್ಯಸಭೆ ಉಪಚುನಾವಣೆಗೆ ನವೆಂಬರ್‌ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ನ.23 ಕೊನೆಯ ದಿನವಾಗಿದೆ.

ಜೂನ್‌ 19ರಂದು ನಡೆಯಬೇಕಿದ್ದ ಕರ್ನಾಟಕದ ನಾಲ್ಕು ಸ್ಥಾನಗಳ ರಾಜ್ಯಸಭಾ ಚುನಾಚಣೆಯು ನಾಲ್ಕಕ್ಕಿಂತ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ನಿರೀಕ್ಷೆಯಿಂತೆ ಎಲ್ಲರೂ (ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಹೆಚ್.ಡಿ. ದೇವೇಗೌಡ ಮತ್ತು ಬಿಜೆಪಿಯ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದ್ದರು.

ಇದನ್ನೂ ಓದಿ: ನೂತನ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೊನಾದಿಂದ ನಿಧನ

ಇವರಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಸಂಸದ ಅಶೋಕ್ ಗಸ್ತಿ (55) ಕೊರೊನಾದಿಂದ ಸೆಪ್ಟಂಬರ್ 17 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಹಾಗಾಗಿ ಈ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಯಯಾತಿ, ಯಡಿಯೂರಪ್ಪ ಮತ್ತು ಬಿಜೆಪಿ: ಮುಂದಿನ ನಾಯಕತ್ವದ ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...