Homeಕರ್ನಾಟಕರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

ರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

- Advertisement -
- Advertisement -

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಭಾರತದ ಮಾಜಿ ಸಿಜೆಐ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ವಿಶೇಷ ಹಕ್ಕು ನೋಟಿಸ್‌ಗೆ ಕಾರಣವಾಗಿವೆ.

“ನನಗೆ ಅನಿಸಿದಾಗಲೆಲ್ಲಾ ನಾನು ರಾಜ್ಯಸಭೆಗೆ ಹೋಗುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಎನ್‌ಡಿಟಿವಿಗೆ ಸಂದರ್ಶನದಲ್ಲಿ ಹೇಳುತ್ತಾ ತಮ್ಮ ಆತ್ಮಚರಿತ್ರೆಯಾದ “ಜಸ್ಟೀಸ್ ಫಾರ್ ದಿ ಜಡ್ಜ್” ಕುರಿತು ಮಾತನಾಡಿದ್ದರು.

“ನ್ಯಾಯಮೂರ್ತಿ ಗೊಗೊಯ್ ಅವರ ಹೇಳಿಕೆಗಳು ರಾಜ್ಯಸಭೆಯನ್ನು ಅವಹೇಳನ ಮಾಡಿವೆ. ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ವಿಶೇಷ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ನೋಟೀಸ್ ಸಲ್ಲಿಸಿದೆ. ರಂಜನ್‌ ಗೊಗೊಯ್‌ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಈ ನೋಟಿಸ್‌ ಪ್ರಸ್ತಾಪಿಸಿದೆ.

“ಒಂದು ಅಥವಾ ಎರಡು ಸೆಷನ್‌ಗಳಿಗೆ ಕೋವಿಡ್‌ ಕಾರಣದಿಂದಾಗಿ (ವೈದ್ಯಕೀಯ ಸಲಹೆಯ ಆಧಾರದ ಮೇಲೆ) ನಾನು ಅಧಿವೇಶನಕ್ಕೆ ಹಾಜರಾಗಿಲ್ಲ. ಇವತ್ತಿಗೂ ನಾನು ಈ ವಿಚಾರವಾಗಿ ಆರಾಮವಾಗಿ ಇಲ್ಲ ಎನ್ನುತ್ತೇನೆ. ಸಾರ್ವಜನಿಕ ಅಂತರದ ನಿಯಮಗಳನ್ನು ಜಾರಿಗೊಳಿಸಲಾಗಿದೆ, ಆದರೆ ಅವುಗಳನ್ನು ಪಾಲಿಸಲಾಗುತ್ತಿಲ್ಲ. ಕುಳಿತುಕೊಳ್ಳಲು ಮಾಡಲಾಗಿರುವ ವ್ಯವಸ್ಥೆ ನನಗೆ ಆರಾಮದಾಯಕವೆನಿಸುತ್ತಿಲ್ಲ. ಇದನ್ನು ಒತ್ತು ಹೇಳುವುದಾದರೆ ನಾನು ರಾಜ್ಯಸಭಾಕ್ಕೆ ನನಗೆ ಅನಿಸಿದಾಗ ಹೋಗುತ್ತೇನೆ” ಎಂದಿದ್ದರು ಗೊಗೊಯ್‌.

ಮುಂದುವರಿದು, “ಅತ್ಯಂತ ಮಹತ್ವದ ವಿಷಯಗಳ ಬಗ್ಗೆ ಮಾತನಾಡಬೇಕು ಎಂದು ನಾನು ಭಾವಿಸಿದಾಗ ಹೋಗುತ್ತೇನೆ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್‌ಗೆ ನಾನು ಒಳಪಡುವುದಿಲ್ಲ. ಪಕ್ಷದ ಸದಸ್ಯರಿಗೆ ಬರಲು ಸೂಚಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ. ನಾನು ನನ್ನ ಆಯ್ಕೆಯ ಮೇರೆಗೆ ಅಲ್ಲಿಗೆ ಹೋಗುತ್ತೇನೆ ಮತ್ತು ನನ್ನ ಆಯ್ಕೆಯ ಮೇಲೆ ಹೊರಬರುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಸಂದರ್ಶನದಲ್ಲಿ ಹೇಳಿದ್ದರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಾಗಿನಿಂದ ಅವರು ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಚ್ 2020ರಿಂದ ಈವರೆಗೆ ನಡೆದ ಎಲ್ಲಾ ಸಭೆಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂಸತ್ತಿನ ದಾಖಲೆಗಳು ತೋರಿಸುತ್ತವೆ.

ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ರಾಜ್ಯಸಭೆಗೆ ಸೇರುವ ತಮ್ಮ ನಿರ್ಧಾರವನ್ನು ನ್ಯಾಯಮೂರ್ತಿ ಗೊಗೊಯ್ ತೆಗೆದುಕೊಂಡರು. ಇತ್ತೀಚೆಗೆ ಪ್ರಕಟಿಸಲಾಗಿರುವ ಅವರ ಆತ್ಮಚರಿತ್ರೆಯಲ್ಲೂ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಾನು ಸೇರಿರುವ ನ್ಯಾಯಾಂಗ ಮತ್ತು ಈಶಾನ್ಯ ಪ್ರದೇಶದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದ್ದರಿಂದ ಹಿಂಜರಿಕೆಯಿಲ್ಲದೆ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...